ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ಕಾಂತುಕುಮೇರಿ ರಸ್ತೆಯಲ್ಲಿ ಬಾವಿಯ ರೀತಿಯ ಹೊಂಡ ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ.
ರಸ್ತೆಯಲ್ಲಿ ನಿಂತು ನೋಡಿದಾಗ ಆಳವಾಗಿರುವ ಈ ಗುಂಡಿ ಬಾವಿಯಂತೆ ಕಾಣುತ್ತಿದೆ. ಹೀಗಾಗಿ ಜನರಿಗೆ ಆತಂಕವಾಗಿದೆ. ಸ್ಥಳಕ್ಕೆ ಕಲ್ಮಡ್ಕ ಗ್ರಾ.ಪಂ. ಉಪಾಧ್ಯಕ್ಷ ಮಹೇಶ್ ಕುಮಾರ್ ಕರಿಕ್ಕಳ, ಪಿ.ಡಿ.ಓ. ಪ್ರವೀಣ್, ಸದಸ್ಯೆ ಪವಿತ್ರ ಕುದ್ವ ಸೇರಿದಂತೆ ಹಲವು ಮಂದಿ ಆಗಮಿಸಿದ್ದಾರೆ.
ಪಂಬೆತ್ತಾಡಿಯಿಂದ ಕಾಂತುಕುಮೇರಿ ಭಾಗಕ್ಕೆ ಸಂಪರ್ಕ ಕಲ್ಪಿಸುವ ಜಿ.ಪಂ.ಗೆ ಒಳಪಟ್ಟ ಪ್ರಮುಖ ರಸ್ತಯಾಗಿದ್ದು, ಈ ರಸ್ತಯನ್ನು ಅಭಿವೃದ್ಧಿ ಪಡಿಸುವಂತೆ ಈ ಮೊದಲು ಎರಡು ಬಾರಿ ಇಲಾಖೆಗೆ ಮನವಿ ಮಾಡಿದ್ದರೂ ಇಲಾಖೆ ಯಾವುದೇ ಕ್ರಮ ಕೈಗೊಳ್ಳದಿರುವುದಕ್ಕೆ ಈಗ ಸಾರ್ವಜನಿಕರು ಆಕ್ರೋಶಗೊಂಡಿದ್ದಾರೆ. ಈ ರಸ್ತೆಯಲ್ಲಿ ಸಂಚರಿಸುವವರು ಜಾಗ್ರತೆವಹಿಸಬೇಕು. ಈ ಘಟನೆಯನ್ನು ಕೂಡಲೆ ಜಿಲ್ಲಾಡಳಿತದ ಗಮನಕ್ಕೆ ತರಲಾಗುವುದೆಂದು ಮಹೇಶ್ ಕುಮಾರ್ ಕರಿಕ್ಕಳ ತಿಳಿಸಿದ್ದಾರೆ.
ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ(Loksabha Elections 2024) ತೆರೆ ಬಿದ್ದಿದೆ. ಇನ್ನು ಫಲಿತಾಂಶಕ್ಕಾಗಿ ಕಾಯೋದೊಂದೇ …
ಕೊಕ್ಕೋ ಧಾರಣೆ ವಾರದಲ್ಲಿ 100 ರೂಪಾಯಿ ಇಳಿಕೆಯಾಗಿದೆ.
ಮೇ 9 ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಸಹ ಮಳೆ ಆರಂಭವಾಗುವ ಮುನ್ಸೂಚೆನೆ…
ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…
ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್…