Advertisement
ಸುದ್ದಿಗಳು

ವಾಹನ ಸಂಚಾರಕ್ಕೆ ಮುಕ್ತವಾಗದ ಸೇತುವೆ | ಅಪಾಯ ಆಹ್ವಾನಿಸುತ್ತಿದೆ ಮರಳು ಚೀಲ |

Share
ಇದು ವಿಷಯ :
ರಸ್ತೆ -ಸೇತುವೆ ಕಾಮಗಾರಿ ಮುಗಿದರೂ ವಾಹನ ಸಂಚಾರಕ್ಕೆ ಮುಕ್ತವಾಗದ ರಸ್ತೆ. ಇದಕ್ಕೆ ಅಡ್ಡವಾಗಿ ಇರಿಸಿದ ಮರಳು ಚೀಲ ಈಗ ವಾಹನ ಸವಾರರರಿಗೆ ಸಂಕಷ್ಟ ತಂದಿದೆ. ಇಲಾಖಾ ಅಧಿಕಾರಿಗಳು ಮೌನ ವಹಿಸಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.

ಸುಬ್ರಹ್ಮಣ್ಯ-ಮಂಜೇಶ್ವರ ಹೆದ್ದಾರಿಯಲ್ಲಿ  ಪಡ್ಪಿನಂಗಡಿ ಬಳಿಯ ಕುಳಾಯಿತೋಡಿಯಲ್ಲಿ  ಸೇತುವೆ ಸಂಪೂರ್ಣಗೊಂಡರೂ ವಾಹನ ಸಂಚಾರಕ್ಕೆ ಮುಕ್ತವಾಗಿಲ್ಲ. ಇದೀಗ ವಾಹನ ಸವಾರರಿಗೆ ಅದರಲ್ಲೂ ಬೈಕ್‌ ಸವಾರರಿಗೆ ಅಪಾಯವನ್ನು ಆಹ್ವಾನಿಸುತ್ತಿದೆ. ಈಗಾಗಲೇ ಹಲವು ಬೈಕ್‌ ಉರುಳಿ, ಸವಾರರಿಗೆ ಗಾಯವಾಗಿದೆ. ಇಲಾಖೆಗಳು ದಿವ್ಯ ಮೌನ ವಹಿಸಿದೆ ಎಂದು ಸ್ಥಳೀಯರು ದೂರಿದ್ದಾರೆ.

ಬೈಕ್‌ ಉರುಳಿ ಜಖಂ ಆಗಿರುವ ವಸ್ತುಗಳು

ನಿಂತಿಕಲ್ಲು-ಪಡ್ಪಿನಂಗಡಿ ನಡುವೆ ಇರುವ ಕುಳಾಯಿತೋಡಿಯಲ್ಲಿ ಸುಬ್ರಹ್ಮಣ್ಯ-ಮಂಜೇಶ್ವರ ಹೆದ್ದಾರಿಯಲ್ಲಿ  ಪ್ರತ್ಯೇಕವಾದ ಸೇತುವೆ ರಚನೆಯಾಗಿದೆ. ಅದಕ್ಕೆ ಸಂಪರ್ಕ ರಸ್ತೆಯೂ ರಚನೆಯಾಗಿದೆ. ಆದರೆ ವಾಹನ ಸಂಚಾರ ಆಗದಂತೆ ಮರಳು ಚೀಲ ಇಡಲಾಗಿದೆ. ಇದೀಗ ಮರಳು ಚೀಲದ ಕಾರಣದಿಂದ ದ್ವಿಚಕ್ರ ಸವಾರರಿಗೆ ಅಪಾಯವನ್ನುಂಟು ಮಾಡಿದೆ. ದೂರದಿಂದ ಈ ಚೀಲದ ತಡೆಯು ಕಾಣದೆ ಹತ್ತಿರ ಬಂದಾಗಲಷ್ಟೇ ಕಾಣುವ ಕಾರಣದಿಂದ ಹಲವು ಬೈಕ್‌ ಸವಾರರು ಉರುಳಿದ್ದಾರೆ ಎಂದು ಸ್ಥಳೀಯರಾದ ಹಮೀದ್‌ ಮರಕಡ ಹೇಳಿದ್ದಾರೆ.

ಈಗಾಗಲೇ ಪೂರ್ಣಗೊಂಡ ಕಾಮಗಾರಿಯನ್ನು ವಾಹನ ಸಂಚಾರಕ್ಕೆ ಮುಕ್ತ ಮಾಡಬೇಕು. ಇದರಿಂದ ಜನರಿಗೂ ಸಮಸ್ಯೆ, ವಾಹನ ಸವಾರರಿಗೂ ಅಪಾಯವನ್ನು ಆಹ್ವಾನಿಸುತ್ತದೆ. ಇಲಾಖೆಯ ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ. ತಕ್ಷಣವೇ ವಾಹನ ಸಂಚಾರಕ್ಕೆ ಮುಕ್ತವಾಗಬೇಕು ಎಂದು ಗ್ರಾಪಂ ಮಾಜಿ ಸದಸ್ಯ ರಫೀಕ್‌ ಐವತ್ತೊಕ್ಲು ಒತ್ತಾಯಿಸಿದ್ದಾರೆ.

ಈಗಾಗಲೇ ನಿರ್ಮಾಣ ಮಾಡಿರುವ ಸೇತುವೆ ಹಾಗೂ ಸಂಪರ್ಕ ರಸ್ತೆಯು ಅವೈಜ್ಞಾನಿಕವಾಗಿದೆ ಎಂದು ಮೇಲ್ನೋಟದಿಂದ ನೋಡುವಾಗ ಕಾಣುತ್ತದೆ. ವಾಹನಗಳು ಅದರಲ್ಲೂ ದೂರದೂರಿನಿಂದ ಆಗಮಿಸುವ ವಾಹನ ಚಾಲಕರು ನೇರವಾಗಿ ಆಗಮಿಸಿದರೆ ಮುಂದಿರುವ ಗುಂಡಿಗೆ ಪಲ್ಟಿಯಾಗುವ ಸಾಧ್ಯತೆ ಇದೆ. ಇಂತಹ ಕಾಮಗಾರಿ ನಡೆಸುವಾಗ ಪೂರ್ವ ಯೋಜನೆ ಇಲ್ಲವೇ ಎಂದೂ ಸ್ಥಳೀಯರಾದ ರೋಹಿತ್‌ ಪ್ರಶ್ನಿಸಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭ – ಮಹಿಳೆಯರ ನೇತೃತ್ವದಲ್ಲಿ ಗ್ರಾಮೀಣ ಉದ್ಯಮಕ್ಕೆ ಹೊಸ ದಿಕ್ಕು

ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…

19 hours ago

ಅಡಿಕೆ ಎಲೆಚುಕ್ಕೆ ರೋಗದ ವಿರುದ್ಧ ಹೋರಾಟ – ಸಮುದಾಯ ಮಟ್ಟದಲ್ಲಿ ಕ್ರಿಯಾ ಯೋಜನೆಗೆ ಸಂಸದ ಬ್ರಿಜೇಶ್ ಚೌಟ ಕರೆ

ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…

20 hours ago

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…

2 days ago

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

3 days ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

3 days ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

4 days ago