Advertisement
ಸುದ್ದಿಗಳು

ರಸ್ತೆ ಗುಂಡಿ ಮುಚ್ಚದೆ ಅನಾಹುತವಾದರೆ ಅಧಿಕಾರಿಗಳೇ ಹೊಣೆ – ಹೈಕೋರ್ಟ್‌ ವಾರ್ನಿಂಗ್

Share

ರಸ್ತೆ ಗುಂಡಿಗಳಿಂದ ಅಪಘಾತವಾದರೆ ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದು ಹೈಕೋರ್ಟ್‌ ಎಚ್ಚರಿಸಿದೆ. ಬೀದರ್‌ ಜಿಲ್ಲೆಯ ರಸ್ತೆ ಅವ್ಯವಸ್ಥೆಗೆ ಸಂಬಂಧಿಸಿ ಸಾಮಾಜಿಕ ಕಾರ್ಯಕರ್ತ ಗುರುನಾಥ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತ್ತು.

ಬೀದರ್‌ ಜಿಲ್ಲೆಯ ಹಲವು ರಸ್ತೆಗಳು ಅವ್ಯವಸ್ಥೆಯಿಂದ ಕೂಡಿತ್ತು. ಹೀಗಿದ್ದರೂ ಇಲಾಖೆಗಳ, ಅಧಿಕಾರಿಗಳ,  ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಬೇಸತ್ತು ಸಾಮಾಜಿಕ ಕಾರ್ಯಕರ್ತ ಗುರುನಾಥ ಅವರು 2019  ರಲ್ಲಿ  ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ, ಸಮಗ್ರ ಮಾಹಿತಿ ಕೇಳಿದ್ದರು, ಇದಕ್ಕೆ ಮಳೆಯಿಂದಾಗಿ ರಸ್ತೆ ದುರಸ್ತಿ ಸಾಧ್ಯವಾಗಿಲ್ಲ ಎಂಬ ಸರಕಾರಿ ವಕೀಲರ ವಾದವನ್ನು ಹಾಗೂ  ಸಮಜಾಯಿಷಿಕೆಗೆ ಅಸಮಾಧಾನದ ವ್ಯಕ್ತ ಪಡಿಸಿದ ನ್ಯಾಯಪೀಠವು,  2019  ರಲ್ಲಿ ಈ ಅರ್ಜಿ ಸಲ್ಲಿಸಿದ್ದಾಗಿತ್ತು, ಈಗಲೂ ರಸ್ತೆ ದುರಸ್ತಿಯಾಗದೇ ಇರಲು ಏನು ಕಾರಣ ಎಂದು ಪ್ರಶ್ನಿಸಿ 2021 ರಲ್ಲಿ  ಕೂಡಾ 4 ವಾರಗಳ ಕಾಲಾವಕಾಶ ಕೇಳಿ  ರಸ್ತೆ ದುರಸ್ತಿ ಮಾಡುವ ಭರವಸೆ ನೀಡಲಾಗಿತ್ತು. ಈಗ ಮತ್ತೆ ಕಾಲಾವಕಾಶ ಹಾಗೂ ಸಮಜಾಯಿಷಿಕೆಗೆ ಏಕೆ ಎಂದು ನ್ಯಾಯಪೀಠವು ಪ್ರಶ್ನಿಸಿತ್ತು. ಇದು ನಿಜಕ್ಕೂ ಬೇಸರದ ಸಂಗತಿ ಎಂದು ನ್ಯಾಯಪೀಠ ಗರಂಗೊಂಡಿತ್ತು.

ಅಧಿಕಾರಿಗಳು ಸರಕಾರದ ಮಾತು ಕೇಳುತ್ತಿಲ್ಲ ಎಂದೆನಿಸುತ್ತದೆ, ಮಳೆಯು ನೆಪ ಮಾತ್ರಾ.  ನೆಪಗಳ ಬದಲಾಗಿ ಕೆಲಸ ಆಗಬೇಕಾಗಿದೆ, ರಸ್ತೆ ಇಂದಿನ ಅವಶ್ಯಕತೆಗಳಲ್ಲಿ ಒಂದಾಗಿದೆ. ಹೀಗಾಗಿ ನ್ಯಾಯಾಲಯಕ್ಕೆ ಹೇಗೆ ಕೆಲಸ ಮಾಡಿಸಬೇಕು ಎಂದು ಗೊತ್ತಿದೆ, ಸಂಬಂಧಪಟ್ಟವರ ವೇತನ ತಡೆಹಿಡಿದರೆ ತಿಳಿಯುತ್ತದೆ ಎಂದು ಖಾರವಾಗಿ ಹೇಳಿದ ನ್ಯಾಯಪೀಠ, ಮುಂದೆ ಜಿಲ್ಲೆಯಲ್ಲಿ ರಸ್ತೆ ಅಪಘಾತಗಳು ಸಂಭವಿಸಿದರೆ ಅದಕ್ಕೆ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು , ಹೀಗಾಗಿ ಜಿಲ್ಲೆಯ ರಸ್ತೆಗಳನ್ನು ಗುಂಡಿಗಳನ್ನು ತಕ್ಷಣವೇ ದುರಸ್ತಿ ಮಾಡದೇ ಇದ್ದರೆ ಕ್ರಮ ಖಚಿತ. ಮುಂದಿನ ವಿಚಾರಣೆ  ವೇಳೆ ಕೆಲಸ ಮಾಡದೇ ಇದ್ದರೆ ಲೋಕೋಪಯೋಗಿ ಇಲಾಖೆ ಪ್ರಧಾನ ಕಾರ್ಯದರ್ಶಿ,  ಮುಖ್ಯ ಇಂಜಿನಿಯರ್ ಸೇರಿದಂತೆ ಎಲ್ಲಾ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ನಿರ್ದೇಶಿಸಿದ ನ್ಯಾಯಪೀಠ ಜನವರಿ 22 ಕ್ಕೆ ವಿಚಾರಣೆ ಮುಂದೂಡಿತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

1 hour ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

2 hours ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

6 hours ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

6 hours ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

6 hours ago

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

22 hours ago