ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ಕಾಂತುಕುಮೇರಿ ರಸ್ತೆಯಲ್ಲಿ ಬಾವಿಯ ರೀತಿಯ ಹೊಂಡ ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ.
ರಸ್ತೆಯಲ್ಲಿ ನಿಂತು ನೋಡಿದಾಗ ಆಳವಾಗಿರುವ ಈ ಗುಂಡಿ ಬಾವಿಯಂತೆ ಕಾಣುತ್ತಿದೆ. ಹೀಗಾಗಿ ಜನರಿಗೆ ಆತಂಕವಾಗಿದೆ. ಸ್ಥಳಕ್ಕೆ ಕಲ್ಮಡ್ಕ ಗ್ರಾ.ಪಂ. ಉಪಾಧ್ಯಕ್ಷ ಮಹೇಶ್ ಕುಮಾರ್ ಕರಿಕ್ಕಳ, ಪಿ.ಡಿ.ಓ. ಪ್ರವೀಣ್, ಸದಸ್ಯೆ ಪವಿತ್ರ ಕುದ್ವ ಸೇರಿದಂತೆ ಹಲವು ಮಂದಿ ಆಗಮಿಸಿದ್ದಾರೆ.
ಪಂಬೆತ್ತಾಡಿಯಿಂದ ಕಾಂತುಕುಮೇರಿ ಭಾಗಕ್ಕೆ ಸಂಪರ್ಕ ಕಲ್ಪಿಸುವ ಜಿ.ಪಂ.ಗೆ ಒಳಪಟ್ಟ ಪ್ರಮುಖ ರಸ್ತಯಾಗಿದ್ದು, ಈ ರಸ್ತಯನ್ನು ಅಭಿವೃದ್ಧಿ ಪಡಿಸುವಂತೆ ಈ ಮೊದಲು ಎರಡು ಬಾರಿ ಇಲಾಖೆಗೆ ಮನವಿ ಮಾಡಿದ್ದರೂ ಇಲಾಖೆ ಯಾವುದೇ ಕ್ರಮ ಕೈಗೊಳ್ಳದಿರುವುದಕ್ಕೆ ಈಗ ಸಾರ್ವಜನಿಕರು ಆಕ್ರೋಶಗೊಂಡಿದ್ದಾರೆ. ಈ ರಸ್ತೆಯಲ್ಲಿ ಸಂಚರಿಸುವವರು ಜಾಗ್ರತೆವಹಿಸಬೇಕು. ಈ ಘಟನೆಯನ್ನು ಕೂಡಲೆ ಜಿಲ್ಲಾಡಳಿತದ ಗಮನಕ್ಕೆ ತರಲಾಗುವುದೆಂದು ಮಹೇಶ್ ಕುಮಾರ್ ಕರಿಕ್ಕಳ ತಿಳಿಸಿದ್ದಾರೆ.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…