ಸುದ್ದಿಗಳು

ವಾಹನ ಸಂಚಾರಕ್ಕೆ ಮುಕ್ತವಾಗದ ಸೇತುವೆ | ಅಪಾಯ ಆಹ್ವಾನಿಸುತ್ತಿದೆ ಮರಳು ಚೀಲ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಇದು ವಿಷಯ :
ರಸ್ತೆ -ಸೇತುವೆ ಕಾಮಗಾರಿ ಮುಗಿದರೂ ವಾಹನ ಸಂಚಾರಕ್ಕೆ ಮುಕ್ತವಾಗದ ರಸ್ತೆ. ಇದಕ್ಕೆ ಅಡ್ಡವಾಗಿ ಇರಿಸಿದ ಮರಳು ಚೀಲ ಈಗ ವಾಹನ ಸವಾರರರಿಗೆ ಸಂಕಷ್ಟ ತಂದಿದೆ. ಇಲಾಖಾ ಅಧಿಕಾರಿಗಳು ಮೌನ ವಹಿಸಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.

ಸುಬ್ರಹ್ಮಣ್ಯ-ಮಂಜೇಶ್ವರ ಹೆದ್ದಾರಿಯಲ್ಲಿ  ಪಡ್ಪಿನಂಗಡಿ ಬಳಿಯ ಕುಳಾಯಿತೋಡಿಯಲ್ಲಿ  ಸೇತುವೆ ಸಂಪೂರ್ಣಗೊಂಡರೂ ವಾಹನ ಸಂಚಾರಕ್ಕೆ ಮುಕ್ತವಾಗಿಲ್ಲ. ಇದೀಗ ವಾಹನ ಸವಾರರಿಗೆ ಅದರಲ್ಲೂ ಬೈಕ್‌ ಸವಾರರಿಗೆ ಅಪಾಯವನ್ನು ಆಹ್ವಾನಿಸುತ್ತಿದೆ. ಈಗಾಗಲೇ ಹಲವು ಬೈಕ್‌ ಉರುಳಿ, ಸವಾರರಿಗೆ ಗಾಯವಾಗಿದೆ. ಇಲಾಖೆಗಳು ದಿವ್ಯ ಮೌನ ವಹಿಸಿದೆ ಎಂದು ಸ್ಥಳೀಯರು ದೂರಿದ್ದಾರೆ.

Advertisement
Advertisement
ಬೈಕ್‌ ಉರುಳಿ ಜಖಂ ಆಗಿರುವ ವಸ್ತುಗಳು

ನಿಂತಿಕಲ್ಲು-ಪಡ್ಪಿನಂಗಡಿ ನಡುವೆ ಇರುವ ಕುಳಾಯಿತೋಡಿಯಲ್ಲಿ ಸುಬ್ರಹ್ಮಣ್ಯ-ಮಂಜೇಶ್ವರ ಹೆದ್ದಾರಿಯಲ್ಲಿ  ಪ್ರತ್ಯೇಕವಾದ ಸೇತುವೆ ರಚನೆಯಾಗಿದೆ. ಅದಕ್ಕೆ ಸಂಪರ್ಕ ರಸ್ತೆಯೂ ರಚನೆಯಾಗಿದೆ. ಆದರೆ ವಾಹನ ಸಂಚಾರ ಆಗದಂತೆ ಮರಳು ಚೀಲ ಇಡಲಾಗಿದೆ. ಇದೀಗ ಮರಳು ಚೀಲದ ಕಾರಣದಿಂದ ದ್ವಿಚಕ್ರ ಸವಾರರಿಗೆ ಅಪಾಯವನ್ನುಂಟು ಮಾಡಿದೆ. ದೂರದಿಂದ ಈ ಚೀಲದ ತಡೆಯು ಕಾಣದೆ ಹತ್ತಿರ ಬಂದಾಗಲಷ್ಟೇ ಕಾಣುವ ಕಾರಣದಿಂದ ಹಲವು ಬೈಕ್‌ ಸವಾರರು ಉರುಳಿದ್ದಾರೆ ಎಂದು ಸ್ಥಳೀಯರಾದ ಹಮೀದ್‌ ಮರಕಡ ಹೇಳಿದ್ದಾರೆ.

ಈಗಾಗಲೇ ಪೂರ್ಣಗೊಂಡ ಕಾಮಗಾರಿಯನ್ನು ವಾಹನ ಸಂಚಾರಕ್ಕೆ ಮುಕ್ತ ಮಾಡಬೇಕು. ಇದರಿಂದ ಜನರಿಗೂ ಸಮಸ್ಯೆ, ವಾಹನ ಸವಾರರಿಗೂ ಅಪಾಯವನ್ನು ಆಹ್ವಾನಿಸುತ್ತದೆ. ಇಲಾಖೆಯ ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ. ತಕ್ಷಣವೇ ವಾಹನ ಸಂಚಾರಕ್ಕೆ ಮುಕ್ತವಾಗಬೇಕು ಎಂದು ಗ್ರಾಪಂ ಮಾಜಿ ಸದಸ್ಯ ರಫೀಕ್‌ ಐವತ್ತೊಕ್ಲು ಒತ್ತಾಯಿಸಿದ್ದಾರೆ.

Advertisement

ಈಗಾಗಲೇ ನಿರ್ಮಾಣ ಮಾಡಿರುವ ಸೇತುವೆ ಹಾಗೂ ಸಂಪರ್ಕ ರಸ್ತೆಯು ಅವೈಜ್ಞಾನಿಕವಾಗಿದೆ ಎಂದು ಮೇಲ್ನೋಟದಿಂದ ನೋಡುವಾಗ ಕಾಣುತ್ತದೆ. ವಾಹನಗಳು ಅದರಲ್ಲೂ ದೂರದೂರಿನಿಂದ ಆಗಮಿಸುವ ವಾಹನ ಚಾಲಕರು ನೇರವಾಗಿ ಆಗಮಿಸಿದರೆ ಮುಂದಿರುವ ಗುಂಡಿಗೆ ಪಲ್ಟಿಯಾಗುವ ಸಾಧ್ಯತೆ ಇದೆ. ಇಂತಹ ಕಾಮಗಾರಿ ನಡೆಸುವಾಗ ಪೂರ್ವ ಯೋಜನೆ ಇಲ್ಲವೇ ಎಂದೂ ಸ್ಥಳೀಯರಾದ ರೋಹಿತ್‌ ಪ್ರಶ್ನಿಸಿದ್ದಾರೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಉದ್ಯೋಗ | ಐಟಿಐ-ಡಿಪ್ಲೊಮಾ ಅಭ್ಯರ್ಥಿಗಳಿಗೆ ಇಲ್ಲಿದೆ ಅವಕಾಶ |

ಮೈಸೂರಿನಲ್ಲಿ ಕಾರ್ಯಾಚರಿಸುತ್ತಿರುವ ಇಲೆಕ್ಟ್ರಾನಿಕ್ಸ್‌  ಉತ್ಪನ್ನಗಳ ತಯಾರಿಕಾ ಕಂಪನಿ "ಬ್ರಿವೆರಾ"ದಲ್ಲಿ ಉದ್ಯೋಗಾವಕಾಶಗಳು ಇವೆ. ಐಟಿಐ,…

32 minutes ago

ಬಿಹಾರ ಸೇರಿ ಹಲವು ರಾಜ್ಯಗಳಲ್ಲಿ 2 ದಿನ ಭಾರಿ ಮಳೆ

ಕೊಂಕಣ, ಗೋವಾ, ಮಹಾರಾಷ್ಟ್ರ, ಕೇರಳ, ಕರ್ನಾಟಕ, ಚಂಡೀಗಢ, ಬಿಹಾರ ಸೇರಿದಂತೆ ಹಲವು ರಾಜ್ಯಗಳ…

1 hour ago

ಒಂದೇ ಕುಟುಂಬದ ಮೂವರ ಮೃತ್ಯು | ತರಕಾರಿಗೆ ಸಿಂಪಡಿಸಿದ್ದ ಕ್ರಿಮಿನಾಶಕ ಜೀವಕ್ಕೇ ಕುತ್ತಾಯಿತೇ ?

ರಾತ್ರಿ ಊಟ ಮಾಡಿ ಮಲಗಿದ್ದ ಒಂದೇ ಕುಟುಂಬದ ಮೂವರು ಹೊಟ್ಟೆ ನೋವಿನಿಂದ ಸಾವನಪ್ಪಿದ …

1 hour ago

ಇಂದು ವಿಶ್ವ ಮಾವು ದಿನಾಚರಣೆ | ರಾಜ್ಯದ ಮಾವಿಗೆ ಜಗತ್ತಿನಾದ್ಯಂತ ಬೇಡಿಕೆ |

ಇಂದು ವಿಶ್ವ ಮಾವು ದಿನಾಚರಣೆ. ಪ್ರತೀ ವರ್ಷ  ಜುಲೈ 22 ರಂದು ಮಾವಿನಹಣ್ಣಿನ…

2 hours ago

ಜನನ-ಮರಣ 21 ದಿನಗಳೊಳಗೆ  ನೋಂದಣಿ ಕಡ್ಡಾಯ – ದ ಕ ಜಿಲ್ಲಾ ಅಪರ ಜಿಲ್ಲಾಧಿಕಾರಿ

ಪ್ರತಿಯೊಂದು ಜನನ ಮರಣದ ನೋಂದಣಿ ಕಡ್ಡಾಯವಾಗಿದ್ದು, ಘಟನೆ ಸಂಭವಿಸಿದ 21 ದಿನಗಳೊಳಗೆ ನಗರ/…

2 hours ago

ಸಸ್ಯ ಪರಿಚಯ – ಕಿರಾತಕಡ್ಡಿ | ಮನೆಯಲ್ಲಿರಬೇಕಾದ ಗಿಡಗಳಲ್ಲಿ ಇದೂ ಒಂದು |

ಈ ಗಿಡದ ಸಸ್ಯ ಶಾಸ್ತ್ರೀಯ ಹೆಸರು Andrographis Paniculata. ಕಿರಾತಕಡ್ಡಿಗೆ ನೆಲಬೇವು ಎಂಬ…

9 hours ago