ಸುದ್ದಿಗಳು

ರಸ್ತೆ ಗುಂಡಿ ಮುಚ್ಚದೆ ಅನಾಹುತವಾದರೆ ಅಧಿಕಾರಿಗಳೇ ಹೊಣೆ – ಹೈಕೋರ್ಟ್‌ ವಾರ್ನಿಂಗ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಸ್ತೆ ಗುಂಡಿಗಳಿಂದ ಅಪಘಾತವಾದರೆ ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದು ಹೈಕೋರ್ಟ್‌ ಎಚ್ಚರಿಸಿದೆ. ಬೀದರ್‌ ಜಿಲ್ಲೆಯ ರಸ್ತೆ ಅವ್ಯವಸ್ಥೆಗೆ ಸಂಬಂಧಿಸಿ ಸಾಮಾಜಿಕ ಕಾರ್ಯಕರ್ತ ಗುರುನಾಥ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತ್ತು.

Advertisement
Advertisement

ಬೀದರ್‌ ಜಿಲ್ಲೆಯ ಹಲವು ರಸ್ತೆಗಳು ಅವ್ಯವಸ್ಥೆಯಿಂದ ಕೂಡಿತ್ತು. ಹೀಗಿದ್ದರೂ ಇಲಾಖೆಗಳ, ಅಧಿಕಾರಿಗಳ,  ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಬೇಸತ್ತು ಸಾಮಾಜಿಕ ಕಾರ್ಯಕರ್ತ ಗುರುನಾಥ ಅವರು 2019  ರಲ್ಲಿ  ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ, ಸಮಗ್ರ ಮಾಹಿತಿ ಕೇಳಿದ್ದರು, ಇದಕ್ಕೆ ಮಳೆಯಿಂದಾಗಿ ರಸ್ತೆ ದುರಸ್ತಿ ಸಾಧ್ಯವಾಗಿಲ್ಲ ಎಂಬ ಸರಕಾರಿ ವಕೀಲರ ವಾದವನ್ನು ಹಾಗೂ  ಸಮಜಾಯಿಷಿಕೆಗೆ ಅಸಮಾಧಾನದ ವ್ಯಕ್ತ ಪಡಿಸಿದ ನ್ಯಾಯಪೀಠವು,  2019  ರಲ್ಲಿ ಈ ಅರ್ಜಿ ಸಲ್ಲಿಸಿದ್ದಾಗಿತ್ತು, ಈಗಲೂ ರಸ್ತೆ ದುರಸ್ತಿಯಾಗದೇ ಇರಲು ಏನು ಕಾರಣ ಎಂದು ಪ್ರಶ್ನಿಸಿ 2021 ರಲ್ಲಿ  ಕೂಡಾ 4 ವಾರಗಳ ಕಾಲಾವಕಾಶ ಕೇಳಿ  ರಸ್ತೆ ದುರಸ್ತಿ ಮಾಡುವ ಭರವಸೆ ನೀಡಲಾಗಿತ್ತು. ಈಗ ಮತ್ತೆ ಕಾಲಾವಕಾಶ ಹಾಗೂ ಸಮಜಾಯಿಷಿಕೆಗೆ ಏಕೆ ಎಂದು ನ್ಯಾಯಪೀಠವು ಪ್ರಶ್ನಿಸಿತ್ತು. ಇದು ನಿಜಕ್ಕೂ ಬೇಸರದ ಸಂಗತಿ ಎಂದು ನ್ಯಾಯಪೀಠ ಗರಂಗೊಂಡಿತ್ತು.

ಅಧಿಕಾರಿಗಳು ಸರಕಾರದ ಮಾತು ಕೇಳುತ್ತಿಲ್ಲ ಎಂದೆನಿಸುತ್ತದೆ, ಮಳೆಯು ನೆಪ ಮಾತ್ರಾ.  ನೆಪಗಳ ಬದಲಾಗಿ ಕೆಲಸ ಆಗಬೇಕಾಗಿದೆ, ರಸ್ತೆ ಇಂದಿನ ಅವಶ್ಯಕತೆಗಳಲ್ಲಿ ಒಂದಾಗಿದೆ. ಹೀಗಾಗಿ ನ್ಯಾಯಾಲಯಕ್ಕೆ ಹೇಗೆ ಕೆಲಸ ಮಾಡಿಸಬೇಕು ಎಂದು ಗೊತ್ತಿದೆ, ಸಂಬಂಧಪಟ್ಟವರ ವೇತನ ತಡೆಹಿಡಿದರೆ ತಿಳಿಯುತ್ತದೆ ಎಂದು ಖಾರವಾಗಿ ಹೇಳಿದ ನ್ಯಾಯಪೀಠ, ಮುಂದೆ ಜಿಲ್ಲೆಯಲ್ಲಿ ರಸ್ತೆ ಅಪಘಾತಗಳು ಸಂಭವಿಸಿದರೆ ಅದಕ್ಕೆ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು , ಹೀಗಾಗಿ ಜಿಲ್ಲೆಯ ರಸ್ತೆಗಳನ್ನು ಗುಂಡಿಗಳನ್ನು ತಕ್ಷಣವೇ ದುರಸ್ತಿ ಮಾಡದೇ ಇದ್ದರೆ ಕ್ರಮ ಖಚಿತ. ಮುಂದಿನ ವಿಚಾರಣೆ  ವೇಳೆ ಕೆಲಸ ಮಾಡದೇ ಇದ್ದರೆ ಲೋಕೋಪಯೋಗಿ ಇಲಾಖೆ ಪ್ರಧಾನ ಕಾರ್ಯದರ್ಶಿ,  ಮುಖ್ಯ ಇಂಜಿನಿಯರ್ ಸೇರಿದಂತೆ ಎಲ್ಲಾ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ನಿರ್ದೇಶಿಸಿದ ನ್ಯಾಯಪೀಠ ಜನವರಿ 22 ಕ್ಕೆ ವಿಚಾರಣೆ ಮುಂದೂಡಿತು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡುಗೆಯ ಕಚ್ಚಾ ಎಣ್ಣೆಯ ಮೇಲಿನ ಆಮದು ಸುಂಕ ಕಡಿತ | ತೆಂಗಿಗಿಲ್ಲ ಆತಂಕ.. | ಧಾರಣೆ ಇಳಿಕೆಯ ಆತಂಕವಿಲ್ಲ |

ಆಮದಾಗುವ ಕಚ್ಚಾ ಉತ್ಪನ್ನದ ಪ್ರಭಾವ ತೆಂಗು ಮತ್ತು ಅದರ ಉತ್ಪನ್ನಗಳ ಮೇಲೆ ಇಲ್ಲದೇ…

9 hours ago

ಅರಣ್ಯದ ಬಗ್ಗೆ ಹೊಸ ಪ್ರಜ್ಞೆಯನ್ನು ಜನರು ಜಾಗೃತಗೊಳಿಸಬೇಕು

"ಜನರು ಪ್ರಕೃತಿಯ ಬಗ್ಗೆ ಪ್ರೀತಿ ಮತ್ತು ಗೌರವ, ಸರಳ ಜೀವನಶೈಲಿ ಮತ್ತು ಅರಣ್ಯದ…

12 hours ago

ಒಂದು ಕ್ರೀಡಾ ಗೆಲುವಿಗೆ ಅಷ್ಟು ಅತಿರೇಕದ ಪ್ರತಿಕ್ರಿಯೆ ಒಳ್ಳೆಯ ಲಕ್ಷಣವಲ್ಲ……

ಕ್ರೀಡೆಯನ್ನು ಅಸಹಜ ಶಕ್ತಿಯ ರೂಪದಲ್ಲಿ ನೋಡಿದರೆ ಅದು ತನ್ನ ಮೂಲ‌ ಆಶಯವನ್ನೇ ಕಳೆದುಕೊಳ್ಳುತ್ತದೆ.…

12 hours ago

ಸೂರ್ಯ-ಶನಿಯಿಂದ ಶಕ್ತಿಶಾಲಿ ಪಂಚಮಿ ಯೋಗ.. | ಏನಿದು ಯೋಗ..? ಯಾವ ರಾಶಿಗೆ ವಿಶೇಷವಾದ ಅನುಕೂಲ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

13 hours ago

ಐಪಿಎಲ್‌ ಫೈನಲ್‌ ಕದನ | ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಭರ್ಜರಿ ಗೆಲವು

ಐಪಿಎಲ್  ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು…

18 hours ago

ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಿಂದ ಪ್ರವಾಹ | ನೂರಾರು ಗ್ರಾಮಗಳು ಜಲಾವೃತ, ಬೆಳೆ ನಷ್ಟ | 5 ಲಕ್ಷಕ್ಕೂ ಅಧಿಕ ಜನರು ಸಂತ್ರಸ್ತರು |

ಈಶಾನ್ಯ ರಾಜ್ಯಗಳ ಬಹುತೇಕ ಭಾಗಗಳಲ್ಲಿ ಮುಂದುವರಿದ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದೆ. ಮಣಿಪುರ,…

20 hours ago