ಆಮಂತ್ರಣದ ನೆಪದಲ್ಲಿ ಮನೆಗೆ ನುಗ್ಗಿ ದರೋಡೆ | ಚಿನ್ನಾಭರಣ ದೋಚಿದ ಕಳ್ಳರು |

October 27, 2022
12:48 PM

ಮದುವೆ ಆಮಂತ್ರಣ ಪತ್ರ ಕೊಡುವ ನೆಪದಲ್ಲಿ ಮನೆಗೆ ನುಗ್ಗಿದ ಕಳ್ಳರು ಮನೆಯಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಚಾಂಡ್ರಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಾಂಡ್ರಹಳ್ಳಿ ಗ್ರಾಮದ ನಾರಾಯಣಸ್ವಾಮಿ ಅವರ ಮನೆಯಲ್ಲಿ ಈ ಘಟನೆ ನಡೆದಿದೆ.

ಕಂದಾಯ ಇಲಾಖೆಯಿಂದ  ನಿವೃತ್ತರಾಗಿದ್ದ ನಾರಾಯಣಸ್ವಾಮಿ ಅವರು, ಚಾಂಡ್ರಹಳ್ಳಿ ಗ್ರಾಮದಲ್ಲಿ ವಾಸವಾಗಿದ್ದರು. ಅಪರಿಚಿತ ವ್ಯಕ್ತಿಗಳು ಮದುವೆ ಆಮಂತ್ರಣ ಪತ್ರ ಕೊಡುವ ನೆಪದಲ್ಲಿ ಬಂದು ಮನೆಯಲ್ಲಿದ್ದ ಹಣ, ಚಿನ್ನ, ಬೆಳ್ಳಿ ದೋಚಿ ಪರಾರಿಯಾಗಿದ್ದಾರೆ. ರಾತ್ರಿ ಊಟ ಮಾಡಿ ಮಲಗಿದ್ದ ಸಮಯಕ್ಕೆ ಸುಮಾರು 10 ಗಂಟೆ ವೇಳೆಗೆ ಐದು ಜನರ ಅಪರಿಚಿತರ ಗುಂಪು ಬಾಗಿಲು ತಟ್ಟಿದ್ದರು. ಯಾರು ಎಂದು ಕೇಳಿದಾಗ ಶ್ರೀನಿವಾಸಪುರದಿಂದ ಮದುವೆ ಕಾರ್ಡ್ ಕೊಡಲು ಬಂದಿದ್ದೇವೆ ಎಂದು ಹೇಳಿದ್ದಾರೆ. ನಾರಾಯಣಸ್ವಾಮಿ ಅವರು ಬಾಗಿಲು ತೆರೆದಾಗ  ದುಷ್ಕರ್ಮಿಗಳು ವೃದ್ಧ ದಂಪತಿ ಮೇಲೆ ಮುಗಿಬಿದ್ದು ಮನೆಯ ಸೋಪಾಗೆ ಅವರನ್ನು ಕಟ್ಟಿಹಾಕಿ. ಮನೆಯಲ್ಲಿದ್ದ 150 ಗ್ರಾಂ ಚಿನ್ನ, 250 ಗ್ರಾಂ ಬೆಳ್ಳಿ, ಹನ್ನೊಂದು ಸಾವಿರ ನಗದು ದೋಚಿ ಪರಾರಿಯಾಗಿದ್ದಾರೆ. ಈ ಬಗ್ಗೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ
July 26, 2026
3:04 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ
July 26, 2026
2:49 PM
by: ಸಾಯಿಶೇಖರ್ ಕರಿಕಳ
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror