ಓ ಕೆಂಪು ಗುಲಾಬಿ ಹೂವೇ…..
ನೀನೇ ಅಲ್ಲವೇ ಸುಂದರ ಚೆಲುವೆ
ಪದಗಳೇ ಸಿಗುತ್ತಿಲ್ಲ ನಿನ್ನ ವರ್ಣಿಸಲು
ಆದರೂ ಹೊರಟೆ ನಾ ನಿನ್ನ ಬಣ್ಣಿಸಲು
ಮೃದು ಕೋಮಲ ಕುಸುಮ ನಿನ್ನದು
ಎಲ್ಲರ ಕಣ್ಮನ ಸೆಳೆವ ಅಂದ ನಿನ್ನದು
ನಿನ್ನನೊಮ್ಮೆ ಹಿಡಿದು ಸ್ಪರ್ಶಿಸಲು
ಮನದಲ್ಲಿ ಅದೇನೋ ಪುಳಕವು
ಹೂಗಳ ಜಗದಿ ಮೆರೆಯೋ ರಾಣಿ ನೀನು…
ಸೌಂದರ್ಯ ರಾಶಿಗೆ ಸೋತಿಹುದು ರಾಣಿ ಜೇನು
ನಿನ್ನದೇ ಕುರಿತು ಮನದಿ ಮೂಡಿತೊಂದು ಕವಿತೆ
ಕೇಳು ನನ್ನ ಮನದನ್ನೆ, ಓ ಸುಲಲಿತೆ
ನಿನ್ನ ನೋಡಿದವರ ಮೊಗದಲ್ಲಿ ನಲಿವು
ಮರೆಯಾಗುವುದು ಮನದಿ ತುಂಬಿದ್ದ ನೋವು
ಭಗವಂತ ನಿನ್ನ ಸುತ್ತ ಮುಳ್ಳು ಇಟ್ಟ ಸರಿಯೇನು?
ಅದೇ ನಿನಗೆ ರಕ್ಷಣೆ,ಕ್ಷಮಿಸು ಮರೆತುಬಿಟ್ಟೆ ನಾನು
# ಅಪೂರ್ವ ಚೇತನ್ ಪೆರಂದೋಡಿ
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…