ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ಕಾಂತುಕುಮೇರಿ ರಸ್ತೆಯಲ್ಲಿ ಬಾವಿಯ ರೀತಿಯ ಹೊಂಡ ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ.
ರಸ್ತೆಯಲ್ಲಿ ನಿಂತು ನೋಡಿದಾಗ ಆಳವಾಗಿರುವ ಈ ಗುಂಡಿ ಬಾವಿಯಂತೆ ಕಾಣುತ್ತಿದೆ. ಹೀಗಾಗಿ ಜನರಿಗೆ ಆತಂಕವಾಗಿದೆ. ಸ್ಥಳಕ್ಕೆ ಕಲ್ಮಡ್ಕ ಗ್ರಾ.ಪಂ. ಉಪಾಧ್ಯಕ್ಷ ಮಹೇಶ್ ಕುಮಾರ್ ಕರಿಕ್ಕಳ, ಪಿ.ಡಿ.ಓ. ಪ್ರವೀಣ್, ಸದಸ್ಯೆ ಪವಿತ್ರ ಕುದ್ವ ಸೇರಿದಂತೆ ಹಲವು ಮಂದಿ ಆಗಮಿಸಿದ್ದಾರೆ.
ಪಂಬೆತ್ತಾಡಿಯಿಂದ ಕಾಂತುಕುಮೇರಿ ಭಾಗಕ್ಕೆ ಸಂಪರ್ಕ ಕಲ್ಪಿಸುವ ಜಿ.ಪಂ.ಗೆ ಒಳಪಟ್ಟ ಪ್ರಮುಖ ರಸ್ತಯಾಗಿದ್ದು, ಈ ರಸ್ತಯನ್ನು ಅಭಿವೃದ್ಧಿ ಪಡಿಸುವಂತೆ ಈ ಮೊದಲು ಎರಡು ಬಾರಿ ಇಲಾಖೆಗೆ ಮನವಿ ಮಾಡಿದ್ದರೂ ಇಲಾಖೆ ಯಾವುದೇ ಕ್ರಮ ಕೈಗೊಳ್ಳದಿರುವುದಕ್ಕೆ ಈಗ ಸಾರ್ವಜನಿಕರು ಆಕ್ರೋಶಗೊಂಡಿದ್ದಾರೆ. ಈ ರಸ್ತೆಯಲ್ಲಿ ಸಂಚರಿಸುವವರು ಜಾಗ್ರತೆವಹಿಸಬೇಕು. ಈ ಘಟನೆಯನ್ನು ಕೂಡಲೆ ಜಿಲ್ಲಾಡಳಿತದ ಗಮನಕ್ಕೆ ತರಲಾಗುವುದೆಂದು ಮಹೇಶ್ ಕುಮಾರ್ ಕರಿಕ್ಕಳ ತಿಳಿಸಿದ್ದಾರೆ.
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…