ಪ್ರಮುಖ ಯಾತ್ರಾ ಸ್ಥಳಗಳಿಗೆ ರೋಪ್ ವೇ ಸೌಲಭ್ಯ

March 6, 2025
9:21 PM

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ, ಪರ್ವತ ಮಾಲಾ ಪರಿಯೋಜನೆಗೆ ಅನುಮೋದನೆ ನೀಡಲಾಗಿದ್ದು, ಕೇದಾರನಾಥ ಸೇರಿದಂತೆ ಪ್ರಮುಖ ಯಾತ್ರಾ ಸ್ಥಳಗಳಿಗೆ ರೋಪ್ ವೇ ಸೌಲಭ್ಯ ಕಲ್ಪಿಸುವ ಯೋಜನೆ ಸಾಕಾರಗೊಳ್ಳಲಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

Advertisement

ಪವಿತ್ರ ಚಾರ್ ಧಾಮ್ ಯಾತ್ರೆಯ ಮಹತ್ವದ ಸ್ಥಳವಾಗಿರುವ ಕೇದಾರನಾಥಕ್ಕೆ ಸೋನಪ್ರಯಾಗದಿಂದ 12.9 ಕಿಲೋಮೀಟರ್ ದೂರದ ರೋಪ್ ವೇ ನಿರ್ಮಾಣ ಮಾಡಲಾಗುವುದು. 4 ಸಾವಿರದ 81 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸೌಲಭ್ಯದಿಂದ ಯಾತ್ರಾರ್ಥಿಗಳಿಗೆ ಅನುಕೂಲವಾಗಲಿದ್ದು, 9 ಗಂಟೆಗಳ ಪ್ರಯಾಣದ ಅವಧಿ ಕೇವಲ 36 ನಿಮಿಷಗಳಿಗೆ ಇಳಿಕೆಯಾಗಲಿದೆ ಎಂದು ಹೇಳಿದರು. ಜೊತೆಗೆ, ಹೇಮಕುಂಡ ಸಾಹಿಬ್ ರೋಪ್ ವೇ ಯೋಜನೆಗೂ ಅನುಮತಿ ದೊರೆತಿದ್ದು, 2 ಸಾವಿರದ 730 ಕೋಟಿ ರೂಪಾಯಿ ವೆಚ್ಚದಲ್ಲಿ ಯೋಜನೆ ಕಾರ್ಯರೂಪಕ್ಕೆ ಬರಲಿದೆ. ವ್ಯಾಲಿ ಆಫ್ ಫ್ಲಾವರ್ಸ್ ಗೆ ಭೇಟಿ ನೀಡುವ ಪ್ರವಾಸಿಗಳಿಗೂ ಇದರಿಂದ ಅನುಕೂಲವಾಗಲಿದೆ ಎಂದು ತಿಳಿಸಿದರು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೊಂಕಣ ರೈಲ್ವೆ ಮಾರ್ಗದ ರೈಲುಗಳಿಗೆ ನಿರ್ಮಿಸಲಾದ ವಿದ್ಯುತ್ ಗ್ರಿಡ್ ಉದ್ಘಾಟನೆ
August 1, 2025
7:49 PM
by: The Rural Mirror ಸುದ್ದಿಜಾಲ
ಮೈಸೂರು ಮೃಗಾಲಯದ ಪ್ರವೇಶ ದರ ಹೆಚ್ಚಳ | ಶೇಕಡ 20 ರಷ್ಟು ಹೆಚ್ಚಳ
August 1, 2025
7:43 PM
by: The Rural Mirror ಸುದ್ದಿಜಾಲ
NCDCಗೆ 2 ಸಾವಿರ ಕೋ.ರೂ. ಅನುದಾನ | ಮಹಿಳೆಯರಿಗೆ, ಯವಕರಿಗೆ ಉದ್ಯೋಗಾವಕಾಶ
August 1, 2025
7:35 PM
by: The Rural Mirror ಸುದ್ದಿಜಾಲ
ರಾಜ್ಯದ 5 ಜಿಲ್ಲೆಗಳಲ್ಲಿ ಖಾದಿ ಚಟುವಟಿಕೆ ಉತ್ತೇಜಿಸಲು ಖಾದಿ ಮಂಡಳಿ ಸ್ಥಾಪನೆಗೆ ನಿರ್ಧಾರ
August 1, 2025
7:31 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group