ಸುದ್ದಿಗಳು

ಸಚಿವರನ್ನು ಸಾಮಾಜಿಕ ಜಾಲತಾಣದಲ್ಲಿ ತರಾಟೆಗೆ ತೆಗೆದುಕೊಂಡ ಆರ್‌ಎಸ್‌ಎಸ್‌ ಪ್ರಮುಖರು | ನೀವು ಸರಿಯಾಗುವುದು ಯಾವಾಗ ಎಂದು ಪ್ರಶ್ನಿಸಿದರು…! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ತೀರಾ ವಿಷಾದದಿಂದ ಸಚಿವ ಅಂಗಾರ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಆರ್‌ಎಸ್‌ಎಸ್‌ (RSS) ಪ್ರಚಾರಕರೊಬ್ಬರು ತರಾಟೆಗೆ ತೆಗೆದುಕೊಂಡಿರುವುದು ಕಂಡುಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ಪ್ರಚಾರಕರೊಬ್ಬರು ಬಹಿರಂಗವಾಗಿಯೇ ತರಾಟೆಗೆ ತೆಗೆದುಕೊಂಡಿರುವುದು ಈಗ ಚರ್ಚೆಯ ವಿಷಯವಾಗಿದೆ.

Advertisement

ಭಾರತ ಸರ್ಕಾರದ ಭೂವಿಜ್ಞಾನ ಮಂತ್ರಾಲಯ ಹಾಗೂ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳೂರಿನ ಪಣಂಬೂರು ಕಡಲ ತೀರದಲ್ಲಿ ನಡೆದ ಕಡಲ ತೀರ ಸ್ವಚ್ಚತಾ ಅಭಿಯಾನ ಮತ್ತು ಸ್ವಚ್ಛ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಯಿತು.  ಈ ಕಾರ್ಯಕ್ರಮಕ್ಕೆ ಸಂಬಂಧಿಸಿ ಹಾಗೂ ಅಭಿವೃದ್ಧಿ ಕಾರ್ಯದ ಬಗ್ಗೆ ಮಾತುಕತೆ ನಡೆದಿತ್ತು ಎನ್ನಲಾಗಿದೆ. ಕೇಂದ್ರ ಸರ್ಕಾರ ಹಲವು ಕಾರ್ಯಕ್ರಮ ನಡೆಸುತ್ತಿದೆ. ಹಾಗಿದ್ದರೂ ನದಿ ಸ್ವಚ್ಛತೆ , ಕಡಲ ತೀರದ ಸ್ವಚ್ಛತೆಯ ಕಡೆಗೆ ಗಮನಹರಿಸಬೇಕಿತ್ತು. ಈ ಪೇಸ್‌ ಬುಕ್  ಪೋಸ್ಟ್‌ ನಲ್ಲಿ    ಬಹಿರಂಗವಾಗಿಯೇ ಆರ್‌ಎಸ್‌ಎಸ್‌ ಪ್ರಚಾರಕ ಜಯರಾಮ ಬೊಳ್ಳಾಜೆ ಎಂಬವರು ಸಚಿವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ಎರಡು ಪೋಸ್ಟ್‌ಗಳಲ್ಲಿ ತೀಕ್ಷ್ಣವಾಗಿ ಪ್ರತಿಕ್ರಿಯೆ ಮಾಡಿದ್ದಾರೆ.

ಇದಾದ ಬಳಿಕ  ಪ್ರಧಾನಿಗಳ 72 ನೇ ಜನ್ಮದಿನಾಚರಣೆಗೆ ಸಂಬಂಧಿಸಿದ ಮತ್ತೊಂದು ಪೇಸ್‌ ಬುಕ್‌ ಪೋಸ್ಟ್‌ನಲ್ಲಿಯೂ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ ಆರ್‌ ಎಸ್‌ ಎಸ್‌ ಪ್ರಮುಖರಾದ ಜಯರಾಮ ಬೊಳ್ಳಾಜೆ.

Advertisement

ಸುಳ್ಯವು ಬಿಜೆಪಿ ಹಾಗೂ ಆರ್‌ ಎಸ್‌ ಎಸ್ ಪ್ರಯೋಗ ಶಾಲೆಯಾಗಿದೆ.‌ ಕಳೆದ ಹಲವು ಸಮಯಗಳಿಂದ ವಿವಿಧ ಪ್ರಯತ್ನಗಳು ಇಲ್ಲಿಯೇ ನಡೆದು ರಾಜ್ಯದವರೆಗೆ ವಿಸ್ತರಿಸಲಾಗಿದ್ದು. ಎಲ್‌ ಕೆ ಅಡ್ವಾನಿ ಅವರಿಂದಲೂ ಬಿಜೆಪಿಗೆ ಸುಳ್ಯವು ದಕ್ಷಿಣ ಭಾರತದ ಹೆಬ್ಬಾಗಿಲು ಎಂದೇ ಕರೆಯಲಾಗಿತ್ತು. ಅಂತಹ ಪ್ರಯೋಗ ಶಾಲೆಯಲ್ಲಿ ಇದೀಗ ಸಚಿವರ ಕಾರ್ಯಕ್ಷಮತೆಯ ಬಗ್ಗೆ ಆರ್‌ ಎಸ್‌ ಎಸ್‌ ಪ್ರಮುಖರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿಯೇ ಪ್ರತಿಕ್ರಿಯೆ ನೀಡಿರುವುದು  ಸುಳ್ಯದ ಈಗಿನ ವಾಸ್ತವ ಸ್ಥಿತಿಯ ಕೈಗನ್ನಡಿ ಎಂಬುದು  ಈಗ ಚರ್ಚೆಯಾಗುತ್ತಿದೆ. ಸುಳ್ಯದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳು ನಡೆಯಲು ಬಾಕಿ ಇದೆ. ಗ್ರಾಮೀಣ ಭಾಗಗಳಿಗೆ ಹಲವು ಸೇತುವೆಗಳ ರಚನೆ ಇನ್ನೂ ನೆನೆಗುದಿಗೆ ಬಿದ್ದಿದೆ, ರಸ್ತೆಗಳ ಅವ್ಯವಸ್ಥೆ ಸೇರಿದಂತೆ ಮೂಲಭೂತ ಸಮಸ್ಯೆಗಳೇ ಆಗಾಗ ಚರ್ಚೆಯಾಗುತ್ತಿದೆ. ಇದೀಗ ಕೇಂದ್ರ ಸರ್ಕಾರದ ಯೋಜನೆಯೊಂದರ ಅನುಷ್ಟಾನ ಹಾಗೂ ಕಾರ್ಯಯೋಜನೆಯ ಬಗ್ಗೆ ಆರ್‌ ಎಸ್‌ ಎಸ್‌ ಪ್ರಚಾರಕರ ಮಾತುಗಳು ತೀರಾ ವಿಷಾದಿಂದ ಕೂಡಿತ್ತು ಹಾಗೂ ಖಡಕ್‌ ಆಗಿಯೇ ಪ್ರತಿಕ್ರಿಯೆ ಮಾಡಿದ್ದಾರೆ.

 

 

Advertisement
/**/
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪುತ್ತೂರು ಪ್ರಕರಣ | ಶಾಸಕ ಅಶೋಕ್‌ ಕುಮಾರ್‌ ರೈ ಅವರ ಬರಹ ಇದು… | ನಾವೀಗ ಆಕೆಗೆ ನೀಡಬೇಕಾಗಿರುವುದು ಧೈರ್ಯ ಮತ್ತು ಸ್ಥೈರ್ಯ

ಪುತ್ತೂರಿನ ಪ್ರಕರಣವೊಂದು ರಾಜ್ಯಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ನಡುವೆ ರಾಜಕೀಯವಾಗಿಯೂ ಇದೊಂದು ಚರ್ಚೆ, ಆರೋಪಗಳಿಗೂ…

2 hours ago

ರಾಸಾಯನಿಕ ಉದ್ಯಮ | ಭಾರತವು ರಾಸಾಯನಿಕಗಳ ಪ್ರಮುಖ ಉತ್ಪಾದಕ ರಾಷ್ಟ್ರ

ಭಾರತದ ರಾಸಾಯನಿಕ ವಲಯವು  ಒಟ್ಟು ದೇಶೀಯ ಉತ್ಪನ್ನ ಕೊಡುಗೆಯಲ್ಲಿ ಗಮನಾರ್ಹ ಪಾತ್ರ ವಹಿಸುತ್ತಿದೆ.…

4 hours ago

ಬುಧ ಮತ್ತು ಶನಿ ಕಾಟದಿಂದ ಈ ರಾಶಿಯವರು ಸ್ವಲ್ಪ ಜೋಪಾನವಾಗಿರಬೇಕು

ರಾಯರ ಪರಮಭಕ್ತರದ ಜ್ಯೋತಿಷಿಗಳು ನಿಮ್ಮನ್ನು ಸಂಪರ್ಕಿಸುತ್ತಾರೆ 9535156490

5 hours ago

ಅಮರನಾಥ ಯಾತ್ರೆಗೆ ಚಾಲನೆ | ಮೊದಲ ಗುಂಪಿನ 5,880 ಯಾತ್ರಿಗಳು ಪ್ರಯಾಣ

ಹಿಂದೂಗಳ ಪವಿತ್ರ ಅಮರನಾಥ ಯಾತ್ರೆಗೆ, ಜಮ್ಮುವಿನ ಭಗವತಿ ನಗರದಲ್ಲಿ  ಜಮ್ಮು ಮತ್ತು ಕಾಶ್ಮೀರದ…

12 hours ago

ರಾಜ್ಯದ ವಿವಿಧೆಡೆ ಧಾರಾಕಾರ ಮಳೆ | ಉತ್ತರಕನ್ನಡ, ಕೊಡಗಿನಲ್ಲಿ ಸಮಸ್ಯೆ

ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಮಡಿಕೇರಿ ಸೇರಿದಂತೆ ಕೊಡಗು…

12 hours ago

ಕೇರಳದಲ್ಲಿ 1 ಲಕ್ಷ ಹೆಕ್ಟೇರ್‌ ರಬ್ಬರ್‌ ತೋಟದಲ್ಲಿ ಟ್ಯಾಪಿಂಗ್‌ ಇಲ್ಲ..!

ಕೇರಳದಲ್ಲಿ ಸುಮಾರು ಒಂದು ಲಕ್ಷ ಹೆಕ್ಟೇರ್‌ ಪ್ರದೇಶದ ರಬ್ಬರ್‌ ತೋಟದಲ್ಲಿ ಟ್ಯಾಪಿಂಗ್‌ ಸ್ಥಗಿತವಾಗಿದೆ. 

21 hours ago