ಮದುವೆ ಆಮಂತ್ರಣ ಪತ್ರ ಕೊಡುವ ನೆಪದಲ್ಲಿ ಮನೆಗೆ ನುಗ್ಗಿದ ಕಳ್ಳರು ಮನೆಯಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಚಾಂಡ್ರಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಾಂಡ್ರಹಳ್ಳಿ ಗ್ರಾಮದ ನಾರಾಯಣಸ್ವಾಮಿ ಅವರ ಮನೆಯಲ್ಲಿ ಈ ಘಟನೆ ನಡೆದಿದೆ.
ಕಂದಾಯ ಇಲಾಖೆಯಿಂದ ನಿವೃತ್ತರಾಗಿದ್ದ ನಾರಾಯಣಸ್ವಾಮಿ ಅವರು, ಚಾಂಡ್ರಹಳ್ಳಿ ಗ್ರಾಮದಲ್ಲಿ ವಾಸವಾಗಿದ್ದರು. ಅಪರಿಚಿತ ವ್ಯಕ್ತಿಗಳು ಮದುವೆ ಆಮಂತ್ರಣ ಪತ್ರ ಕೊಡುವ ನೆಪದಲ್ಲಿ ಬಂದು ಮನೆಯಲ್ಲಿದ್ದ ಹಣ, ಚಿನ್ನ, ಬೆಳ್ಳಿ ದೋಚಿ ಪರಾರಿಯಾಗಿದ್ದಾರೆ. ರಾತ್ರಿ ಊಟ ಮಾಡಿ ಮಲಗಿದ್ದ ಸಮಯಕ್ಕೆ ಸುಮಾರು 10 ಗಂಟೆ ವೇಳೆಗೆ ಐದು ಜನರ ಅಪರಿಚಿತರ ಗುಂಪು ಬಾಗಿಲು ತಟ್ಟಿದ್ದರು. ಯಾರು ಎಂದು ಕೇಳಿದಾಗ ಶ್ರೀನಿವಾಸಪುರದಿಂದ ಮದುವೆ ಕಾರ್ಡ್ ಕೊಡಲು ಬಂದಿದ್ದೇವೆ ಎಂದು ಹೇಳಿದ್ದಾರೆ. ನಾರಾಯಣಸ್ವಾಮಿ ಅವರು ಬಾಗಿಲು ತೆರೆದಾಗ ದುಷ್ಕರ್ಮಿಗಳು ವೃದ್ಧ ದಂಪತಿ ಮೇಲೆ ಮುಗಿಬಿದ್ದು ಮನೆಯ ಸೋಪಾಗೆ ಅವರನ್ನು ಕಟ್ಟಿಹಾಕಿ. ಮನೆಯಲ್ಲಿದ್ದ 150 ಗ್ರಾಂ ಚಿನ್ನ, 250 ಗ್ರಾಂ ಬೆಳ್ಳಿ, ಹನ್ನೊಂದು ಸಾವಿರ ನಗದು ದೋಚಿ ಪರಾರಿಯಾಗಿದ್ದಾರೆ. ಈ ಬಗ್ಗೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…