ಮದುವೆ ಆಮಂತ್ರಣ ಪತ್ರ ಕೊಡುವ ನೆಪದಲ್ಲಿ ಮನೆಗೆ ನುಗ್ಗಿದ ಕಳ್ಳರು ಮನೆಯಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಚಾಂಡ್ರಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಾಂಡ್ರಹಳ್ಳಿ ಗ್ರಾಮದ ನಾರಾಯಣಸ್ವಾಮಿ ಅವರ ಮನೆಯಲ್ಲಿ ಈ ಘಟನೆ ನಡೆದಿದೆ.
ಕಂದಾಯ ಇಲಾಖೆಯಿಂದ ನಿವೃತ್ತರಾಗಿದ್ದ ನಾರಾಯಣಸ್ವಾಮಿ ಅವರು, ಚಾಂಡ್ರಹಳ್ಳಿ ಗ್ರಾಮದಲ್ಲಿ ವಾಸವಾಗಿದ್ದರು. ಅಪರಿಚಿತ ವ್ಯಕ್ತಿಗಳು ಮದುವೆ ಆಮಂತ್ರಣ ಪತ್ರ ಕೊಡುವ ನೆಪದಲ್ಲಿ ಬಂದು ಮನೆಯಲ್ಲಿದ್ದ ಹಣ, ಚಿನ್ನ, ಬೆಳ್ಳಿ ದೋಚಿ ಪರಾರಿಯಾಗಿದ್ದಾರೆ. ರಾತ್ರಿ ಊಟ ಮಾಡಿ ಮಲಗಿದ್ದ ಸಮಯಕ್ಕೆ ಸುಮಾರು 10 ಗಂಟೆ ವೇಳೆಗೆ ಐದು ಜನರ ಅಪರಿಚಿತರ ಗುಂಪು ಬಾಗಿಲು ತಟ್ಟಿದ್ದರು. ಯಾರು ಎಂದು ಕೇಳಿದಾಗ ಶ್ರೀನಿವಾಸಪುರದಿಂದ ಮದುವೆ ಕಾರ್ಡ್ ಕೊಡಲು ಬಂದಿದ್ದೇವೆ ಎಂದು ಹೇಳಿದ್ದಾರೆ. ನಾರಾಯಣಸ್ವಾಮಿ ಅವರು ಬಾಗಿಲು ತೆರೆದಾಗ ದುಷ್ಕರ್ಮಿಗಳು ವೃದ್ಧ ದಂಪತಿ ಮೇಲೆ ಮುಗಿಬಿದ್ದು ಮನೆಯ ಸೋಪಾಗೆ ಅವರನ್ನು ಕಟ್ಟಿಹಾಕಿ. ಮನೆಯಲ್ಲಿದ್ದ 150 ಗ್ರಾಂ ಚಿನ್ನ, 250 ಗ್ರಾಂ ಬೆಳ್ಳಿ, ಹನ್ನೊಂದು ಸಾವಿರ ನಗದು ದೋಚಿ ಪರಾರಿಯಾಗಿದ್ದಾರೆ. ಈ ಬಗ್ಗೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.…
ಅಂಚೆ ಇಲಾಖೆಯಿಂದ ಬೆಳೆಗಾರರಿಂದ ಗ್ರಾಹಕರು ನೇರ ಮಾವು ಮಾರಾಟ ಯಶಸ್ವೀ ಸೇವೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಗುಜ್ಜೆ ಮೊಸರು ಗೊಜ್ಜು ಬೇಕಾಗುವ ಸಾಮಾಗ್ರಿಗಳು : ಗುಜ್ಜೆ 1 ಕಪ್ ಬೇಯಿಸಿ…
ಜಮ್ಮು- ಕಾಶ್ಮೀರದ ಪೆಹಲ್ಗಾಮ್ ನಲ್ಲಿಂದು ಪ್ರವಾಸಿಗರ ಮೇಲೆ ಭಯೋತ್ಪಾದಕ ದಾಳಿ ನಡೆದಿದೆ. ಘಟನೆಯಲ್ಲಿ…
23.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…