Advertisement
ಸುದ್ದಿಗಳು

ವಾಹನ ಸಂಚಾರಕ್ಕೆ ಮುಕ್ತವಾಗದ ಸೇತುವೆ | ಅಪಾಯ ಆಹ್ವಾನಿಸುತ್ತಿದೆ ಮರಳು ಚೀಲ |

Share
ಇದು ವಿಷಯ :
ರಸ್ತೆ -ಸೇತುವೆ ಕಾಮಗಾರಿ ಮುಗಿದರೂ ವಾಹನ ಸಂಚಾರಕ್ಕೆ ಮುಕ್ತವಾಗದ ರಸ್ತೆ. ಇದಕ್ಕೆ ಅಡ್ಡವಾಗಿ ಇರಿಸಿದ ಮರಳು ಚೀಲ ಈಗ ವಾಹನ ಸವಾರರರಿಗೆ ಸಂಕಷ್ಟ ತಂದಿದೆ. ಇಲಾಖಾ ಅಧಿಕಾರಿಗಳು ಮೌನ ವಹಿಸಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.

ಸುಬ್ರಹ್ಮಣ್ಯ-ಮಂಜೇಶ್ವರ ಹೆದ್ದಾರಿಯಲ್ಲಿ  ಪಡ್ಪಿನಂಗಡಿ ಬಳಿಯ ಕುಳಾಯಿತೋಡಿಯಲ್ಲಿ  ಸೇತುವೆ ಸಂಪೂರ್ಣಗೊಂಡರೂ ವಾಹನ ಸಂಚಾರಕ್ಕೆ ಮುಕ್ತವಾಗಿಲ್ಲ. ಇದೀಗ ವಾಹನ ಸವಾರರಿಗೆ ಅದರಲ್ಲೂ ಬೈಕ್‌ ಸವಾರರಿಗೆ ಅಪಾಯವನ್ನು ಆಹ್ವಾನಿಸುತ್ತಿದೆ. ಈಗಾಗಲೇ ಹಲವು ಬೈಕ್‌ ಉರುಳಿ, ಸವಾರರಿಗೆ ಗಾಯವಾಗಿದೆ. ಇಲಾಖೆಗಳು ದಿವ್ಯ ಮೌನ ವಹಿಸಿದೆ ಎಂದು ಸ್ಥಳೀಯರು ದೂರಿದ್ದಾರೆ.

ಬೈಕ್‌ ಉರುಳಿ ಜಖಂ ಆಗಿರುವ ವಸ್ತುಗಳು

ನಿಂತಿಕಲ್ಲು-ಪಡ್ಪಿನಂಗಡಿ ನಡುವೆ ಇರುವ ಕುಳಾಯಿತೋಡಿಯಲ್ಲಿ ಸುಬ್ರಹ್ಮಣ್ಯ-ಮಂಜೇಶ್ವರ ಹೆದ್ದಾರಿಯಲ್ಲಿ  ಪ್ರತ್ಯೇಕವಾದ ಸೇತುವೆ ರಚನೆಯಾಗಿದೆ. ಅದಕ್ಕೆ ಸಂಪರ್ಕ ರಸ್ತೆಯೂ ರಚನೆಯಾಗಿದೆ. ಆದರೆ ವಾಹನ ಸಂಚಾರ ಆಗದಂತೆ ಮರಳು ಚೀಲ ಇಡಲಾಗಿದೆ. ಇದೀಗ ಮರಳು ಚೀಲದ ಕಾರಣದಿಂದ ದ್ವಿಚಕ್ರ ಸವಾರರಿಗೆ ಅಪಾಯವನ್ನುಂಟು ಮಾಡಿದೆ. ದೂರದಿಂದ ಈ ಚೀಲದ ತಡೆಯು ಕಾಣದೆ ಹತ್ತಿರ ಬಂದಾಗಲಷ್ಟೇ ಕಾಣುವ ಕಾರಣದಿಂದ ಹಲವು ಬೈಕ್‌ ಸವಾರರು ಉರುಳಿದ್ದಾರೆ ಎಂದು ಸ್ಥಳೀಯರಾದ ಹಮೀದ್‌ ಮರಕಡ ಹೇಳಿದ್ದಾರೆ.

ಈಗಾಗಲೇ ಪೂರ್ಣಗೊಂಡ ಕಾಮಗಾರಿಯನ್ನು ವಾಹನ ಸಂಚಾರಕ್ಕೆ ಮುಕ್ತ ಮಾಡಬೇಕು. ಇದರಿಂದ ಜನರಿಗೂ ಸಮಸ್ಯೆ, ವಾಹನ ಸವಾರರಿಗೂ ಅಪಾಯವನ್ನು ಆಹ್ವಾನಿಸುತ್ತದೆ. ಇಲಾಖೆಯ ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ. ತಕ್ಷಣವೇ ವಾಹನ ಸಂಚಾರಕ್ಕೆ ಮುಕ್ತವಾಗಬೇಕು ಎಂದು ಗ್ರಾಪಂ ಮಾಜಿ ಸದಸ್ಯ ರಫೀಕ್‌ ಐವತ್ತೊಕ್ಲು ಒತ್ತಾಯಿಸಿದ್ದಾರೆ.

ಈಗಾಗಲೇ ನಿರ್ಮಾಣ ಮಾಡಿರುವ ಸೇತುವೆ ಹಾಗೂ ಸಂಪರ್ಕ ರಸ್ತೆಯು ಅವೈಜ್ಞಾನಿಕವಾಗಿದೆ ಎಂದು ಮೇಲ್ನೋಟದಿಂದ ನೋಡುವಾಗ ಕಾಣುತ್ತದೆ. ವಾಹನಗಳು ಅದರಲ್ಲೂ ದೂರದೂರಿನಿಂದ ಆಗಮಿಸುವ ವಾಹನ ಚಾಲಕರು ನೇರವಾಗಿ ಆಗಮಿಸಿದರೆ ಮುಂದಿರುವ ಗುಂಡಿಗೆ ಪಲ್ಟಿಯಾಗುವ ಸಾಧ್ಯತೆ ಇದೆ. ಇಂತಹ ಕಾಮಗಾರಿ ನಡೆಸುವಾಗ ಪೂರ್ವ ಯೋಜನೆ ಇಲ್ಲವೇ ಎಂದೂ ಸ್ಥಳೀಯರಾದ ರೋಹಿತ್‌ ಪ್ರಶ್ನಿಸಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

44 minutes ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

56 minutes ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

11 hours ago

ತಕ್ಷಣ ಪೂರ್ಣಾವಧಿ ಕೃಷಿ ಸಚಿವರನ್ನು ನೇಮಿಸಿ – ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆಗ್ರಹ

ಕರ್ನಾಟಕದಲ್ಲಿ ಮಳೆ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೂರ್ಣಾವಧಿ ಕೃಷಿ ಸಚಿವರನ್ನು ತಕ್ಷಣ ನೇಮಿಸಬೇಕು…

18 hours ago

ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆಯಲ್ಲಿ ಯೋಗ ಹಾಗೂ ಸ್ವಚ್ಛತಾ ಅಭಿಯಾನ

ವಿಶ್ವ ಯೋಗ ದಿನದ ಅಂಗವಾಗಿ ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರ್…

18 hours ago