ಸಹಕಾರ ಇಲಾಖೆ ಅಡಿಯಲ್ಲಿ ಎಪಿಎಂಸಿಗಳಿಗೆ ರಸ್ತೆ ನಿರ್ಮಾಣ ಮಾಡಲು, ಮೂಲಭೂತ ಸೌಲಭ್ಯ ಒದಗಿಸಿಕೊಡಲು 130.40 ಕೋಟಿ ಮಂಜೂರು ಮಾಡುವ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ ಎಂದು ಸಚಿವ ಎಚ್ ಕೆ ಪಾಟೀಲ್ ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಅವರು ಮಾಹಿತಿ ನೀಡಿದರು.
ಸಚಿವ ಸಂಪುಟದಲ್ಲಿ 15 ವಿಷಯಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಮೊಟ್ಟೆ ನೀಡುವ ವಿಚಾರಕ್ಕೆ ಸಂಬಂಧಿಸಿ ಚರ್ಚೆ ನಡೆದಿದ್ದು, ವಿಭಾಗವಾರು ಮೊಟ್ಟೆ ಖರೀದಿಸಿ ವಿತರಿಸುವ ನಿರ್ಣಯ ಕೈಗೊಳ್ಳಲಾಗಿದೆ. 297 ಕೋಟಿ ರೂಪಾಯಿ ಅನುದಾನ ಕೊಡಲಾಗಿದೆ. ಮಾರುಕಟ್ಟೆ ದರ ಮೀರದಂತೆ ಕೊಂಡುಕೊಳ್ಳಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಹಿಂದುಳಿದ ಆಯೋಗದ ಸಲಹೆಯಂತೆ ಹಾಗೂ ನ್ಯಾಯಾಲಯದ ಸಲಹೆಯಂತೆ ಹಿಂದುಳಿದ ವರ್ಗದ ಜಾತಿ ಪಟ್ಟಿಯ 3ಎ ಯಲ್ಲಿ ಇರುವ ಕೊಡಗರು ಎಂಬುದರ ಬದಲಾಗಿ ಕೊಡವ / ಕೊಡವರು ಅಂತ ಬದಲಾವಣೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು. ರಾಷ್ಟ್ರೀಯ ಉದ್ಯಾನವನ, ವನ್ಯಜೀವಿ ಧಾಮಗಳ ಸುತ್ತಮುತ್ತಲಿನ ಪ್ರದೇಶ ಪರಿಸರ ಸೂಕ್ಷ ವಲಯವೆಂದು ಘೋಷಣೆ ಮಾಡಲು ಅಧ್ಯಯನಕ್ಕೆ ಸಚಿವ ಸಂಪುಟ ಉಪ ಸಮಿತಿಯ ರಚನೆಗೆ ಹಸಿರು ನಿಶಾನೆ ತೋರಲಾಗಿದೆ.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…