ಸುಬ್ರಹ್ಮಣ್ಯ-ಮಂಜೇಶ್ವರ ಹೆದ್ದಾರಿಯಲ್ಲಿ ಪಡ್ಪಿನಂಗಡಿ ಬಳಿಯ ಕುಳಾಯಿತೋಡಿಯಲ್ಲಿ ಸೇತುವೆ ಸಂಪೂರ್ಣಗೊಂಡರೂ ವಾಹನ ಸಂಚಾರಕ್ಕೆ ಮುಕ್ತವಾಗಿಲ್ಲ. ಇದೀಗ ವಾಹನ ಸವಾರರಿಗೆ ಅದರಲ್ಲೂ ಬೈಕ್ ಸವಾರರಿಗೆ ಅಪಾಯವನ್ನು ಆಹ್ವಾನಿಸುತ್ತಿದೆ. ಈಗಾಗಲೇ ಹಲವು ಬೈಕ್ ಉರುಳಿ, ಸವಾರರಿಗೆ ಗಾಯವಾಗಿದೆ. ಇಲಾಖೆಗಳು ದಿವ್ಯ ಮೌನ ವಹಿಸಿದೆ ಎಂದು ಸ್ಥಳೀಯರು ದೂರಿದ್ದಾರೆ.
ನಿಂತಿಕಲ್ಲು-ಪಡ್ಪಿನಂಗಡಿ ನಡುವೆ ಇರುವ ಕುಳಾಯಿತೋಡಿಯಲ್ಲಿ ಸುಬ್ರಹ್ಮಣ್ಯ-ಮಂಜೇಶ್ವರ ಹೆದ್ದಾರಿಯಲ್ಲಿ ಪ್ರತ್ಯೇಕವಾದ ಸೇತುವೆ ರಚನೆಯಾಗಿದೆ. ಅದಕ್ಕೆ ಸಂಪರ್ಕ ರಸ್ತೆಯೂ ರಚನೆಯಾಗಿದೆ. ಆದರೆ ವಾಹನ ಸಂಚಾರ ಆಗದಂತೆ ಮರಳು ಚೀಲ ಇಡಲಾಗಿದೆ. ಇದೀಗ ಮರಳು ಚೀಲದ ಕಾರಣದಿಂದ ದ್ವಿಚಕ್ರ ಸವಾರರಿಗೆ ಅಪಾಯವನ್ನುಂಟು ಮಾಡಿದೆ. ದೂರದಿಂದ ಈ ಚೀಲದ ತಡೆಯು ಕಾಣದೆ ಹತ್ತಿರ ಬಂದಾಗಲಷ್ಟೇ ಕಾಣುವ ಕಾರಣದಿಂದ ಹಲವು ಬೈಕ್ ಸವಾರರು ಉರುಳಿದ್ದಾರೆ ಎಂದು ಸ್ಥಳೀಯರಾದ ಹಮೀದ್ ಮರಕಡ ಹೇಳಿದ್ದಾರೆ.
ಈಗಾಗಲೇ ಪೂರ್ಣಗೊಂಡ ಕಾಮಗಾರಿಯನ್ನು ವಾಹನ ಸಂಚಾರಕ್ಕೆ ಮುಕ್ತ ಮಾಡಬೇಕು. ಇದರಿಂದ ಜನರಿಗೂ ಸಮಸ್ಯೆ, ವಾಹನ ಸವಾರರಿಗೂ ಅಪಾಯವನ್ನು ಆಹ್ವಾನಿಸುತ್ತದೆ. ಇಲಾಖೆಯ ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ. ತಕ್ಷಣವೇ ವಾಹನ ಸಂಚಾರಕ್ಕೆ ಮುಕ್ತವಾಗಬೇಕು ಎಂದು ಗ್ರಾಪಂ ಮಾಜಿ ಸದಸ್ಯ ರಫೀಕ್ ಐವತ್ತೊಕ್ಲು ಒತ್ತಾಯಿಸಿದ್ದಾರೆ.
ಈಗಾಗಲೇ ನಿರ್ಮಾಣ ಮಾಡಿರುವ ಸೇತುವೆ ಹಾಗೂ ಸಂಪರ್ಕ ರಸ್ತೆಯು ಅವೈಜ್ಞಾನಿಕವಾಗಿದೆ ಎಂದು ಮೇಲ್ನೋಟದಿಂದ ನೋಡುವಾಗ ಕಾಣುತ್ತದೆ. ವಾಹನಗಳು ಅದರಲ್ಲೂ ದೂರದೂರಿನಿಂದ ಆಗಮಿಸುವ ವಾಹನ ಚಾಲಕರು ನೇರವಾಗಿ ಆಗಮಿಸಿದರೆ ಮುಂದಿರುವ ಗುಂಡಿಗೆ ಪಲ್ಟಿಯಾಗುವ ಸಾಧ್ಯತೆ ಇದೆ. ಇಂತಹ ಕಾಮಗಾರಿ ನಡೆಸುವಾಗ ಪೂರ್ವ ಯೋಜನೆ ಇಲ್ಲವೇ ಎಂದೂ ಸ್ಥಳೀಯರಾದ ರೋಹಿತ್ ಪ್ರಶ್ನಿಸಿದ್ದಾರೆ.
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…
ಸುಮಾರು 35 ವರ್ಷಗಳ ಹಿಂದೆ ಡಾ. ವಿಘ್ನೇಶ್ವರ ವರ್ಮುಡಿಯವರು ಮುಂದಿಟ್ಟಿದ್ದ ಅಡಿಕೆ ಮಾರುಕಟ್ಟೆ…
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…