ಓ ಕೆಂಪು ಗುಲಾಬಿ ಹೂವೇ…..
ನೀನೇ ಅಲ್ಲವೇ ಸುಂದರ ಚೆಲುವೆ
ಪದಗಳೇ ಸಿಗುತ್ತಿಲ್ಲ ನಿನ್ನ ವರ್ಣಿಸಲು
ಆದರೂ ಹೊರಟೆ ನಾ ನಿನ್ನ ಬಣ್ಣಿಸಲು
ಮೃದು ಕೋಮಲ ಕುಸುಮ ನಿನ್ನದು
ಎಲ್ಲರ ಕಣ್ಮನ ಸೆಳೆವ ಅಂದ ನಿನ್ನದು
ನಿನ್ನನೊಮ್ಮೆ ಹಿಡಿದು ಸ್ಪರ್ಶಿಸಲು
ಮನದಲ್ಲಿ ಅದೇನೋ ಪುಳಕವು
ಹೂಗಳ ಜಗದಿ ಮೆರೆಯೋ ರಾಣಿ ನೀನು…
ಸೌಂದರ್ಯ ರಾಶಿಗೆ ಸೋತಿಹುದು ರಾಣಿ ಜೇನು
ನಿನ್ನದೇ ಕುರಿತು ಮನದಿ ಮೂಡಿತೊಂದು ಕವಿತೆ
ಕೇಳು ನನ್ನ ಮನದನ್ನೆ, ಓ ಸುಲಲಿತೆ
ನಿನ್ನ ನೋಡಿದವರ ಮೊಗದಲ್ಲಿ ನಲಿವು
ಮರೆಯಾಗುವುದು ಮನದಿ ತುಂಬಿದ್ದ ನೋವು
ಭಗವಂತ ನಿನ್ನ ಸುತ್ತ ಮುಳ್ಳು ಇಟ್ಟ ಸರಿಯೇನು?
ಅದೇ ನಿನಗೆ ರಕ್ಷಣೆ,ಕ್ಷಮಿಸು ಮರೆತುಬಿಟ್ಟೆ ನಾನು
# ಅಪೂರ್ವ ಚೇತನ್ ಪೆರಂದೋಡಿ
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…
ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…