ಓ ಕೆಂಪು ಗುಲಾಬಿ ಹೂವೇ…..
ನೀನೇ ಅಲ್ಲವೇ ಸುಂದರ ಚೆಲುವೆ
ಪದಗಳೇ ಸಿಗುತ್ತಿಲ್ಲ ನಿನ್ನ ವರ್ಣಿಸಲು
ಆದರೂ ಹೊರಟೆ ನಾ ನಿನ್ನ ಬಣ್ಣಿಸಲು
ಮೃದು ಕೋಮಲ ಕುಸುಮ ನಿನ್ನದು
ಎಲ್ಲರ ಕಣ್ಮನ ಸೆಳೆವ ಅಂದ ನಿನ್ನದು
ನಿನ್ನನೊಮ್ಮೆ ಹಿಡಿದು ಸ್ಪರ್ಶಿಸಲು
ಮನದಲ್ಲಿ ಅದೇನೋ ಪುಳಕವು
ಹೂಗಳ ಜಗದಿ ಮೆರೆಯೋ ರಾಣಿ ನೀನು…
ಸೌಂದರ್ಯ ರಾಶಿಗೆ ಸೋತಿಹುದು ರಾಣಿ ಜೇನು
ನಿನ್ನದೇ ಕುರಿತು ಮನದಿ ಮೂಡಿತೊಂದು ಕವಿತೆ
ಕೇಳು ನನ್ನ ಮನದನ್ನೆ, ಓ ಸುಲಲಿತೆ
ನಿನ್ನ ನೋಡಿದವರ ಮೊಗದಲ್ಲಿ ನಲಿವು
ಮರೆಯಾಗುವುದು ಮನದಿ ತುಂಬಿದ್ದ ನೋವು
ಭಗವಂತ ನಿನ್ನ ಸುತ್ತ ಮುಳ್ಳು ಇಟ್ಟ ಸರಿಯೇನು?
ಅದೇ ನಿನಗೆ ರಕ್ಷಣೆ,ಕ್ಷಮಿಸು ಮರೆತುಬಿಟ್ಟೆ ನಾನು
# ಅಪೂರ್ವ ಚೇತನ್ ಪೆರಂದೋಡಿ
ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…
ಭಾರತದ ಕೃಷಿ ರಫ್ತು ಉತ್ಪನ್ನಗಳ ಸಂಖ್ಯೆ 280ರಿಂದ ಸುಮಾರು 500ಕ್ಕೆ ಏರಿಕೆಯಾಗಿದೆ. ₹4.61…
ದೊಡ್ಡಬಳ್ಳಾಪುರ ಭಾಗದಲ್ಲಿ ಅಡಿಕೆ ಹೊಂಬಾಳೆಗಳನ್ನು ಕಳ್ಳರು ಕದ್ದೊಯ್ಯುತ್ತಿರುವ ಘಟನೆಗಳು ಹೆಚ್ಚಾಗಿವೆ. ಇದರಿಂದ ರೈತರು…
ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಕಾವೇರಿ ನೀರಿನ ಮಟ್ಟ…
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…
ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…