ಕೋಲ್ಚಾರಿನಿಂದ ಅಜ್ಜಾವರ ತನಕದ ಸುಮಾರು ಐದು ಕಿ.ಮೀ.ಉದ್ದವಿರುವ ಈ ರಸ್ತೆಗೆ ಇನ್ನೂ ಕೂಡಾ ಕಾಯಕಲ್ಪ ಒದಗಿ ಬಂದಿಲ್ಲ. ಈ ರಸ್ತೆಗೆ ಪೈಂಬೆಚ್ಚಾಲು ಪ್ರದೇಶದ ಒಂದಷ್ಟು ಭಾಗದಲ್ಲಿ ಕಾಂಕ್ರೀಟೀಕರಣ ಮಾಡಲಾಗಿದ್ದು ರಸ್ತೆಗೆ ಸೂಕ್ತ ಚರಂಡಿ ವ್ಯವಸ್ತೆ ಇಲ್ಲದ ಕಾರಣ ಮಳೆಗಾಲದಲ್ಲಿ ನೀರು ಹರಿದು ಕಾಂಕ್ರೀಟ್ ರಸ್ತೆಯು ಕೂಡಾ ಹಾಳಾಗಿರುತ್ತದೆ. ಇನ್ನು ಉಳಿದ ಕಡೆ ಇದುವರೆಗೂ ಯಾವುದೇ ರೀತಿಯ ಅಭಿವೃದ್ಧಿ ಕಾಣದ ಮಣ್ಣು ರಸ್ತಯಿದ್ದು ಮಳೆಗಾಲ ಬಂತೆಂದರೆ ಪೂರ್ತಿ ಕೆಸರುಮಯವಾಗಿ ಸಂಚಾರಕ್ಕೆ ಅಯೋಗ್ಯವಾಗಿರುತ್ತದೆ. ಈ ಪ್ರದೇಶದ ಜನರು ತುರ್ತು ಅಗತ್ಯಗಳಿಗಾಗಿ ನಗರವನ್ನು ಸಂಪರ್ಕಿಸಲು ಈ ರಸ್ತೆಯನ್ನು ಬಳಸಬೇಕಾಗಿದ್ದು ಮಳೆಗಾಲದಲ್ಲಿ ತೀರಾ ಸಂಕಷ್ಟ ಅನುಭವಿಸಬೇಕಾಗುತ್ತದೆ. ರಸ್ತೆ ಸಮಸ್ಯೆಯ ಕಾರಣ ಈ ಪ್ರದೇಶಕ್ಕೆ ಸಾರ್ವಜನಿಕ ಬಸ್ಸು ಸಂಚಾರವು ಮಳೆಗಾಲದಲ್ಲಿ ಸಮರ್ಪಕವಾಗಿರದ ಕಾರಣ ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಂಕಷ್ಟ ಅನುಭವಿಸಬೇಕಾಗುತ್ತದೆ.
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…
ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…