ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ, ಪರ್ವತ ಮಾಲಾ ಪರಿಯೋಜನೆಗೆ ಅನುಮೋದನೆ ನೀಡಲಾಗಿದ್ದು, ಕೇದಾರನಾಥ ಸೇರಿದಂತೆ ಪ್ರಮುಖ ಯಾತ್ರಾ ಸ್ಥಳಗಳಿಗೆ ರೋಪ್ ವೇ ಸೌಲಭ್ಯ ಕಲ್ಪಿಸುವ ಯೋಜನೆ ಸಾಕಾರಗೊಳ್ಳಲಿದೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
ಪವಿತ್ರ ಚಾರ್ ಧಾಮ್ ಯಾತ್ರೆಯ ಮಹತ್ವದ ಸ್ಥಳವಾಗಿರುವ ಕೇದಾರನಾಥಕ್ಕೆ ಸೋನಪ್ರಯಾಗದಿಂದ 12.9 ಕಿಲೋಮೀಟರ್ ದೂರದ ರೋಪ್ ವೇ ನಿರ್ಮಾಣ ಮಾಡಲಾಗುವುದು. 4 ಸಾವಿರದ 81 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸೌಲಭ್ಯದಿಂದ ಯಾತ್ರಾರ್ಥಿಗಳಿಗೆ ಅನುಕೂಲವಾಗಲಿದ್ದು, 9 ಗಂಟೆಗಳ ಪ್ರಯಾಣದ ಅವಧಿ ಕೇವಲ 36 ನಿಮಿಷಗಳಿಗೆ ಇಳಿಕೆಯಾಗಲಿದೆ ಎಂದು ಹೇಳಿದರು. ಜೊತೆಗೆ, ಹೇಮಕುಂಡ ಸಾಹಿಬ್ ರೋಪ್ ವೇ ಯೋಜನೆಗೂ ಅನುಮತಿ ದೊರೆತಿದ್ದು, 2 ಸಾವಿರದ 730 ಕೋಟಿ ರೂಪಾಯಿ ವೆಚ್ಚದಲ್ಲಿ ಯೋಜನೆ ಕಾರ್ಯರೂಪಕ್ಕೆ ಬರಲಿದೆ. ವ್ಯಾಲಿ ಆಫ್ ಫ್ಲಾವರ್ಸ್ ಗೆ ಭೇಟಿ ನೀಡುವ ಪ್ರವಾಸಿಗಳಿಗೂ ಇದರಿಂದ ಅನುಕೂಲವಾಗಲಿದೆ ಎಂದು ತಿಳಿಸಿದರು.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…