Advertisement
ಪ್ರಮುಖ

#APMC | ಇಂದು ಸಚಿವ ಸಂಪುಟ ಸಭೆಯಲ್ಲಿ ಏನೇನು ನಿರ್ಧಾರಗಳಾಯ್ತು..? | ಎಪಿಎಂಸಿಗಳಿಗೆ ಮೂಲಸೌಕರ್ಯ ಒದಗಿಸಲು 130 ಕೋಟಿ ರೂ ಮೀಸಲು |

Share

ಸಹಕಾರ ಇಲಾಖೆ ಅಡಿಯಲ್ಲಿ ಎಪಿಎಂಸಿಗಳಿಗೆ ರಸ್ತೆ ನಿರ್ಮಾಣ ಮಾಡಲು, ಮೂಲಭೂತ ಸೌಲಭ್ಯ ಒದಗಿಸಿಕೊಡಲು 130.40 ಕೋಟಿ ಮಂಜೂರು ಮಾಡುವ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ ಎಂದು ಸಚಿವ ಎಚ್ ಕೆ ಪಾಟೀಲ್  ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ  ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಅವರು ಮಾಹಿತಿ ನೀಡಿದರು.

ಸಚಿವ ಸಂಪುಟದಲ್ಲಿ 15 ವಿಷಯಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಮೊಟ್ಟೆ ನೀಡುವ ವಿಚಾರಕ್ಕೆ ಸಂಬಂಧಿಸಿ ಚರ್ಚೆ ನಡೆದಿದ್ದು, ವಿಭಾಗವಾರು ಮೊಟ್ಟೆ ಖರೀದಿಸಿ ವಿತರಿಸುವ ನಿರ್ಣಯ ಕೈಗೊಳ್ಳಲಾಗಿದೆ. 297 ಕೋಟಿ ರೂಪಾಯಿ ಅನುದಾನ ಕೊಡಲಾಗಿದೆ. ಮಾರುಕಟ್ಟೆ ದರ ಮೀರದಂತೆ ಕೊಂಡುಕೊಳ್ಳಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಹಿಂದುಳಿದ ಆಯೋಗದ ಸಲಹೆಯಂತೆ ಹಾಗೂ ನ್ಯಾಯಾಲಯದ ಸಲಹೆಯಂತೆ ಹಿಂದುಳಿದ ವರ್ಗದ ಜಾತಿ ಪಟ್ಟಿಯ 3ಎ ಯಲ್ಲಿ ಇರುವ ಕೊಡಗರು ಎಂಬುದರ ಬದಲಾಗಿ ಕೊಡವ / ಕೊಡವರು ಅಂತ ಬದಲಾವಣೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು. ರಾಷ್ಟ್ರೀಯ ಉದ್ಯಾನವನ, ವನ್ಯಜೀವಿ ಧಾಮಗಳ ಸುತ್ತಮುತ್ತಲಿನ ಪ್ರದೇಶ ಪರಿಸರ ಸೂಕ್ಷ ವಲಯವೆಂದು ಘೋಷಣೆ ಮಾಡಲು ಅಧ್ಯಯನಕ್ಕೆ ಸಚಿವ ಸಂಪುಟ ಉಪ ಸಮಿತಿಯ ರಚನೆಗೆ ಹಸಿರು ನಿಶಾನೆ ತೋರಲಾಗಿದೆ.

67 ಕೈದಿಗಳ ಬಿಡುಗಡೆಗೆ ಒಪ್ಪಿಗೆ : ಸನ್ನಡತೆ ಆಧಾರದಲ್ಲಿ 67 ಕೈದಿಗಳ ಬಿಡುಗಡೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಭಾರತ ಸರ್ಕಾರದ ಮಾರ್ಗಸೂಚಿಯ ಪ್ರಕಾರ ಸನ್ನಡೆತೆಯ ಆಧಾರದಲ್ಲಿ 67 ಕೈದಿಗಳ ಬಿಡುಗಡೆಗೆ ನಿರ್ಣಯ ಕೈಗೊಳ್ಳಲಾಗಿದೆ. ಸ್ವಾತಂತ್ರ್ಯ ದಿನಾಚರಣೆಯಂದು ಕೈದಿಗಳ ಬಿಡುಗಡೆ ಮಾಡಲಾಗುವುದು ಎಂದು ಅವರು ತಿಳಿಸಿದರು. ಬೆಂಗಳೂರು ಸೆಂಟ್ರಲ್ ಜೈಲ್​​ನಿಂದ 24, ಮೈಸೂರಿನಲ್ಲಿ 8, ಬೆಳಗಾವಿ 2, ಕಲಬುರ್ಗಿ 5, ಶಿವಮೊಗ್ಗ 6, ಬಳ್ಳಾರಿ 8, ಧಾರವಾಡ 2 ಮಂದಿ ಕೈದಿಗಳ ಬಿಡುಗಡೆಗೆ ನಿರ್ಣಯ ಕೈಗೊಳ್ಳಲಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

15 hours ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

18 hours ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

22 hours ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

2 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago