ಮದುವೆ ಆಮಂತ್ರಣ ಪತ್ರ ಕೊಡುವ ನೆಪದಲ್ಲಿ ಮನೆಗೆ ನುಗ್ಗಿದ ಕಳ್ಳರು ಮನೆಯಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಚಾಂಡ್ರಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಾಂಡ್ರಹಳ್ಳಿ ಗ್ರಾಮದ ನಾರಾಯಣಸ್ವಾಮಿ ಅವರ ಮನೆಯಲ್ಲಿ ಈ ಘಟನೆ ನಡೆದಿದೆ.
ಕಂದಾಯ ಇಲಾಖೆಯಿಂದ ನಿವೃತ್ತರಾಗಿದ್ದ ನಾರಾಯಣಸ್ವಾಮಿ ಅವರು, ಚಾಂಡ್ರಹಳ್ಳಿ ಗ್ರಾಮದಲ್ಲಿ ವಾಸವಾಗಿದ್ದರು. ಅಪರಿಚಿತ ವ್ಯಕ್ತಿಗಳು ಮದುವೆ ಆಮಂತ್ರಣ ಪತ್ರ ಕೊಡುವ ನೆಪದಲ್ಲಿ ಬಂದು ಮನೆಯಲ್ಲಿದ್ದ ಹಣ, ಚಿನ್ನ, ಬೆಳ್ಳಿ ದೋಚಿ ಪರಾರಿಯಾಗಿದ್ದಾರೆ. ರಾತ್ರಿ ಊಟ ಮಾಡಿ ಮಲಗಿದ್ದ ಸಮಯಕ್ಕೆ ಸುಮಾರು 10 ಗಂಟೆ ವೇಳೆಗೆ ಐದು ಜನರ ಅಪರಿಚಿತರ ಗುಂಪು ಬಾಗಿಲು ತಟ್ಟಿದ್ದರು. ಯಾರು ಎಂದು ಕೇಳಿದಾಗ ಶ್ರೀನಿವಾಸಪುರದಿಂದ ಮದುವೆ ಕಾರ್ಡ್ ಕೊಡಲು ಬಂದಿದ್ದೇವೆ ಎಂದು ಹೇಳಿದ್ದಾರೆ. ನಾರಾಯಣಸ್ವಾಮಿ ಅವರು ಬಾಗಿಲು ತೆರೆದಾಗ ದುಷ್ಕರ್ಮಿಗಳು ವೃದ್ಧ ದಂಪತಿ ಮೇಲೆ ಮುಗಿಬಿದ್ದು ಮನೆಯ ಸೋಪಾಗೆ ಅವರನ್ನು ಕಟ್ಟಿಹಾಕಿ. ಮನೆಯಲ್ಲಿದ್ದ 150 ಗ್ರಾಂ ಚಿನ್ನ, 250 ಗ್ರಾಂ ಬೆಳ್ಳಿ, ಹನ್ನೊಂದು ಸಾವಿರ ನಗದು ದೋಚಿ ಪರಾರಿಯಾಗಿದ್ದಾರೆ. ಈ ಬಗ್ಗೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ದೇಶದಲ್ಲಿ ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ಹೆಚ್ಚು ಪರಿಸರ…
ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಆಧುನಿಕ ಮೂಲಭೂತ…
ದಾವಣಗೆರೆ ನಗರ ಸೇರಿದಂತೆ ಜಿಲ್ಲಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟವನ್ನು…
ಇತ್ತೀಚಿನ ದಿನಗಳಲ್ಲಿ ಯುವಕರು ಹೃದಯಾಘಾತಕ್ಕೆ ಒಳಗಾಗುತ್ತಿರುವುದರಿಂದ ಜನರಲ್ಲಿ ಹೃದಯದ ವಿಷಯದಲ್ಲಿ ಭಯದ ವಾತಾವರಣ…
ಸುಳ್ಳು ಸುದ್ದಿ ಹರಡುವವರು ಮತ್ತು ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ದ ಸೂಕ್ತ ಕಾನೂನು…
ಬಾಹ್ಯಕಾಶದಲ್ಲಿ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಹೆಸರುಕಾಳು ಹಾಗೂ ಮೆಂತ್ಯ ಕಾಳುಗಳ ಮೊಳಕೆಯೊಡೆಯುವ ಪ್ರಯೋಗಗಳನ್ನು…