ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ಕಾಂತುಕುಮೇರಿ ರಸ್ತೆಯಲ್ಲಿ ಬಾವಿಯ ರೀತಿಯ ಹೊಂಡ ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ.
ರಸ್ತೆಯಲ್ಲಿ ನಿಂತು ನೋಡಿದಾಗ ಆಳವಾಗಿರುವ ಈ ಗುಂಡಿ ಬಾವಿಯಂತೆ ಕಾಣುತ್ತಿದೆ. ಹೀಗಾಗಿ ಜನರಿಗೆ ಆತಂಕವಾಗಿದೆ. ಸ್ಥಳಕ್ಕೆ ಕಲ್ಮಡ್ಕ ಗ್ರಾ.ಪಂ. ಉಪಾಧ್ಯಕ್ಷ ಮಹೇಶ್ ಕುಮಾರ್ ಕರಿಕ್ಕಳ, ಪಿ.ಡಿ.ಓ. ಪ್ರವೀಣ್, ಸದಸ್ಯೆ ಪವಿತ್ರ ಕುದ್ವ ಸೇರಿದಂತೆ ಹಲವು ಮಂದಿ ಆಗಮಿಸಿದ್ದಾರೆ.
ಪಂಬೆತ್ತಾಡಿಯಿಂದ ಕಾಂತುಕುಮೇರಿ ಭಾಗಕ್ಕೆ ಸಂಪರ್ಕ ಕಲ್ಪಿಸುವ ಜಿ.ಪಂ.ಗೆ ಒಳಪಟ್ಟ ಪ್ರಮುಖ ರಸ್ತಯಾಗಿದ್ದು, ಈ ರಸ್ತಯನ್ನು ಅಭಿವೃದ್ಧಿ ಪಡಿಸುವಂತೆ ಈ ಮೊದಲು ಎರಡು ಬಾರಿ ಇಲಾಖೆಗೆ ಮನವಿ ಮಾಡಿದ್ದರೂ ಇಲಾಖೆ ಯಾವುದೇ ಕ್ರಮ ಕೈಗೊಳ್ಳದಿರುವುದಕ್ಕೆ ಈಗ ಸಾರ್ವಜನಿಕರು ಆಕ್ರೋಶಗೊಂಡಿದ್ದಾರೆ. ಈ ರಸ್ತೆಯಲ್ಲಿ ಸಂಚರಿಸುವವರು ಜಾಗ್ರತೆವಹಿಸಬೇಕು. ಈ ಘಟನೆಯನ್ನು ಕೂಡಲೆ ಜಿಲ್ಲಾಡಳಿತದ ಗಮನಕ್ಕೆ ತರಲಾಗುವುದೆಂದು ಮಹೇಶ್ ಕುಮಾರ್ ಕರಿಕ್ಕಳ ತಿಳಿಸಿದ್ದಾರೆ.
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…