Advertisement
MIRROR FOCUS

ರಸ್ತೆ ಬದಿ ತ್ಯಾಜ್ಯ ಎಸೆತಕ್ಕೆ ಎಫ್‌ಐಆರ್ | ʼನಾನು ಎಸೆದಿಲ್ಲ’ ಎಂದರೂ ಸಿಕ್ಕ ಸಾಕ್ಷಿ…!

Share

ಸಾರ್ವಜನಿಕ ಸ್ವಚ್ಛತೆಗೆ ವಿರುದ್ಧವಾಗಿ ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ತಾಲೂಕಿನ ಐವರ್ನಾಡು ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಸ್ಥಳೀಯ ಮಟ್ಟದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗಿದೆ.

ಬೆಳ್ಳಾರೆ–ಸುಳ್ಯ ರಸ್ತೆಯ ಬೇಂಗಮಲೆ ಪ್ರದೇಶದಲ್ಲಿ ಮೂರು ಕಡೆ ತ್ಯಾಜ್ಯದ ಚೀಲಗಳನ್ನು ಎಸೆದಿರುವುದು ಪತ್ತೆಯಾಗಿದೆ. ಪರಿಶೀಲನೆ ನಡೆಸಿದಾಗ, ಆ ಚೀಲಗಳಲ್ಲಿ ಸುಳ್ಯದ ಗಾಂಧಿನಗರದಲ್ಲಿರುವ ಅಯೋಧ್ಯಾ ಮೆನ್ಸ್ ಡ್ರೆಸ್ & ಸ್ಪೋರ್ಟ್ಸ್ ಜೆರ್ಸಿ ಶಾಪ್ ಗೆ ಸೇರಿದ ವಸ್ತುಗಳು ಪತ್ತೆಯಾಗಿವೆ.

ಚೀಲಗಳಲ್ಲಿ ಮಳಿಗೆಯ ಬಿಲ್ಲುಗಳು, ಜಾತ್ರೆಯ ಆಮಂತ್ರಣ ಪತ್ರಿಕೆಗಳು ಹಾಗೂ ಮೆಸ್ಕಾಂ ವಿದ್ಯುತ್ ಬಿಲ್ಲುಗಳು ದೊರೆತಿದ್ದು, ತ್ಯಾಜ್ಯವು ಮಳಿಗೆಯದ್ದೇ ಎಂಬುದು ದೃಢಪಟ್ಟಿದೆ.

ಗ್ರಾಮಪಂಚಾಯತ್ ವತಿಯಿಂದ ಅಂಗಡಿ ಮಾಲಿಕರಿಗೆ ಕರೆ ಮಾಡಿ, ಕಚೇರಿಗೆ ಬಂದು ದಂಡ ಪಾವತಿಸಲು ಸೂಚನೆ ನೀಡಲಾಗಿತ್ತು. ಆದರೆ ಅಂಗಡಿ ಮಾಲಿಕ ಅಕ್ಷಯ್ ರಜಪೂತ್ ಕಲ್ಲಡ್ಕ ಅವರು ತ್ಯಾಜ್ಯ ಎಸೆದಿಲ್ಲವೆಂದು ಹೇಳಿ ದಂಡ ಪಾವತಿಸಲು ನಿರಾಕರಿಸಿದ್ದಾರೆ.

ಈ ಹಿನ್ನೆಲೆಯಲ್ಲಿ, ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಗ್ರಾಮಪಂಚಾಯತ್ ಆಡಳಿತ ಮಂಡಳಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಸೂಚನೆಯಂತೆ ಪ್ರಕರಣ ದಾಖಲಿಸಲು ಮುಂದಾಗಿದೆ.

ಐವರ್ನಾಡು ಪಂಚಾಯತ್ ಪಿ.ಡಿ.ಒ ಶ್ಯಾಮಪ್ರಸಾದ್ ಅವರು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ಸಲ್ಲಿಸಿದ್ದು, ಇದೀಗ ಪ್ರಕರಣ ದಾಖಲಾಗಿ ತನಿಖೆ ಆರಂಭವಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

An FIR has been registered in Ivarnadu Gram Panchayat limits of Sullia taluk after garbage was found dumped roadside at Bengamale. Investigation revealed that the waste belonged to a garment shop in Sullia, based on bills and documents found in the bags. The shop owner denied the allegation and refused to pay the penalty, leading the Panchayat to file a formal police complaint. Authorities have initiated legal action, sending a strong message on public sanitation enforcement.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

7 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

2 days ago