ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ- NCDCಗೆ ಮುಂದಿನ ನಾಲ್ಕು ವರ್ಷಗಳಿಗಾಗಿ ಸಚಿವ ಸಂಪುಟ 2 ಸಾವಿರ ಕೋಟಿ ರೂಪಾಯಿ ಅನುದಾನ ಮಂಜೂರು ಮಾಡಿರುವುದಕ್ಕೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಪ್ರಧಾನಿ ಅವರ ‘ಸಹಕಾರದಿಂದ ಸಮೃದ್ಧಿ’ ಎಂಬ ಮಂತ್ರಕ್ಕೆ ಅನುಗುಣವಾಗಿ ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮವು ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಇದು ಸಹಕಾರಿಗಳಿಗೆ ಹೊಸ ಯೋಜನೆಗಳನ್ನು ಆರಂಭಿಸಲು, ಘಟಕಗಳನ್ನು ವಿಸ್ತರಿಸಲು ಮತ್ತು ಸಾಲಗಳನ್ನು ನೀಡಲು ಸಹಾಯ ಮಾಡಲಿದೆ ಎಂದು ಹೇಳಿದ್ದಾರೆ. ಕೇಂದ್ರ ಸಂಪುಟದ ನಿರ್ಧಾರದಿಂದ ಸಹಕಾರಿ ಸಂಘಗಳೊಂದಿಗೆ ಸಂಬಂಧ ಹೊಂದಿರುವ ಕೋಟ್ಯಂತರ ಸದಸ್ಯರಿಗೆ ಪ್ರಯೋಜನವಾಗಲಿದೆ. ಮಹಿಳೆಯರು ಸ್ವಾವಲಂಬಿಗಳಾಗಲಿದ್ದಾರೆ ಮತ್ತು ಯುವಕರಿಗೆ ಉದ್ಯೋಗಾವಕಾಶಗಳು ದೊರೆಯಲಿವೆ. ದೇಶಾದ್ಯಂತ ಇರುವ ಸಹಕಾರಿ ವಲಯದ ಪರವಾಗಿ ಈ ಕಲ್ಯಾಣದ ನಿರ್ಧಾರಕ್ಕಾಗಿ ತಾವು ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಅಮಿತ್ ಶಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…