ಸಹಕಾರ ಇಲಾಖೆ ಅಡಿಯಲ್ಲಿ ಎಪಿಎಂಸಿಗಳಿಗೆ ರಸ್ತೆ ನಿರ್ಮಾಣ ಮಾಡಲು, ಮೂಲಭೂತ ಸೌಲಭ್ಯ ಒದಗಿಸಿಕೊಡಲು 130.40 ಕೋಟಿ ಮಂಜೂರು ಮಾಡುವ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ ಎಂದು ಸಚಿವ ಎಚ್ ಕೆ ಪಾಟೀಲ್ ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಅವರು ಮಾಹಿತಿ ನೀಡಿದರು.
ಸಚಿವ ಸಂಪುಟದಲ್ಲಿ 15 ವಿಷಯಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಮೊಟ್ಟೆ ನೀಡುವ ವಿಚಾರಕ್ಕೆ ಸಂಬಂಧಿಸಿ ಚರ್ಚೆ ನಡೆದಿದ್ದು, ವಿಭಾಗವಾರು ಮೊಟ್ಟೆ ಖರೀದಿಸಿ ವಿತರಿಸುವ ನಿರ್ಣಯ ಕೈಗೊಳ್ಳಲಾಗಿದೆ. 297 ಕೋಟಿ ರೂಪಾಯಿ ಅನುದಾನ ಕೊಡಲಾಗಿದೆ. ಮಾರುಕಟ್ಟೆ ದರ ಮೀರದಂತೆ ಕೊಂಡುಕೊಳ್ಳಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಹಿಂದುಳಿದ ಆಯೋಗದ ಸಲಹೆಯಂತೆ ಹಾಗೂ ನ್ಯಾಯಾಲಯದ ಸಲಹೆಯಂತೆ ಹಿಂದುಳಿದ ವರ್ಗದ ಜಾತಿ ಪಟ್ಟಿಯ 3ಎ ಯಲ್ಲಿ ಇರುವ ಕೊಡಗರು ಎಂಬುದರ ಬದಲಾಗಿ ಕೊಡವ / ಕೊಡವರು ಅಂತ ಬದಲಾವಣೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು. ರಾಷ್ಟ್ರೀಯ ಉದ್ಯಾನವನ, ವನ್ಯಜೀವಿ ಧಾಮಗಳ ಸುತ್ತಮುತ್ತಲಿನ ಪ್ರದೇಶ ಪರಿಸರ ಸೂಕ್ಷ ವಲಯವೆಂದು ಘೋಷಣೆ ಮಾಡಲು ಅಧ್ಯಯನಕ್ಕೆ ಸಚಿವ ಸಂಪುಟ ಉಪ ಸಮಿತಿಯ ರಚನೆಗೆ ಹಸಿರು ನಿಶಾನೆ ತೋರಲಾಗಿದೆ.
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…
ಬಾಂಗ್ಲಾದೇಶದಲ್ಲಿ ಭಾರೀ ಮಳೆಯಿಂದ 44 ಮಂದಿ ಮೃತಪಟ್ಟಿದ್ದು, 10 ಲಕ್ಷಕ್ಕೂ ಹೆಚ್ಚು ಜನರು…
ರಾಜ್ಯದಲ್ಲಿ ಮುಂದಿನ 10 ದಿನಗಳವರೆಗೆ ಜೋರು ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. ಕರಾವಳಿಯಲ್ಲಿ ಜುಲೈ…
ಅಮರನಾಥ ಯಾತ್ರೆ ಆರಂಭವಾದ ಕೆಲವೇ ದಿನಗಳಲ್ಲಿ ಹಿಮ ಶಿವಲಿಂಗವು 90%ಕ್ಕೂ ಹೆಚ್ಚು ಕರಗಿರುವುದಾಗಿ…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ…
ಎಲ್ ನಿನೊ ಪರಿಣಾಮದಿಂದ 2027ರಲ್ಲಿ ಎಣ್ಣೆ ಸಾರ್ಡಿನ್ ಮೀನುಗಳ ಉತ್ಪಾದನೆ ಕುಸಿಯುವ ಸಾಧ್ಯತೆ…