ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ, ಪರ್ವತ ಮಾಲಾ ಪರಿಯೋಜನೆಗೆ ಅನುಮೋದನೆ ನೀಡಲಾಗಿದ್ದು, ಕೇದಾರನಾಥ ಸೇರಿದಂತೆ ಪ್ರಮುಖ ಯಾತ್ರಾ ಸ್ಥಳಗಳಿಗೆ ರೋಪ್ ವೇ ಸೌಲಭ್ಯ ಕಲ್ಪಿಸುವ ಯೋಜನೆ ಸಾಕಾರಗೊಳ್ಳಲಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
ಪವಿತ್ರ ಚಾರ್ ಧಾಮ್ ಯಾತ್ರೆಯ ಮಹತ್ವದ ಸ್ಥಳವಾಗಿರುವ ಕೇದಾರನಾಥಕ್ಕೆ ಸೋನಪ್ರಯಾಗದಿಂದ 12.9 ಕಿಲೋಮೀಟರ್ ದೂರದ ರೋಪ್ ವೇ ನಿರ್ಮಾಣ ಮಾಡಲಾಗುವುದು. 4 ಸಾವಿರದ 81 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸೌಲಭ್ಯದಿಂದ ಯಾತ್ರಾರ್ಥಿಗಳಿಗೆ ಅನುಕೂಲವಾಗಲಿದ್ದು, 9 ಗಂಟೆಗಳ ಪ್ರಯಾಣದ ಅವಧಿ ಕೇವಲ 36 ನಿಮಿಷಗಳಿಗೆ ಇಳಿಕೆಯಾಗಲಿದೆ ಎಂದು ಹೇಳಿದರು. ಜೊತೆಗೆ, ಹೇಮಕುಂಡ ಸಾಹಿಬ್ ರೋಪ್ ವೇ ಯೋಜನೆಗೂ ಅನುಮತಿ ದೊರೆತಿದ್ದು, 2 ಸಾವಿರದ 730 ಕೋಟಿ ರೂಪಾಯಿ ವೆಚ್ಚದಲ್ಲಿ ಯೋಜನೆ ಕಾರ್ಯರೂಪಕ್ಕೆ ಬರಲಿದೆ. ವ್ಯಾಲಿ ಆಫ್ ಫ್ಲಾವರ್ಸ್ ಗೆ ಭೇಟಿ ನೀಡುವ ಪ್ರವಾಸಿಗಳಿಗೂ ಇದರಿಂದ ಅನುಕೂಲವಾಗಲಿದೆ ಎಂದು ತಿಳಿಸಿದರು.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…