ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ- NCDCಗೆ ಮುಂದಿನ ನಾಲ್ಕು ವರ್ಷಗಳಿಗಾಗಿ ಸಚಿವ ಸಂಪುಟ 2 ಸಾವಿರ ಕೋಟಿ ರೂಪಾಯಿ ಅನುದಾನ ಮಂಜೂರು ಮಾಡಿರುವುದಕ್ಕೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಪ್ರಧಾನಿ ಅವರ ‘ಸಹಕಾರದಿಂದ ಸಮೃದ್ಧಿ’ ಎಂಬ ಮಂತ್ರಕ್ಕೆ ಅನುಗುಣವಾಗಿ ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮವು ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಇದು ಸಹಕಾರಿಗಳಿಗೆ ಹೊಸ ಯೋಜನೆಗಳನ್ನು ಆರಂಭಿಸಲು, ಘಟಕಗಳನ್ನು ವಿಸ್ತರಿಸಲು ಮತ್ತು ಸಾಲಗಳನ್ನು ನೀಡಲು ಸಹಾಯ ಮಾಡಲಿದೆ ಎಂದು ಹೇಳಿದ್ದಾರೆ. ಕೇಂದ್ರ ಸಂಪುಟದ ನಿರ್ಧಾರದಿಂದ ಸಹಕಾರಿ ಸಂಘಗಳೊಂದಿಗೆ ಸಂಬಂಧ ಹೊಂದಿರುವ ಕೋಟ್ಯಂತರ ಸದಸ್ಯರಿಗೆ ಪ್ರಯೋಜನವಾಗಲಿದೆ. ಮಹಿಳೆಯರು ಸ್ವಾವಲಂಬಿಗಳಾಗಲಿದ್ದಾರೆ ಮತ್ತು ಯುವಕರಿಗೆ ಉದ್ಯೋಗಾವಕಾಶಗಳು ದೊರೆಯಲಿವೆ. ದೇಶಾದ್ಯಂತ ಇರುವ ಸಹಕಾರಿ ವಲಯದ ಪರವಾಗಿ ಈ ಕಲ್ಯಾಣದ ನಿರ್ಧಾರಕ್ಕಾಗಿ ತಾವು ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಅಮಿತ್ ಶಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…
ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"