Advertisement
ಪ್ರಮುಖ

#APMC | ಇಂದು ಸಚಿವ ಸಂಪುಟ ಸಭೆಯಲ್ಲಿ ಏನೇನು ನಿರ್ಧಾರಗಳಾಯ್ತು..? | ಎಪಿಎಂಸಿಗಳಿಗೆ ಮೂಲಸೌಕರ್ಯ ಒದಗಿಸಲು 130 ಕೋಟಿ ರೂ ಮೀಸಲು |

Share

ಸಹಕಾರ ಇಲಾಖೆ ಅಡಿಯಲ್ಲಿ ಎಪಿಎಂಸಿಗಳಿಗೆ ರಸ್ತೆ ನಿರ್ಮಾಣ ಮಾಡಲು, ಮೂಲಭೂತ ಸೌಲಭ್ಯ ಒದಗಿಸಿಕೊಡಲು 130.40 ಕೋಟಿ ಮಂಜೂರು ಮಾಡುವ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ ಎಂದು ಸಚಿವ ಎಚ್ ಕೆ ಪಾಟೀಲ್  ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ  ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಅವರು ಮಾಹಿತಿ ನೀಡಿದರು.

ಸಚಿವ ಸಂಪುಟದಲ್ಲಿ 15 ವಿಷಯಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಮೊಟ್ಟೆ ನೀಡುವ ವಿಚಾರಕ್ಕೆ ಸಂಬಂಧಿಸಿ ಚರ್ಚೆ ನಡೆದಿದ್ದು, ವಿಭಾಗವಾರು ಮೊಟ್ಟೆ ಖರೀದಿಸಿ ವಿತರಿಸುವ ನಿರ್ಣಯ ಕೈಗೊಳ್ಳಲಾಗಿದೆ. 297 ಕೋಟಿ ರೂಪಾಯಿ ಅನುದಾನ ಕೊಡಲಾಗಿದೆ. ಮಾರುಕಟ್ಟೆ ದರ ಮೀರದಂತೆ ಕೊಂಡುಕೊಳ್ಳಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಹಿಂದುಳಿದ ಆಯೋಗದ ಸಲಹೆಯಂತೆ ಹಾಗೂ ನ್ಯಾಯಾಲಯದ ಸಲಹೆಯಂತೆ ಹಿಂದುಳಿದ ವರ್ಗದ ಜಾತಿ ಪಟ್ಟಿಯ 3ಎ ಯಲ್ಲಿ ಇರುವ ಕೊಡಗರು ಎಂಬುದರ ಬದಲಾಗಿ ಕೊಡವ / ಕೊಡವರು ಅಂತ ಬದಲಾವಣೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು. ರಾಷ್ಟ್ರೀಯ ಉದ್ಯಾನವನ, ವನ್ಯಜೀವಿ ಧಾಮಗಳ ಸುತ್ತಮುತ್ತಲಿನ ಪ್ರದೇಶ ಪರಿಸರ ಸೂಕ್ಷ ವಲಯವೆಂದು ಘೋಷಣೆ ಮಾಡಲು ಅಧ್ಯಯನಕ್ಕೆ ಸಚಿವ ಸಂಪುಟ ಉಪ ಸಮಿತಿಯ ರಚನೆಗೆ ಹಸಿರು ನಿಶಾನೆ ತೋರಲಾಗಿದೆ.

67 ಕೈದಿಗಳ ಬಿಡುಗಡೆಗೆ ಒಪ್ಪಿಗೆ : ಸನ್ನಡತೆ ಆಧಾರದಲ್ಲಿ 67 ಕೈದಿಗಳ ಬಿಡುಗಡೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಭಾರತ ಸರ್ಕಾರದ ಮಾರ್ಗಸೂಚಿಯ ಪ್ರಕಾರ ಸನ್ನಡೆತೆಯ ಆಧಾರದಲ್ಲಿ 67 ಕೈದಿಗಳ ಬಿಡುಗಡೆಗೆ ನಿರ್ಣಯ ಕೈಗೊಳ್ಳಲಾಗಿದೆ. ಸ್ವಾತಂತ್ರ್ಯ ದಿನಾಚರಣೆಯಂದು ಕೈದಿಗಳ ಬಿಡುಗಡೆ ಮಾಡಲಾಗುವುದು ಎಂದು ಅವರು ತಿಳಿಸಿದರು. ಬೆಂಗಳೂರು ಸೆಂಟ್ರಲ್ ಜೈಲ್​​ನಿಂದ 24, ಮೈಸೂರಿನಲ್ಲಿ 8, ಬೆಳಗಾವಿ 2, ಕಲಬುರ್ಗಿ 5, ಶಿವಮೊಗ್ಗ 6, ಬಳ್ಳಾರಿ 8, ಧಾರವಾಡ 2 ಮಂದಿ ಕೈದಿಗಳ ಬಿಡುಗಡೆಗೆ ನಿರ್ಣಯ ಕೈಗೊಳ್ಳಲಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

44 minutes ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

10 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

10 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

12 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

15 hours ago