Advertisement
ಸುದ್ದಿಗಳು

ಪೈಂಬೆಚ್ಚಾಲು- ಅಜ್ಜಾವರ ರಸ್ತೆ ಅವ್ಯವಸ್ಥೆ | ಊರ ಮುಖಂಡರಿಂದಲೇ ದುರಸ್ತಿ ಭಾಗ್ಯ….!

Share
ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಕೋಲ್ಚಾರಿನಿಂದ ಪೈಂಬೆಚ್ಚಾಲು ಮೂಲಕ ಅಜ್ಜಾವರ ಗ್ರಾಮವನ್ನು  ಸಂಪರ್ಕಿಸುವ ಜಿಲ್ಲಾ ಪಂಚಾಯತ್ ರಸ್ತೆ ಅವ್ಯವಸ್ಥೆಯಿಂದ ಕೂಡಿದೆ. ಇದೀಗ ಈ ರಸ್ತೆಯನ್ನು ಈಚೆಗೆ ಊರಿನ ಪ್ರಮುಖರಾದ ಟಿ ಹೆಚ್ ಹಸೈನಾರ್ ಹಾಜಿ ಅವರ ನೇತೃತ್ವದಲ್ಲಿ ದುರಸ್ತಿ ಮಾಡಲಾಯಿತು.

ಕೋಲ್ಚಾರಿನಿಂದ ಅಜ್ಜಾವರ ತನಕದ ಸುಮಾರು ಐದು ಕಿ.ಮೀ.ಉದ್ದವಿರುವ ಈ ರಸ್ತೆಗೆ ಇನ್ನೂ ಕೂಡಾ ಕಾಯಕಲ್ಪ ಒದಗಿ ಬಂದಿಲ್ಲ.  ಈ ರಸ್ತೆಗೆ ಪೈಂಬೆಚ್ಚಾಲು ಪ್ರದೇಶದ ಒಂದಷ್ಟು ಭಾಗದಲ್ಲಿ ಕಾಂಕ್ರೀಟೀಕರಣ ಮಾಡಲಾಗಿದ್ದು ರಸ್ತೆಗೆ ಸೂಕ್ತ ಚರಂಡಿ ವ್ಯವಸ್ತೆ ಇಲ್ಲದ ಕಾರಣ ಮಳೆಗಾಲದಲ್ಲಿ ನೀರು  ಹರಿದು ಕಾಂಕ್ರೀಟ್ ರಸ್ತೆಯು ಕೂಡಾ    ಹಾಳಾಗಿರುತ್ತದೆ.  ಇನ್ನು ಉಳಿದ ಕಡೆ ಇದುವರೆಗೂ ಯಾವುದೇ ರೀತಿಯ ಅಭಿವೃದ್ಧಿ ಕಾಣದ ಮಣ್ಣು ರಸ್ತಯಿದ್ದು ಮಳೆಗಾಲ ಬಂತೆಂದರೆ ಪೂರ್ತಿ ಕೆಸರುಮಯವಾಗಿ ಸಂಚಾರಕ್ಕೆ ಅಯೋಗ್ಯವಾಗಿರುತ್ತದೆ. ಈ ಪ್ರದೇಶದ ಜನರು ತುರ್ತು ಅಗತ್ಯಗಳಿಗಾಗಿ ನಗರವನ್ನು ಸಂಪರ್ಕಿಸಲು ಈ ರಸ್ತೆಯನ್ನು ಬಳಸಬೇಕಾಗಿದ್ದು ಮಳೆಗಾಲದಲ್ಲಿ ತೀರಾ ಸಂಕಷ್ಟ ಅನುಭವಿಸಬೇಕಾಗುತ್ತದೆ. ರಸ್ತೆ ಸಮಸ್ಯೆಯ ಕಾರಣ ಈ ಪ್ರದೇಶಕ್ಕೆ  ಸಾರ್ವಜನಿಕ ಬಸ್ಸು ಸಂಚಾರವು ಮಳೆಗಾಲದಲ್ಲಿ ಸಮರ್ಪಕವಾಗಿರದ ಕಾರಣ ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಂಕಷ್ಟ ಅನುಭವಿಸಬೇಕಾಗುತ್ತದೆ.

Advertisement
Advertisement
ಇದನ್ನು ಮನಗಂಡ ಊರಿನ ಮುಖಂಡರಾದ ಹಸೈನಾರ್ ಹಾಜಿಯವರು ತಮ್ಮ ಸ್ವಂತ ಖರ್ಚಿನಲ್ಲಿ ಜನರನ್ನು , ಕೆಲಸದ ಜನರನ್ನು ಸೇರಿಸಿ ಅಲ್ಲಲ್ಲಿ ರಸ್ತೆ ಗುಂಡಿಗಳಿಗೆ ಕಲ್ಲು, ಮಣ್ಣುಗಳನ್ನು ಹಾಕಿ ,ಚರಂಡಿ ದುರಸ್ತಿ ಮಾಡುವ  ಮೂಲಕ ರಸ್ತೆ ದುರಸ್ತಿ ಕಾರ್ಯ  ಮಾಡಿಸಿದ್ದಾರೆ. ಪ್ರತಿಯೊಂದಕ್ಕೂ ಸುಳ್ಯವನ್ನು ಅವಲಂಬಿಸುವ ಈ ಭಾಗದ ಜನತೆಗೆ ಈ ರಸ್ತೆಯು ಅತೀ ಹತ್ತಿರದ ರಸ್ತೆ ಮಾತ್ರವಲ್ಲದೆ ಅಜ್ಜಾವರ ದಿಂದ ಸುಳ್ಯದವರೆಗೆ ಉತ್ತಮ ರಸ್ತೆಯಿರುವ ಕಾರಣ ಈ ರಸ್ತೆಯನ್ನೇ ಹೆಚ್ಚಾಗಿ ಬಳಸುತ್ತಿದ್ದಾರೆ. ಈ ರಸ್ತೆಗೆ ಸರಕಾರದಿಂದ ಯಾವುದೇ ರೀತಿಯ ಅನುದಾನ ಸಿಗದ ಕಾರಣ ಅಭಿವೃದ್ಧಿ ಕಾಣದೆ ಬಾಕಿ ಉಳಿದಿದೆ ಎಂದು ಸ್ಥಳೀಯರು ಹೇಳುತ್ತಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

5 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

6 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

6 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

6 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

6 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

6 hours ago