ಗರ್ಭಶುದ್ಧಿಗೆ ಸಂಸ್ಕೃತ ಪಠಣ , ದೇಶಭಕ್ತಿ-ಸಂಸ್ಕೃತಿ ಕಲಿಸಲು ಗರ್ಭಸಂಸ್ಕಾರ ಅಭಿಯಾನಕ್ಕೆ ಮುಂದಾದ RSS

March 9, 2023
1:32 PM

ಪ್ರತೀ ತಾಯಿಗೂ ತನ್ನ ಮಗು ಶ್ರೀರಾಮನಂತ ಗುಣವುಳ್ಳವನಾಗಿರಬೇಕು ಎಂಬ ಆಸೆ ಇದ್ದೇ ಇರುತ್ತದೆ. ಅದಕ್ಕಾಗಿ ಅವಳು ತನ್ನ ಜೀವನವನ್ನೇ ಮುಡಿಪಿಟ್ಟು ಮಕ್ಕಳನ್ನು ಬೆಳೆಸುತ್ತಾಳೆ. ಅವಳ ಪ್ರಯತ್ನ ಕೆಲವೊಮ್ಮೆ ಕೈ ಕೊಡಿಕೊಡುತ್ತದೆ.  ಇತ್ತೀಚೆಗೆ ಬಾಲಾಪರಾಧಗಳ ಸಂಖ್ಯೆ ಹೆಚ್ಚಾಗಿದ್ದು, ಮಕ್ಕಳೇ ತಂದೆ ತಾಯಿಯನ್ನು ಕೊಲೆ ಮಾಡುವುದು, ಅತ್ಯಾಚಾರಿಗಳಾಗುವುದು ನೋಡಿದ್ದೇವೆ. ಇಂತಹ ಸನ್ನಿವೇಶಗಳಿಂದ ಹೊರತರಲು ರಾಷ್ಟ್ರೀಯ ಸ್ವಯಂ ಸೇವಾ ಸಂಘ ಮುಂದಾಗಿದೆ. ಈ ಮೂಲಕ ಗರ್ಭ ಸಂಸ್ಕೃತಿ ಅಳವಡಿಸಿಕೊಂಡು ತಾಯಂದಿರು ಶ್ರೀರಾಮನಂತಹ ಮಕ್ಕಳಿಗೆ ಜನ್ಮ ನೀಡಲು ಸಾಧ್ಯ. ಹಾಗೆ ಮಕ್ಕಳು ಪೋಷಕರಿಗೆ ಬದ್ಧರಾಗಿ ಮತ್ತು ದೇಶ ಕಾಪಾಡುವ ಪ್ರಜೆಗಳಾಗುವಂತೆ ಮಾಡುವ ಪ್ರಯತ್ನಕ್ಕೆ ಕೈ ಹಾಕುತ್ತಿದೆ RSS.

Advertisement
Advertisement
Advertisement

ಮಕ್ಕಳಿಗೆ ಶಿಶು ಕಾಲದಲ್ಲೇ ದೇಶಭಕ್ತಿ, ಸಂಸ್ಕೃತಿ ಮತ್ತು ಸಂಸ್ಕಾರಯುತ ಮೌಲ್ಯಗಳನ್ನು ಕಲಿಸಲು ‘ಗರ್ಭಸಂಸ್ಕಾರ’ ಎಂಬ ಅಭಿಯಾನವನ್ನು ನಡೆಸಲಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ  ಮಹಿಳಾ ವಿಭಾಗವಾದ ರಾಷ್ಟ್ರ ಸೇವಿಕಾ ಸಮಿತಿಯ ಸಂವರ್ಧಿನಿ ನ್ಯಾಸ್‌ನ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಮಾಧುರಿ ಮರಾಠೆ ಹೇಳಿದ್ದಾರೆ.

Advertisement

ದೆಹಲಿಯ ಜೆಎನ್‌ಯೂ ವಿಶ್ವವಿದ್ಯಾಲಯದಲ್ಲಿ ನಡೆದ ಗರ್ಭ ಸಂಸ್ಕಾರ (ಗರ್ಭಧಾರಣೆ ಸಂಸ್ಕೃತಿ) ಕುರಿತ ಕಾರ್ಯಾಗಾರದಲ್ಲಿ ಮಾತನಾಡಿದ ಅವರು ಮುಂದಿನ ಪೀಳಿಗೆಗೆ ಹಿಂದೂ ಸಂಸ್ಕೃತಿ ಆಚರಣೆಗಳನ್ನು ಕೊಂಡೊಯ್ಯುವ ನಿಟ್ಟಿನಲ್ಲಿ ಗರ್ಭದಲ್ಲಿಯೇ ಶಿಶುಗಳಿಗೆ ಹಿಂದೂ ಸಂಸ್ಕೃತಿ ಪಾಠ ಕಲಿಸಲು ಮುಂದಾಗಿದೆ ಎಂದರು.

Advertisement

ಗರ್ಭಾವಸ್ಥೆಯಲ್ಲಿ ಗೀತ ಪಠಣ : ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ದೆಹಲಿಯ ಏಮ್ಸ್ ಸೇರಿದಂತೆ ದೇಶದ ವಿವಿಧ ಭಾಗದ ವೈದ್ಯರು, ಸ್ತ್ರೀರೋಗ ತಜ್ಞರು, ಯೋಗ ತರಬೇತುದಾರರು ಮತ್ತು ಆಯುರ್ವೇದ ವೈದ್ಯರು ಸೇರಿದಂತೆ 12 ರಾಜ್ಯಗಳಿಂದ 70 ರಿಂದ 80 ವೈದ್ಯರು ಅದರಲ್ಲಿಯೂ ಹೆಚ್ಚಾಗಿ ಸ್ತ್ರೀ ರೋಗ, ಆಯುರ್ವೇದ ತಜ್ಞರು ಭಾಗವಹಿಸಿದ್ದರು. ಗರ್ಭದಲ್ಲಿರುವ ಶಿಶುಗಳಿಗೆ ಹಿಂದೂ ಸಂಸ್ಕೃತಿಯ ಆಚರಣೆ, ಮೌಲ್ಯಗಳನ್ನು ತಿಳಿಸಲು ಗರ್ಭಾವಸ್ಥೆಯಲ್ಲಿಯೇ ಭಗವದ್ಗೀತೆ ಪಠಣ, ರಾಮಾಯಣ, ಯೋಗಾಭ್ಯಾಸ ಮುಂತಾದ ಸಂಸ್ಕೃತಿ ಪಾಠ ಕಲಿಸಲು ರಾಷ್ಟ್ರ ಸೇವಿಕಾ ಸಮಿತಿಯ ಸಂವರ್ಧಿನಿ ನ್ಯಾಸ್‌ ಮುಂದಾಗಿದೆ ಎಂದು ಮಾಧುರಿ ಮರಾಠೆ ಹೇಳಿದರು.

1000 ಮಹಿಳೆಯರನ್ನು ತಲುಪುವ ಗುರಿಗರ್ಭಾವಸ್ಥೆಯಲ್ಲಿ ಪ್ರಾರಂಭವಾಗುವ ಈ ಕಾರ್ಯಕ್ರಮವು ಶಿಶುಗಳಿಗೆ ಎರಡು ವರ್ಷ ತಲುಪುವವರೆಗೆ ಮುಂದುವರಿಯುತ್ತದೆ. ಗರ್ಭದಲ್ಲಿರುವ ಮಗು 500 ಪದಗಳನ್ನು ಕಲಿಯಬಹುದು. ಈ ಅಭಿಯಾನದ ಗುರಿ ಮತ್ತು ಉದ್ದೇಶ ಮಗುವಿಗದೆ ಗರ್ಭದಲ್ಲಿಯೇ ಸಂಸ್ಕಾರ ಕಲಿಸುವುದು. ಈ ಅಭಿಯಾನಕ್ಕಾಗಿ ರಾಷ್ಟ್ರ ಸೇವಿಕಾ ಸಮಿತಿಯ ಸಂವರ್ಧಿನಿ ನ್ಯಾಸ್‌ ಕನಿಷ್ಠ ಆರಂಭಿಕ ಹಂತದಲ್ಲಿ ಕನಿಷ್ಠ 1000 ಮಹಿಳೆಯರನ್ನು ತಲುಪಲು ಯೋಜನೆ ರೂಪಿಸಿಕೊಂಡಿದೆ ಎಂದು ಮಾಧುರಿ ಮರಾಠೆ ಹೇಳಿದರು.

Advertisement

ಗರ್ಭಶುದ್ಧಿಗೆ ಸಂಸ್ಕೃತದ ಓದು: ಇನ್ನು, ಗರ್ಭಶುದ್ಧಿಯ ಭಾಗವಾಗಿ ಮಹಿಳೆಯು ಗರ್ಭಾವಸ್ಥೆಯಲ್ಲಿ ಸಂಸ್ಕೃತವನ್ನು ಓದ ಬೇಕು, ಗೀತಾ ಪಠಣೆ ಮಾಡಬೇಕು ಎಂದು ಹೇಳಿದ ಸಂಸ್ಥೆಯ ಸಹ ಸಂಚಾಲಕಿ ಡಾ ರಜನಿ ಮಿತ್ತಲ್, ಗರ್ಭ ಸಂಸ್ಕಾರವನ್ನು ಸರಿಯಾಗಿ ನಡೆಸಿದರೆ ಗರ್ಭದಲ್ಲಿ ಮಗುವಿನ ಡಿಎನ್ಎ ಕೂಡ ಬದಲಾಯಿಸಬಹುದು. ದೈಹಿಕ ಆರೋಗ್ಯದ ಜೊತೆಗೆ ಗರ್ಭಾಶಯದ ಶುದ್ಧೀಕರಣ ಮತ್ತು ಸಕಾರಾತ್ಮಕತೆಯೂ ಹೆಚ್ಚಿನ ಅಗತ್ಯವಿದೆ. ದೇಶದಲ್ಲಿ ಪ್ರತಿ ವರ್ಷ 1000 ಗರ್ಭ ಸಂಸ್ಕಾರದ ಮಕ್ಕಳನ್ನು ಒದಗಿಸುವುದು ನಮ್ಮ ಉದ್ದೇಶ. ಇದರಿಂದ ಭಾರತದ ಹಳೆಯ ಸಂಸ್ಕೃತಿಯನ್ನು ಮರು ಸ್ಥಾಪಿಸಲು ಸಹಕಾರಿಯಾಗುತ್ತದೆ ಎಂದು ಮಾಹಿತಿ ನೀಡಿದರು.

Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಮಳೆ
April 18, 2024
10:09 PM
by: ದ ರೂರಲ್ ಮಿರರ್.ಕಾಂ
ಆದರ್ಶ ಜೀವನ ಮತ್ತು ಪರಿಸರ ಸ್ನೇಹಿ ನೀತಿ ತಿಳಿಸುವ ಮಂಗಟ್ಟೆ ಹಕ್ಕಿಗಳು…
April 18, 2024
4:46 PM
by: The Rural Mirror ಸುದ್ದಿಜಾಲ
ಮರುಭೂಮಿ ನಾಡು ದುಬೈನಲ್ಲಿ 75 ವರ್ಷಗಳಲ್ಲೇ ದಾಖಲೆ ಮಳೆ…! | ಪ್ರವಾಹಕ್ಕೆ UAE ತತ್ತರ |
April 18, 2024
3:49 PM
by: The Rural Mirror ಸುದ್ದಿಜಾಲ
ಎಚ್ಚರ….. ತಾಯಂದಿರೇ ನಿಮ್ಮ ಮಕ್ಕಳಿಗೆ ಸೆರೆಲಾಕ್ ತಿನ್ನಿಸುತ್ತೀರಾ..? | ಬಯಲಾಯ್ತು ಶಾಕಿಂಗ್ ನ್ಯೂಸ್…! | ವರದಿ ಬಹಿರಂಗದ ಬಳಿಕ ನೆಸ್ಲೆ ಪ್ರತಿಕ್ರಿಯೆ ಏನು..?
April 18, 2024
3:21 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror