Advertisement
ರಾಷ್ಟ್ರೀಯ

ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್‌ ಅವರಿಂದ ಮುಸ್ಲಿಂ ಮುಖಂಡರ ಭೇಟಿ | 75 ನಿಮಿಷದ ಮಾತುಕತೆಯಲ್ಲಿ ಸಹೋದರತೆ, ಧಾರ್ಮಿಕ ಸೌಹಾರ್ದತೆ ಕುರಿತು ಚರ್ಚೆ |

Share

ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮುಖ್ಯಸ್ಥ ಮೋಹನ್ ಭಾಗವತ್ ಅವರು ಗುರುವಾರ ಮುಸ್ಲಿಂ ಮುಖಂಡ ಡಾ ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ ಸೇರಿದಂತೆ ಅನೇಕ ಮುಸ್ಲಿಂ ಮುಖಂಡರನ್ನು ದೆಹಲಿಯಲ್ಲಿ ಭೇಟಿ ಮಾಡಿದರು.ಈ ಸಂದರ್ಭ ಧಾರ್ಮಿಕ ಸೌಹಾದರ್ತೆಯ ಬಗ್ಗೆ ಚರ್ಚೆ ನಡೆಸಿದರು.

ಈ ಸಂದರ್ಭ  ಹಿರಿಯ ಆರ್‌ಎಸ್‌ಎಸ್ ಪ್ರಮುಖರಾದ  ಕೃಷ್ಣ ಗೋಪಾಲ್, ಇಂದ್ರೇಶ್ ಕುಮಾರ್, ರಾಮ್‌ಲಾಲ್ ಮತ್ತು ಕರಿಶ್ ಕುಮಾರ್ ಕೂಡ ಭಾಗವಹಿಸಿದ್ದರು. ಮಾಹಿತಿ ಪ್ರಕಾರ ಸಭೆಯಲ್ಲಿ  ಹಿಜಾಬ್ ವಿವಾದ, ಜ್ಞಾನವಾಪಿ ಮತ್ತು ಧರ್ಮಗಳ ನಡುವೆ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವುದು ಸೇರಿದಂತೆ ಇತರ ವಿಷಯಗಳನ್ನು ಚರ್ಚಿಸಲಾಗಿದೆ.

ಈ ಸಭೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಆರೆಸ್ಸೆಸ್‌ನ ಅಖಿಲ ಭಾರತೀಯ ಪ್ರಚಾರ್ ಪ್ರಮುಖ್ ಸುನೀಲ್ ಅಂಬೇಕರ್,” ರಾಷ್ಟ್ರೀಯ ಸ್ವಯಂ ಸೇಚಕ ಸಂಘದ ಸರಸಂಘ ಚಾಲಕರು ಈ ದೇಶದ ಎಲ್ಲಾ ವರ್ಗದ ಜನರನ್ನೂ ಭೇಟಿಯಾಗುತ್ತಾರೆ. ದೇಶದ ಹಿತದೃಷ್ಟಿಯಿಂದ ಇದು ಸಾಮಾನ್ಯವಾಗಿದೆ ಎಂದು ಹೇಳಿದ್ದಾರೆ.

ಸಭೆಯಲ್ಲಿ  ಹಿಜಾಬ್‌ ವಿವಾದ ಹಾಗೂ  ಜ್ಞಾನವಾಪಿ ವಿಚಾರದಲ್ಲೂ ವಿವಾದ ಭುಗಿಲೆದ್ದ ನಂತರ, ಆರೆಸ್ಸೆಸ್ ಮುಖ್ಯಸ್ಥರು ಮುಸ್ಲಿಂ ಮುಖಂಡರು ಮತ್ತು ಶಿಕ್ಷಣ ತಜ್ಞರನ್ನು ಭೇಟಿ ಮಾಡಿದರು. ಇದೀಗ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಮುಸ್ಲಿಂ ಮುಖಂಡರನ್ನು ಭೇಟಿ ಮಾಡಿ ಇತ್ತೀಚಿನ ವಿವಾದಗಳು ಮತ್ತು ದೇಶದಲ್ಲಿ ಧಾರ್ಮಿಕ ಒಳಗೊಳ್ಳುವಿಕೆಯನ್ನು ಬಲಪಡಿಸುವ ಮಾರ್ಗಗಳ ಕುರಿತು ಚರ್ಚಿಸಿದರು. ಇದೇ ವೇಳೆ ಗೋಹತ್ಯೆ ಕುರಿತು ಮುಸ್ಲಿಂ ಮುಖಂಡ ಅಭಿಪ್ರಾಯ, ಜಿಹಾದ್‌ ನಂತಹ ಪದ ಬಳಕೆ ಹಾಗೂ ಅವುಗಳ ಉದ್ದೇಶಗಳ ಬಗ್ಗೆಯೂ ಅಭಿಪ್ರಾಯ ಕೋರಿದರು ಎಂದು ಮೂಲಗಳು ವರದಿ ಮಾಡಿವೆ.

ಮುಸ್ಲಿಂ ಮುಖಂಡರು, ಅಮಾನತುಗೊಂಡಿರುವ ಬಿಜೆಪಿ ವಕ್ತಾರ ನೂಪುರ್ ಶರ್ಮಾ ಅವರು ಪ್ರವಾದಿ ಕುರಿತು ಹೇಳಿಕೆ ನೀಡಿರುವ ಹಿನ್ನಲೆಯಲ್ಲಿ ಸಭೆ ನಡೆಸುವಂತೆ ಕೋರಿದ ಮುಸ್ಲಿಂ ನಿಯೋಗ, ಇತ್ತೀಚಿನ ದಿನಗಳಲ್ಲಿ ಸಮುದಾಯದಲ್ಲಿ ಹೆಚ್ಚುತ್ತಿರುವ ಭಯದ ಪ್ರಜ್ಞೆಯನ್ನು ಆರೆಸ್ಸೆಸ್ ಮುಖ್ಯಸ್ಥರಿಗೆ ತಿಳಿಸಿದರು. 75 ನಿಮಿಷಗಳ ಸಂವಾದದಲ್ಲಿ, ದೇಶದಲ್ಲಿ ಸಹೋದರತ್ವವನ್ನು ಬೆಳೆಸುವ ಮತ್ತು ಧಾರ್ಮಿಕ ಒಳಗೊಳ್ಳುವಿಕೆಯ ವಿಷಯವನ್ನು ಉತ್ತೇಜಿಸುವ ಬಗ್ಗೆ ಚರ್ಚಿಸಲಾಯಿತು  ಎಂದು ಮೂಲ ತಿಳಿಸಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ

ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…

6 hours ago

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ

ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…

7 hours ago

ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ

ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…

7 hours ago

ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್‌ 14 ಅಥವಾ 15ರಿಂದ ಹಲವೆಡೆ…

16 hours ago

ಗ್ಯಾಸ್‌ ಸರಬರಾಜು ಆತಂಕ : ಹೋಟೆಲ್‌ ಉದ್ಯಮಕ್ಕೆ ಹೊಡೆತ, ಗೃಹ ಬಳಕೆದಾರರಿಗೆ ಆದ್ಯತೆ

ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್‌ ಮತ್ತು ಆಹಾರ ವಿತರಣೆ…

16 hours ago

ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ

ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್‌ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…

21 hours ago