ಕೋಲ್ಚಾರಿನಿಂದ ಅಜ್ಜಾವರ ತನಕದ ಸುಮಾರು ಐದು ಕಿ.ಮೀ.ಉದ್ದವಿರುವ ಈ ರಸ್ತೆಗೆ ಇನ್ನೂ ಕೂಡಾ ಕಾಯಕಲ್ಪ ಒದಗಿ ಬಂದಿಲ್ಲ. ಈ ರಸ್ತೆಗೆ ಪೈಂಬೆಚ್ಚಾಲು ಪ್ರದೇಶದ ಒಂದಷ್ಟು ಭಾಗದಲ್ಲಿ ಕಾಂಕ್ರೀಟೀಕರಣ ಮಾಡಲಾಗಿದ್ದು ರಸ್ತೆಗೆ ಸೂಕ್ತ ಚರಂಡಿ ವ್ಯವಸ್ತೆ ಇಲ್ಲದ ಕಾರಣ ಮಳೆಗಾಲದಲ್ಲಿ ನೀರು ಹರಿದು ಕಾಂಕ್ರೀಟ್ ರಸ್ತೆಯು ಕೂಡಾ ಹಾಳಾಗಿರುತ್ತದೆ. ಇನ್ನು ಉಳಿದ ಕಡೆ ಇದುವರೆಗೂ ಯಾವುದೇ ರೀತಿಯ ಅಭಿವೃದ್ಧಿ ಕಾಣದ ಮಣ್ಣು ರಸ್ತಯಿದ್ದು ಮಳೆಗಾಲ ಬಂತೆಂದರೆ ಪೂರ್ತಿ ಕೆಸರುಮಯವಾಗಿ ಸಂಚಾರಕ್ಕೆ ಅಯೋಗ್ಯವಾಗಿರುತ್ತದೆ. ಈ ಪ್ರದೇಶದ ಜನರು ತುರ್ತು ಅಗತ್ಯಗಳಿಗಾಗಿ ನಗರವನ್ನು ಸಂಪರ್ಕಿಸಲು ಈ ರಸ್ತೆಯನ್ನು ಬಳಸಬೇಕಾಗಿದ್ದು ಮಳೆಗಾಲದಲ್ಲಿ ತೀರಾ ಸಂಕಷ್ಟ ಅನುಭವಿಸಬೇಕಾಗುತ್ತದೆ. ರಸ್ತೆ ಸಮಸ್ಯೆಯ ಕಾರಣ ಈ ಪ್ರದೇಶಕ್ಕೆ ಸಾರ್ವಜನಿಕ ಬಸ್ಸು ಸಂಚಾರವು ಮಳೆಗಾಲದಲ್ಲಿ ಸಮರ್ಪಕವಾಗಿರದ ಕಾರಣ ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಂಕಷ್ಟ ಅನುಭವಿಸಬೇಕಾಗುತ್ತದೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…