ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ, ಪರ್ವತ ಮಾಲಾ ಪರಿಯೋಜನೆಗೆ ಅನುಮೋದನೆ ನೀಡಲಾಗಿದ್ದು, ಕೇದಾರನಾಥ ಸೇರಿದಂತೆ ಪ್ರಮುಖ ಯಾತ್ರಾ ಸ್ಥಳಗಳಿಗೆ ರೋಪ್ ವೇ ಸೌಲಭ್ಯ ಕಲ್ಪಿಸುವ ಯೋಜನೆ ಸಾಕಾರಗೊಳ್ಳಲಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
ಪವಿತ್ರ ಚಾರ್ ಧಾಮ್ ಯಾತ್ರೆಯ ಮಹತ್ವದ ಸ್ಥಳವಾಗಿರುವ ಕೇದಾರನಾಥಕ್ಕೆ ಸೋನಪ್ರಯಾಗದಿಂದ 12.9 ಕಿಲೋಮೀಟರ್ ದೂರದ ರೋಪ್ ವೇ ನಿರ್ಮಾಣ ಮಾಡಲಾಗುವುದು. 4 ಸಾವಿರದ 81 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸೌಲಭ್ಯದಿಂದ ಯಾತ್ರಾರ್ಥಿಗಳಿಗೆ ಅನುಕೂಲವಾಗಲಿದ್ದು, 9 ಗಂಟೆಗಳ ಪ್ರಯಾಣದ ಅವಧಿ ಕೇವಲ 36 ನಿಮಿಷಗಳಿಗೆ ಇಳಿಕೆಯಾಗಲಿದೆ ಎಂದು ಹೇಳಿದರು. ಜೊತೆಗೆ, ಹೇಮಕುಂಡ ಸಾಹಿಬ್ ರೋಪ್ ವೇ ಯೋಜನೆಗೂ ಅನುಮತಿ ದೊರೆತಿದ್ದು, 2 ಸಾವಿರದ 730 ಕೋಟಿ ರೂಪಾಯಿ ವೆಚ್ಚದಲ್ಲಿ ಯೋಜನೆ ಕಾರ್ಯರೂಪಕ್ಕೆ ಬರಲಿದೆ. ವ್ಯಾಲಿ ಆಫ್ ಫ್ಲಾವರ್ಸ್ ಗೆ ಭೇಟಿ ನೀಡುವ ಪ್ರವಾಸಿಗಳಿಗೂ ಇದರಿಂದ ಅನುಕೂಲವಾಗಲಿದೆ ಎಂದು ತಿಳಿಸಿದರು.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…