ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ಕಾಂತುಕುಮೇರಿ ರಸ್ತೆಯಲ್ಲಿ ಬಾವಿಯ ರೀತಿಯ ಹೊಂಡ ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ.
ರಸ್ತೆಯಲ್ಲಿ ನಿಂತು ನೋಡಿದಾಗ ಆಳವಾಗಿರುವ ಈ ಗುಂಡಿ ಬಾವಿಯಂತೆ ಕಾಣುತ್ತಿದೆ. ಹೀಗಾಗಿ ಜನರಿಗೆ ಆತಂಕವಾಗಿದೆ. ಸ್ಥಳಕ್ಕೆ ಕಲ್ಮಡ್ಕ ಗ್ರಾ.ಪಂ. ಉಪಾಧ್ಯಕ್ಷ ಮಹೇಶ್ ಕುಮಾರ್ ಕರಿಕ್ಕಳ, ಪಿ.ಡಿ.ಓ. ಪ್ರವೀಣ್, ಸದಸ್ಯೆ ಪವಿತ್ರ ಕುದ್ವ ಸೇರಿದಂತೆ ಹಲವು ಮಂದಿ ಆಗಮಿಸಿದ್ದಾರೆ.
ಪಂಬೆತ್ತಾಡಿಯಿಂದ ಕಾಂತುಕುಮೇರಿ ಭಾಗಕ್ಕೆ ಸಂಪರ್ಕ ಕಲ್ಪಿಸುವ ಜಿ.ಪಂ.ಗೆ ಒಳಪಟ್ಟ ಪ್ರಮುಖ ರಸ್ತಯಾಗಿದ್ದು, ಈ ರಸ್ತಯನ್ನು ಅಭಿವೃದ್ಧಿ ಪಡಿಸುವಂತೆ ಈ ಮೊದಲು ಎರಡು ಬಾರಿ ಇಲಾಖೆಗೆ ಮನವಿ ಮಾಡಿದ್ದರೂ ಇಲಾಖೆ ಯಾವುದೇ ಕ್ರಮ ಕೈಗೊಳ್ಳದಿರುವುದಕ್ಕೆ ಈಗ ಸಾರ್ವಜನಿಕರು ಆಕ್ರೋಶಗೊಂಡಿದ್ದಾರೆ. ಈ ರಸ್ತೆಯಲ್ಲಿ ಸಂಚರಿಸುವವರು ಜಾಗ್ರತೆವಹಿಸಬೇಕು. ಈ ಘಟನೆಯನ್ನು ಕೂಡಲೆ ಜಿಲ್ಲಾಡಳಿತದ ಗಮನಕ್ಕೆ ತರಲಾಗುವುದೆಂದು ಮಹೇಶ್ ಕುಮಾರ್ ಕರಿಕ್ಕಳ ತಿಳಿಸಿದ್ದಾರೆ.
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…