ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ, ಪರ್ವತ ಮಾಲಾ ಪರಿಯೋಜನೆಗೆ ಅನುಮೋದನೆ ನೀಡಲಾಗಿದ್ದು, ಕೇದಾರನಾಥ ಸೇರಿದಂತೆ ಪ್ರಮುಖ ಯಾತ್ರಾ ಸ್ಥಳಗಳಿಗೆ ರೋಪ್ ವೇ ಸೌಲಭ್ಯ ಕಲ್ಪಿಸುವ ಯೋಜನೆ ಸಾಕಾರಗೊಳ್ಳಲಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
ಪವಿತ್ರ ಚಾರ್ ಧಾಮ್ ಯಾತ್ರೆಯ ಮಹತ್ವದ ಸ್ಥಳವಾಗಿರುವ ಕೇದಾರನಾಥಕ್ಕೆ ಸೋನಪ್ರಯಾಗದಿಂದ 12.9 ಕಿಲೋಮೀಟರ್ ದೂರದ ರೋಪ್ ವೇ ನಿರ್ಮಾಣ ಮಾಡಲಾಗುವುದು. 4 ಸಾವಿರದ 81 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸೌಲಭ್ಯದಿಂದ ಯಾತ್ರಾರ್ಥಿಗಳಿಗೆ ಅನುಕೂಲವಾಗಲಿದ್ದು, 9 ಗಂಟೆಗಳ ಪ್ರಯಾಣದ ಅವಧಿ ಕೇವಲ 36 ನಿಮಿಷಗಳಿಗೆ ಇಳಿಕೆಯಾಗಲಿದೆ ಎಂದು ಹೇಳಿದರು. ಜೊತೆಗೆ, ಹೇಮಕುಂಡ ಸಾಹಿಬ್ ರೋಪ್ ವೇ ಯೋಜನೆಗೂ ಅನುಮತಿ ದೊರೆತಿದ್ದು, 2 ಸಾವಿರದ 730 ಕೋಟಿ ರೂಪಾಯಿ ವೆಚ್ಚದಲ್ಲಿ ಯೋಜನೆ ಕಾರ್ಯರೂಪಕ್ಕೆ ಬರಲಿದೆ. ವ್ಯಾಲಿ ಆಫ್ ಫ್ಲಾವರ್ಸ್ ಗೆ ಭೇಟಿ ನೀಡುವ ಪ್ರವಾಸಿಗಳಿಗೂ ಇದರಿಂದ ಅನುಕೂಲವಾಗಲಿದೆ ಎಂದು ತಿಳಿಸಿದರು.
ಮೋಹಿತ್ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…
ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…