Advertisement
ಸುದ್ದಿಗಳು

ರಸ್ತೆ ಗುಂಡಿ ಮುಚ್ಚದೆ ಅನಾಹುತವಾದರೆ ಅಧಿಕಾರಿಗಳೇ ಹೊಣೆ – ಹೈಕೋರ್ಟ್‌ ವಾರ್ನಿಂಗ್

Share

ರಸ್ತೆ ಗುಂಡಿಗಳಿಂದ ಅಪಘಾತವಾದರೆ ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದು ಹೈಕೋರ್ಟ್‌ ಎಚ್ಚರಿಸಿದೆ. ಬೀದರ್‌ ಜಿಲ್ಲೆಯ ರಸ್ತೆ ಅವ್ಯವಸ್ಥೆಗೆ ಸಂಬಂಧಿಸಿ ಸಾಮಾಜಿಕ ಕಾರ್ಯಕರ್ತ ಗುರುನಾಥ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತ್ತು.

ಬೀದರ್‌ ಜಿಲ್ಲೆಯ ಹಲವು ರಸ್ತೆಗಳು ಅವ್ಯವಸ್ಥೆಯಿಂದ ಕೂಡಿತ್ತು. ಹೀಗಿದ್ದರೂ ಇಲಾಖೆಗಳ, ಅಧಿಕಾರಿಗಳ,  ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಬೇಸತ್ತು ಸಾಮಾಜಿಕ ಕಾರ್ಯಕರ್ತ ಗುರುನಾಥ ಅವರು 2019  ರಲ್ಲಿ  ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ, ಸಮಗ್ರ ಮಾಹಿತಿ ಕೇಳಿದ್ದರು, ಇದಕ್ಕೆ ಮಳೆಯಿಂದಾಗಿ ರಸ್ತೆ ದುರಸ್ತಿ ಸಾಧ್ಯವಾಗಿಲ್ಲ ಎಂಬ ಸರಕಾರಿ ವಕೀಲರ ವಾದವನ್ನು ಹಾಗೂ  ಸಮಜಾಯಿಷಿಕೆಗೆ ಅಸಮಾಧಾನದ ವ್ಯಕ್ತ ಪಡಿಸಿದ ನ್ಯಾಯಪೀಠವು,  2019  ರಲ್ಲಿ ಈ ಅರ್ಜಿ ಸಲ್ಲಿಸಿದ್ದಾಗಿತ್ತು, ಈಗಲೂ ರಸ್ತೆ ದುರಸ್ತಿಯಾಗದೇ ಇರಲು ಏನು ಕಾರಣ ಎಂದು ಪ್ರಶ್ನಿಸಿ 2021 ರಲ್ಲಿ  ಕೂಡಾ 4 ವಾರಗಳ ಕಾಲಾವಕಾಶ ಕೇಳಿ  ರಸ್ತೆ ದುರಸ್ತಿ ಮಾಡುವ ಭರವಸೆ ನೀಡಲಾಗಿತ್ತು. ಈಗ ಮತ್ತೆ ಕಾಲಾವಕಾಶ ಹಾಗೂ ಸಮಜಾಯಿಷಿಕೆಗೆ ಏಕೆ ಎಂದು ನ್ಯಾಯಪೀಠವು ಪ್ರಶ್ನಿಸಿತ್ತು. ಇದು ನಿಜಕ್ಕೂ ಬೇಸರದ ಸಂಗತಿ ಎಂದು ನ್ಯಾಯಪೀಠ ಗರಂಗೊಂಡಿತ್ತು.

ಅಧಿಕಾರಿಗಳು ಸರಕಾರದ ಮಾತು ಕೇಳುತ್ತಿಲ್ಲ ಎಂದೆನಿಸುತ್ತದೆ, ಮಳೆಯು ನೆಪ ಮಾತ್ರಾ.  ನೆಪಗಳ ಬದಲಾಗಿ ಕೆಲಸ ಆಗಬೇಕಾಗಿದೆ, ರಸ್ತೆ ಇಂದಿನ ಅವಶ್ಯಕತೆಗಳಲ್ಲಿ ಒಂದಾಗಿದೆ. ಹೀಗಾಗಿ ನ್ಯಾಯಾಲಯಕ್ಕೆ ಹೇಗೆ ಕೆಲಸ ಮಾಡಿಸಬೇಕು ಎಂದು ಗೊತ್ತಿದೆ, ಸಂಬಂಧಪಟ್ಟವರ ವೇತನ ತಡೆಹಿಡಿದರೆ ತಿಳಿಯುತ್ತದೆ ಎಂದು ಖಾರವಾಗಿ ಹೇಳಿದ ನ್ಯಾಯಪೀಠ, ಮುಂದೆ ಜಿಲ್ಲೆಯಲ್ಲಿ ರಸ್ತೆ ಅಪಘಾತಗಳು ಸಂಭವಿಸಿದರೆ ಅದಕ್ಕೆ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು , ಹೀಗಾಗಿ ಜಿಲ್ಲೆಯ ರಸ್ತೆಗಳನ್ನು ಗುಂಡಿಗಳನ್ನು ತಕ್ಷಣವೇ ದುರಸ್ತಿ ಮಾಡದೇ ಇದ್ದರೆ ಕ್ರಮ ಖಚಿತ. ಮುಂದಿನ ವಿಚಾರಣೆ  ವೇಳೆ ಕೆಲಸ ಮಾಡದೇ ಇದ್ದರೆ ಲೋಕೋಪಯೋಗಿ ಇಲಾಖೆ ಪ್ರಧಾನ ಕಾರ್ಯದರ್ಶಿ,  ಮುಖ್ಯ ಇಂಜಿನಿಯರ್ ಸೇರಿದಂತೆ ಎಲ್ಲಾ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ನಿರ್ದೇಶಿಸಿದ ನ್ಯಾಯಪೀಠ ಜನವರಿ 22 ಕ್ಕೆ ವಿಚಾರಣೆ ಮುಂದೂಡಿತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

3 hours ago

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

3 hours ago

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

7 hours ago

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

1 day ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

1 day ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

2 days ago