ರಾಷ್ಟ್ರೀಯ

ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್‌ ಅವರಿಂದ ಮುಸ್ಲಿಂ ಮುಖಂಡರ ಭೇಟಿ | 75 ನಿಮಿಷದ ಮಾತುಕತೆಯಲ್ಲಿ ಸಹೋದರತೆ, ಧಾರ್ಮಿಕ ಸೌಹಾರ್ದತೆ ಕುರಿತು ಚರ್ಚೆ |

Share

ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮುಖ್ಯಸ್ಥ ಮೋಹನ್ ಭಾಗವತ್ ಅವರು ಗುರುವಾರ ಮುಸ್ಲಿಂ ಮುಖಂಡ ಡಾ ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ ಸೇರಿದಂತೆ ಅನೇಕ ಮುಸ್ಲಿಂ ಮುಖಂಡರನ್ನು ದೆಹಲಿಯಲ್ಲಿ ಭೇಟಿ ಮಾಡಿದರು.ಈ ಸಂದರ್ಭ ಧಾರ್ಮಿಕ ಸೌಹಾದರ್ತೆಯ ಬಗ್ಗೆ ಚರ್ಚೆ ನಡೆಸಿದರು.

Advertisement

ಈ ಸಂದರ್ಭ  ಹಿರಿಯ ಆರ್‌ಎಸ್‌ಎಸ್ ಪ್ರಮುಖರಾದ  ಕೃಷ್ಣ ಗೋಪಾಲ್, ಇಂದ್ರೇಶ್ ಕುಮಾರ್, ರಾಮ್‌ಲಾಲ್ ಮತ್ತು ಕರಿಶ್ ಕುಮಾರ್ ಕೂಡ ಭಾಗವಹಿಸಿದ್ದರು. ಮಾಹಿತಿ ಪ್ರಕಾರ ಸಭೆಯಲ್ಲಿ  ಹಿಜಾಬ್ ವಿವಾದ, ಜ್ಞಾನವಾಪಿ ಮತ್ತು ಧರ್ಮಗಳ ನಡುವೆ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವುದು ಸೇರಿದಂತೆ ಇತರ ವಿಷಯಗಳನ್ನು ಚರ್ಚಿಸಲಾಗಿದೆ.

ಈ ಸಭೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಆರೆಸ್ಸೆಸ್‌ನ ಅಖಿಲ ಭಾರತೀಯ ಪ್ರಚಾರ್ ಪ್ರಮುಖ್ ಸುನೀಲ್ ಅಂಬೇಕರ್,” ರಾಷ್ಟ್ರೀಯ ಸ್ವಯಂ ಸೇಚಕ ಸಂಘದ ಸರಸಂಘ ಚಾಲಕರು ಈ ದೇಶದ ಎಲ್ಲಾ ವರ್ಗದ ಜನರನ್ನೂ ಭೇಟಿಯಾಗುತ್ತಾರೆ. ದೇಶದ ಹಿತದೃಷ್ಟಿಯಿಂದ ಇದು ಸಾಮಾನ್ಯವಾಗಿದೆ ಎಂದು ಹೇಳಿದ್ದಾರೆ.

ಸಭೆಯಲ್ಲಿ  ಹಿಜಾಬ್‌ ವಿವಾದ ಹಾಗೂ  ಜ್ಞಾನವಾಪಿ ವಿಚಾರದಲ್ಲೂ ವಿವಾದ ಭುಗಿಲೆದ್ದ ನಂತರ, ಆರೆಸ್ಸೆಸ್ ಮುಖ್ಯಸ್ಥರು ಮುಸ್ಲಿಂ ಮುಖಂಡರು ಮತ್ತು ಶಿಕ್ಷಣ ತಜ್ಞರನ್ನು ಭೇಟಿ ಮಾಡಿದರು. ಇದೀಗ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಮುಸ್ಲಿಂ ಮುಖಂಡರನ್ನು ಭೇಟಿ ಮಾಡಿ ಇತ್ತೀಚಿನ ವಿವಾದಗಳು ಮತ್ತು ದೇಶದಲ್ಲಿ ಧಾರ್ಮಿಕ ಒಳಗೊಳ್ಳುವಿಕೆಯನ್ನು ಬಲಪಡಿಸುವ ಮಾರ್ಗಗಳ ಕುರಿತು ಚರ್ಚಿಸಿದರು. ಇದೇ ವೇಳೆ ಗೋಹತ್ಯೆ ಕುರಿತು ಮುಸ್ಲಿಂ ಮುಖಂಡ ಅಭಿಪ್ರಾಯ, ಜಿಹಾದ್‌ ನಂತಹ ಪದ ಬಳಕೆ ಹಾಗೂ ಅವುಗಳ ಉದ್ದೇಶಗಳ ಬಗ್ಗೆಯೂ ಅಭಿಪ್ರಾಯ ಕೋರಿದರು ಎಂದು ಮೂಲಗಳು ವರದಿ ಮಾಡಿವೆ.

ಮುಸ್ಲಿಂ ಮುಖಂಡರು, ಅಮಾನತುಗೊಂಡಿರುವ ಬಿಜೆಪಿ ವಕ್ತಾರ ನೂಪುರ್ ಶರ್ಮಾ ಅವರು ಪ್ರವಾದಿ ಕುರಿತು ಹೇಳಿಕೆ ನೀಡಿರುವ ಹಿನ್ನಲೆಯಲ್ಲಿ ಸಭೆ ನಡೆಸುವಂತೆ ಕೋರಿದ ಮುಸ್ಲಿಂ ನಿಯೋಗ, ಇತ್ತೀಚಿನ ದಿನಗಳಲ್ಲಿ ಸಮುದಾಯದಲ್ಲಿ ಹೆಚ್ಚುತ್ತಿರುವ ಭಯದ ಪ್ರಜ್ಞೆಯನ್ನು ಆರೆಸ್ಸೆಸ್ ಮುಖ್ಯಸ್ಥರಿಗೆ ತಿಳಿಸಿದರು. 75 ನಿಮಿಷಗಳ ಸಂವಾದದಲ್ಲಿ, ದೇಶದಲ್ಲಿ ಸಹೋದರತ್ವವನ್ನು ಬೆಳೆಸುವ ಮತ್ತು ಧಾರ್ಮಿಕ ಒಳಗೊಳ್ಳುವಿಕೆಯ ವಿಷಯವನ್ನು ಉತ್ತೇಜಿಸುವ ಬಗ್ಗೆ ಚರ್ಚಿಸಲಾಯಿತು  ಎಂದು ಮೂಲ ತಿಳಿಸಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಬೆಳೆಗಾರರಿಗೆ ನಿಜವಾದ ಸಮಸ್ಯೆ ಯಾವುದು ? ಮುಂದೆ ಇರುವ ಸವಾಲುಗಳು ಯಾವುದು ?

ಅಡಿಕೆ ಬೆಳೆ ರಾಜ್ಯದಲ್ಲಿ ಮಾತ್ರವಲ್ಲ ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ವಿವಿಧ ಕಡೆಗಳಲ್ಲಿ ವಿಸ್ತರಣೆ…

5 hours ago

ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಹೊಸತನ | ವಜ್ರಗಳ LGD ಟೆಸ್ಟಿಂಗ್ ಮಿಷನ್

ಶುದ್ಧತೆಯ ವಿಚಾರ ಬಂದಾಗ ನಂಬಿಕೆಯೂ ಮುಖ್ಯ. ಅದಕ್ಕಾಗಿ, 8 ದಶಕಗಳಿಂದ ನಿಮ್ಮ ಎದುರಿನಲ್ಲಿ…

12 hours ago

ಹವಾಮಾನ ಬದಲಾವಣೆಯ ಪರಿಣಾಮ | ಬಾಂಗ್ಲಾದಲ್ಲಿ ಹೆಚ್ಚಾಗಲಿರುವ ಚಂಡಮಾರುತ |

ಹವಾಮಾನ ಬದಲಾವಣೆ ಪ್ರಪಂಚದ ಎಲ್ಲೆಡೆಯೂ ಸವಾಲಾಗುತ್ತಿದೆ.ತಾಪಮಾನ ಏರಿಕೆಯ ಕಾರಣದಿಂದ ಚಂಡಮಾರುತಗಳ ಸಂಖ್ಯೆ  ಹೆಚ್ಚಾಗುವ…

13 hours ago

ಹವಾಮಾನ ವರದಿ | 15-04-2025 | ಕೆಲವು ಕಡೆ ತುಂತುರು ಮಳೆ | ಎ.19 ರಿಂದ ಕೆಲವು ಕಡೆ ಉತ್ತಮ ಮಳೆ ಸಾಧ್ಯತೆ |

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಸಂಜೆ…

16 hours ago

ಬುಧನ ಚಲನೆ | 3 ರಾಶಿಗೆ ಸಂಪತ್ತಿನ ಮಳೆ, ಯಶಸ್ಸು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

20 hours ago

ಹರಿಯಾಣ | 800 ಮೆ.ವ್ಯಾ.ವಿದ್ಯುತ್ ಉತ್ಪಾದನಾ ಘಟಕಕ್ಕೆ ಪ್ರಧಾನಿ ಮೋದಿ ಚಾಲನೆ

ಹರಿಯಾಣ ಪ್ರವಾಸದಲ್ಲಿರುವ  ಪ್ರಧಾನಿ ನರೇಂದ್ರ ಮೋದಿ ಯಮುನಾ ನಗರದಲ್ಲಿ ಇಂದು ಧೀನಬಂಧು ಚೋಟು…

1 day ago