ಸುದ್ದಿಗಳು

ಪೈಂಬೆಚ್ಚಾಲು- ಅಜ್ಜಾವರ ರಸ್ತೆ ಅವ್ಯವಸ್ಥೆ | ಊರ ಮುಖಂಡರಿಂದಲೇ ದುರಸ್ತಿ ಭಾಗ್ಯ….!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಕೋಲ್ಚಾರಿನಿಂದ ಪೈಂಬೆಚ್ಚಾಲು ಮೂಲಕ ಅಜ್ಜಾವರ ಗ್ರಾಮವನ್ನು  ಸಂಪರ್ಕಿಸುವ ಜಿಲ್ಲಾ ಪಂಚಾಯತ್ ರಸ್ತೆ ಅವ್ಯವಸ್ಥೆಯಿಂದ ಕೂಡಿದೆ. ಇದೀಗ ಈ ರಸ್ತೆಯನ್ನು ಈಚೆಗೆ ಊರಿನ ಪ್ರಮುಖರಾದ ಟಿ ಹೆಚ್ ಹಸೈನಾರ್ ಹಾಜಿ ಅವರ ನೇತೃತ್ವದಲ್ಲಿ ದುರಸ್ತಿ ಮಾಡಲಾಯಿತು.

ಕೋಲ್ಚಾರಿನಿಂದ ಅಜ್ಜಾವರ ತನಕದ ಸುಮಾರು ಐದು ಕಿ.ಮೀ.ಉದ್ದವಿರುವ ಈ ರಸ್ತೆಗೆ ಇನ್ನೂ ಕೂಡಾ ಕಾಯಕಲ್ಪ ಒದಗಿ ಬಂದಿಲ್ಲ.  ಈ ರಸ್ತೆಗೆ ಪೈಂಬೆಚ್ಚಾಲು ಪ್ರದೇಶದ ಒಂದಷ್ಟು ಭಾಗದಲ್ಲಿ ಕಾಂಕ್ರೀಟೀಕರಣ ಮಾಡಲಾಗಿದ್ದು ರಸ್ತೆಗೆ ಸೂಕ್ತ ಚರಂಡಿ ವ್ಯವಸ್ತೆ ಇಲ್ಲದ ಕಾರಣ ಮಳೆಗಾಲದಲ್ಲಿ ನೀರು  ಹರಿದು ಕಾಂಕ್ರೀಟ್ ರಸ್ತೆಯು ಕೂಡಾ    ಹಾಳಾಗಿರುತ್ತದೆ.  ಇನ್ನು ಉಳಿದ ಕಡೆ ಇದುವರೆಗೂ ಯಾವುದೇ ರೀತಿಯ ಅಭಿವೃದ್ಧಿ ಕಾಣದ ಮಣ್ಣು ರಸ್ತಯಿದ್ದು ಮಳೆಗಾಲ ಬಂತೆಂದರೆ ಪೂರ್ತಿ ಕೆಸರುಮಯವಾಗಿ ಸಂಚಾರಕ್ಕೆ ಅಯೋಗ್ಯವಾಗಿರುತ್ತದೆ. ಈ ಪ್ರದೇಶದ ಜನರು ತುರ್ತು ಅಗತ್ಯಗಳಿಗಾಗಿ ನಗರವನ್ನು ಸಂಪರ್ಕಿಸಲು ಈ ರಸ್ತೆಯನ್ನು ಬಳಸಬೇಕಾಗಿದ್ದು ಮಳೆಗಾಲದಲ್ಲಿ ತೀರಾ ಸಂಕಷ್ಟ ಅನುಭವಿಸಬೇಕಾಗುತ್ತದೆ. ರಸ್ತೆ ಸಮಸ್ಯೆಯ ಕಾರಣ ಈ ಪ್ರದೇಶಕ್ಕೆ  ಸಾರ್ವಜನಿಕ ಬಸ್ಸು ಸಂಚಾರವು ಮಳೆಗಾಲದಲ್ಲಿ ಸಮರ್ಪಕವಾಗಿರದ ಕಾರಣ ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಂಕಷ್ಟ ಅನುಭವಿಸಬೇಕಾಗುತ್ತದೆ.

Advertisement
Advertisement
ಇದನ್ನು ಮನಗಂಡ ಊರಿನ ಮುಖಂಡರಾದ ಹಸೈನಾರ್ ಹಾಜಿಯವರು ತಮ್ಮ ಸ್ವಂತ ಖರ್ಚಿನಲ್ಲಿ ಜನರನ್ನು , ಕೆಲಸದ ಜನರನ್ನು ಸೇರಿಸಿ ಅಲ್ಲಲ್ಲಿ ರಸ್ತೆ ಗುಂಡಿಗಳಿಗೆ ಕಲ್ಲು, ಮಣ್ಣುಗಳನ್ನು ಹಾಕಿ ,ಚರಂಡಿ ದುರಸ್ತಿ ಮಾಡುವ  ಮೂಲಕ ರಸ್ತೆ ದುರಸ್ತಿ ಕಾರ್ಯ  ಮಾಡಿಸಿದ್ದಾರೆ. ಪ್ರತಿಯೊಂದಕ್ಕೂ ಸುಳ್ಯವನ್ನು ಅವಲಂಬಿಸುವ ಈ ಭಾಗದ ಜನತೆಗೆ ಈ ರಸ್ತೆಯು ಅತೀ ಹತ್ತಿರದ ರಸ್ತೆ ಮಾತ್ರವಲ್ಲದೆ ಅಜ್ಜಾವರ ದಿಂದ ಸುಳ್ಯದವರೆಗೆ ಉತ್ತಮ ರಸ್ತೆಯಿರುವ ಕಾರಣ ಈ ರಸ್ತೆಯನ್ನೇ ಹೆಚ್ಚಾಗಿ ಬಳಸುತ್ತಿದ್ದಾರೆ. ಈ ರಸ್ತೆಗೆ ಸರಕಾರದಿಂದ ಯಾವುದೇ ರೀತಿಯ ಅನುದಾನ ಸಿಗದ ಕಾರಣ ಅಭಿವೃದ್ಧಿ ಕಾಣದೆ ಬಾಕಿ ಉಳಿದಿದೆ ಎಂದು ಸ್ಥಳೀಯರು ಹೇಳುತ್ತಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ

ರಾಮನಗರ ಜಿಲ್ಲೆಯಲ್ಲಿ  ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…

1 day ago

ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ

ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…

1 day ago

ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ

ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…

1 day ago

ಹಾವೇರಿ ಜಿಲ್ಲೆಯಲ್ಲಿ ಹೆಚ್ಚುವರಿ ಯೂರಿಯಾ ರಸಗೊಬ್ಬರ ಪೂರೈಸುವಂತೆ  ಬೇಡಿಕೆ

ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ  ಪೂರೈಕೆಯಾಗಿದ್ದು,…

1 day ago

ರಾಜ್ಯಕ್ಕೆ ಅಗತ್ಯ ರಸಗೊಬ್ಬರ ಪೂರೈಸುವಂತೆ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯ

ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…

1 day ago

ಅಮರನಾಥ ಯಾತ್ರೆ ಮುಂದುವರಿಕೆ | 9, 482 ಯಾತ್ರಿಕರಿಂದ ಪೂಜೆ ಸಲ್ಲಿಕೆ | 3.52 ಲಕ್ಷ ತಲುಪಿದ ಭಕ್ತರ ಸಂಖ್ಯೆ

ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ  ಸುಮಾರು…

1 day ago