ಕೋಲ್ಚಾರಿನಿಂದ ಅಜ್ಜಾವರ ತನಕದ ಸುಮಾರು ಐದು ಕಿ.ಮೀ.ಉದ್ದವಿರುವ ಈ ರಸ್ತೆಗೆ ಇನ್ನೂ ಕೂಡಾ ಕಾಯಕಲ್ಪ ಒದಗಿ ಬಂದಿಲ್ಲ. ಈ ರಸ್ತೆಗೆ ಪೈಂಬೆಚ್ಚಾಲು ಪ್ರದೇಶದ ಒಂದಷ್ಟು ಭಾಗದಲ್ಲಿ ಕಾಂಕ್ರೀಟೀಕರಣ ಮಾಡಲಾಗಿದ್ದು ರಸ್ತೆಗೆ ಸೂಕ್ತ ಚರಂಡಿ ವ್ಯವಸ್ತೆ ಇಲ್ಲದ ಕಾರಣ ಮಳೆಗಾಲದಲ್ಲಿ ನೀರು ಹರಿದು ಕಾಂಕ್ರೀಟ್ ರಸ್ತೆಯು ಕೂಡಾ ಹಾಳಾಗಿರುತ್ತದೆ. ಇನ್ನು ಉಳಿದ ಕಡೆ ಇದುವರೆಗೂ ಯಾವುದೇ ರೀತಿಯ ಅಭಿವೃದ್ಧಿ ಕಾಣದ ಮಣ್ಣು ರಸ್ತಯಿದ್ದು ಮಳೆಗಾಲ ಬಂತೆಂದರೆ ಪೂರ್ತಿ ಕೆಸರುಮಯವಾಗಿ ಸಂಚಾರಕ್ಕೆ ಅಯೋಗ್ಯವಾಗಿರುತ್ತದೆ. ಈ ಪ್ರದೇಶದ ಜನರು ತುರ್ತು ಅಗತ್ಯಗಳಿಗಾಗಿ ನಗರವನ್ನು ಸಂಪರ್ಕಿಸಲು ಈ ರಸ್ತೆಯನ್ನು ಬಳಸಬೇಕಾಗಿದ್ದು ಮಳೆಗಾಲದಲ್ಲಿ ತೀರಾ ಸಂಕಷ್ಟ ಅನುಭವಿಸಬೇಕಾಗುತ್ತದೆ. ರಸ್ತೆ ಸಮಸ್ಯೆಯ ಕಾರಣ ಈ ಪ್ರದೇಶಕ್ಕೆ ಸಾರ್ವಜನಿಕ ಬಸ್ಸು ಸಂಚಾರವು ಮಳೆಗಾಲದಲ್ಲಿ ಸಮರ್ಪಕವಾಗಿರದ ಕಾರಣ ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಂಕಷ್ಟ ಅನುಭವಿಸಬೇಕಾಗುತ್ತದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…