ಪ್ರಮುಖ

#APMC | ಇಂದು ಸಚಿವ ಸಂಪುಟ ಸಭೆಯಲ್ಲಿ ಏನೇನು ನಿರ್ಧಾರಗಳಾಯ್ತು..? | ಎಪಿಎಂಸಿಗಳಿಗೆ ಮೂಲಸೌಕರ್ಯ ಒದಗಿಸಲು 130 ಕೋಟಿ ರೂ ಮೀಸಲು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸಹಕಾರ ಇಲಾಖೆ ಅಡಿಯಲ್ಲಿ ಎಪಿಎಂಸಿಗಳಿಗೆ ರಸ್ತೆ ನಿರ್ಮಾಣ ಮಾಡಲು, ಮೂಲಭೂತ ಸೌಲಭ್ಯ ಒದಗಿಸಿಕೊಡಲು 130.40 ಕೋಟಿ ಮಂಜೂರು ಮಾಡುವ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ ಎಂದು ಸಚಿವ ಎಚ್ ಕೆ ಪಾಟೀಲ್  ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ  ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಅವರು ಮಾಹಿತಿ ನೀಡಿದರು.

Advertisement
Advertisement

ಸಚಿವ ಸಂಪುಟದಲ್ಲಿ 15 ವಿಷಯಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಮೊಟ್ಟೆ ನೀಡುವ ವಿಚಾರಕ್ಕೆ ಸಂಬಂಧಿಸಿ ಚರ್ಚೆ ನಡೆದಿದ್ದು, ವಿಭಾಗವಾರು ಮೊಟ್ಟೆ ಖರೀದಿಸಿ ವಿತರಿಸುವ ನಿರ್ಣಯ ಕೈಗೊಳ್ಳಲಾಗಿದೆ. 297 ಕೋಟಿ ರೂಪಾಯಿ ಅನುದಾನ ಕೊಡಲಾಗಿದೆ. ಮಾರುಕಟ್ಟೆ ದರ ಮೀರದಂತೆ ಕೊಂಡುಕೊಳ್ಳಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಹಿಂದುಳಿದ ಆಯೋಗದ ಸಲಹೆಯಂತೆ ಹಾಗೂ ನ್ಯಾಯಾಲಯದ ಸಲಹೆಯಂತೆ ಹಿಂದುಳಿದ ವರ್ಗದ ಜಾತಿ ಪಟ್ಟಿಯ 3ಎ ಯಲ್ಲಿ ಇರುವ ಕೊಡಗರು ಎಂಬುದರ ಬದಲಾಗಿ ಕೊಡವ / ಕೊಡವರು ಅಂತ ಬದಲಾವಣೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು. ರಾಷ್ಟ್ರೀಯ ಉದ್ಯಾನವನ, ವನ್ಯಜೀವಿ ಧಾಮಗಳ ಸುತ್ತಮುತ್ತಲಿನ ಪ್ರದೇಶ ಪರಿಸರ ಸೂಕ್ಷ ವಲಯವೆಂದು ಘೋಷಣೆ ಮಾಡಲು ಅಧ್ಯಯನಕ್ಕೆ ಸಚಿವ ಸಂಪುಟ ಉಪ ಸಮಿತಿಯ ರಚನೆಗೆ ಹಸಿರು ನಿಶಾನೆ ತೋರಲಾಗಿದೆ.

67 ಕೈದಿಗಳ ಬಿಡುಗಡೆಗೆ ಒಪ್ಪಿಗೆ : ಸನ್ನಡತೆ ಆಧಾರದಲ್ಲಿ 67 ಕೈದಿಗಳ ಬಿಡುಗಡೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಭಾರತ ಸರ್ಕಾರದ ಮಾರ್ಗಸೂಚಿಯ ಪ್ರಕಾರ ಸನ್ನಡೆತೆಯ ಆಧಾರದಲ್ಲಿ 67 ಕೈದಿಗಳ ಬಿಡುಗಡೆಗೆ ನಿರ್ಣಯ ಕೈಗೊಳ್ಳಲಾಗಿದೆ. ಸ್ವಾತಂತ್ರ್ಯ ದಿನಾಚರಣೆಯಂದು ಕೈದಿಗಳ ಬಿಡುಗಡೆ ಮಾಡಲಾಗುವುದು ಎಂದು ಅವರು ತಿಳಿಸಿದರು. ಬೆಂಗಳೂರು ಸೆಂಟ್ರಲ್ ಜೈಲ್​​ನಿಂದ 24, ಮೈಸೂರಿನಲ್ಲಿ 8, ಬೆಳಗಾವಿ 2, ಕಲಬುರ್ಗಿ 5, ಶಿವಮೊಗ್ಗ 6, ಬಳ್ಳಾರಿ 8, ಧಾರವಾಡ 2 ಮಂದಿ ಕೈದಿಗಳ ಬಿಡುಗಡೆಗೆ ನಿರ್ಣಯ ಕೈಗೊಳ್ಳಲಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೆಳೆವಿಮೆ ಯೋಜನೆ | ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ

ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…

5 hours ago

41 ವರ್ಷಗಳ ಬಳಿಕ ಭಾರತದ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳ ಅಂತರಿಕ್ಷ ಯಾನ

ಬಹುನಿರೀಕ್ಷಿತ ಆಕ್ಸಿಯಮ್​ ಮಿಷನ್​-4 ಇಂದು ಭಾರತೀಯ ಕಾಲಮಾನ ಮಧ್ಯಾಹ್ನ 12 ಗಂಟೆ 1ನಿಮಿಷಕ್ಕೆ…

9 hours ago

ದೇಶದ ಬಡತನ ಪ್ರಮಾಣ ಗಣನೀಯ ಇಳಿಕೆ

ಕಳೆದ 11 ವರ್ಷಗಳಲ್ಲಿ ದೇಶದ ಬಡತನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ ಎಂದು ಕೇಂದ್ರ…

11 hours ago

ರೈತರು ನ್ಯಾನೋ ಯೂರಿಯಾ ಬಳಸುವಂತೆ ಕೃಷಿ ಇಲಾಖೆ ಸಲಹೆ

ಗದಗ ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಸಾಕಷ್ಟು ಮಳೆಯಾಗಿ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿದೆ. ಈ…

12 hours ago

ಮಾವಿನ ಬೆಳೆಗೆ ಬೆಂಬಲ ಬೆಲೆ ಘೋಷಣೆ

ರಾಜ್ಯದ ಮಾವು ಬೆಳೆಗಾರರ ಹಿತ ಕಾಪಾಡುವಂತೆ ಕೇಂದ್ರ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ…

12 hours ago

ಹವಾಮಾನ ವರದಿ | 25-06-2025 | ಜೂ.29 ರ ನಂತರ ಹೇಗಿರಲಿದೆ ಹವಾಮಾನ..? | ಜು.4 ರಿಂದ ಮತ್ತೆ ಮಳೆ ಚುರುಕಾಗುತ್ತದೆಯೇ..?

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ, ಒಡಿಶಾ ಕರಾವಳಿಗೆ ತಲುಪಿರುವ ತಿರುವಿಕೆಯು ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳುವ…

13 hours ago