Advertisement
ಅಪರಾಧ

ಆಮಂತ್ರಣದ ನೆಪದಲ್ಲಿ ಮನೆಗೆ ನುಗ್ಗಿ ದರೋಡೆ | ಚಿನ್ನಾಭರಣ ದೋಚಿದ ಕಳ್ಳರು |

Share

ಮದುವೆ ಆಮಂತ್ರಣ ಪತ್ರ ಕೊಡುವ ನೆಪದಲ್ಲಿ ಮನೆಗೆ ನುಗ್ಗಿದ ಕಳ್ಳರು ಮನೆಯಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಚಾಂಡ್ರಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಾಂಡ್ರಹಳ್ಳಿ ಗ್ರಾಮದ ನಾರಾಯಣಸ್ವಾಮಿ ಅವರ ಮನೆಯಲ್ಲಿ ಈ ಘಟನೆ ನಡೆದಿದೆ.

ಕಂದಾಯ ಇಲಾಖೆಯಿಂದ  ನಿವೃತ್ತರಾಗಿದ್ದ ನಾರಾಯಣಸ್ವಾಮಿ ಅವರು, ಚಾಂಡ್ರಹಳ್ಳಿ ಗ್ರಾಮದಲ್ಲಿ ವಾಸವಾಗಿದ್ದರು. ಅಪರಿಚಿತ ವ್ಯಕ್ತಿಗಳು ಮದುವೆ ಆಮಂತ್ರಣ ಪತ್ರ ಕೊಡುವ ನೆಪದಲ್ಲಿ ಬಂದು ಮನೆಯಲ್ಲಿದ್ದ ಹಣ, ಚಿನ್ನ, ಬೆಳ್ಳಿ ದೋಚಿ ಪರಾರಿಯಾಗಿದ್ದಾರೆ. ರಾತ್ರಿ ಊಟ ಮಾಡಿ ಮಲಗಿದ್ದ ಸಮಯಕ್ಕೆ ಸುಮಾರು 10 ಗಂಟೆ ವೇಳೆಗೆ ಐದು ಜನರ ಅಪರಿಚಿತರ ಗುಂಪು ಬಾಗಿಲು ತಟ್ಟಿದ್ದರು. ಯಾರು ಎಂದು ಕೇಳಿದಾಗ ಶ್ರೀನಿವಾಸಪುರದಿಂದ ಮದುವೆ ಕಾರ್ಡ್ ಕೊಡಲು ಬಂದಿದ್ದೇವೆ ಎಂದು ಹೇಳಿದ್ದಾರೆ. ನಾರಾಯಣಸ್ವಾಮಿ ಅವರು ಬಾಗಿಲು ತೆರೆದಾಗ  ದುಷ್ಕರ್ಮಿಗಳು ವೃದ್ಧ ದಂಪತಿ ಮೇಲೆ ಮುಗಿಬಿದ್ದು ಮನೆಯ ಸೋಪಾಗೆ ಅವರನ್ನು ಕಟ್ಟಿಹಾಕಿ. ಮನೆಯಲ್ಲಿದ್ದ 150 ಗ್ರಾಂ ಚಿನ್ನ, 250 ಗ್ರಾಂ ಬೆಳ್ಳಿ, ಹನ್ನೊಂದು ಸಾವಿರ ನಗದು ದೋಚಿ ಪರಾರಿಯಾಗಿದ್ದಾರೆ. ಈ ಬಗ್ಗೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

7 hours ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

16 hours ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

22 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

22 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

2 days ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

2 days ago