#Rubber |ಈಶಾನ್ಯ ರಾಜ್ಯಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆಗೆ ನೆರವು | 5 ವರ್ಷದಲ್ಲಿ 2 ಲಕ್ಷ ಹೆಕ್ಟೇರ್‌ ರಬ್ಬರ್‌ ಕೃಷಿ ವಿಸ್ತರಣೆಯ ಗುರಿ |

July 30, 2023
8:00 AM
ಈಶಾನ್ಯ ರಾಜ್ಯಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆಗ ಕಡೆಗೆ ಸರ್ಕಾರ ಯೋಜನೆ ರೂಪಿಸುತ್ತಿದೆ. ದೇಶದಲ್ಲಿ ರಬ್ಬರ್‌ ಉತ್ಪಾದನೆ ಹೆಚ್ಚಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ.

ಭಾರತೀಯ ರಬ್ಬರ್ ಬೋರ್ಡ್ ಹಾಗೂ ಆಟೋಮೋಟಿವ್ ಟೈರ್ ತಯಾರಕರ ಸಂಘದ ಸಹಯೋಗದೊಂದಿಗೆ, ಈಶಾನ್ಯ ರಾಜ್ಯಗಳಾದ್ಯಂತ ರಬ್ಬರ್ ಕೃಷಿಯನ್ನು ಉತ್ತೇಜಿಸಲು ಇಂಡಿಯನ್ ನ್ಯಾಚುರಲ್ ರಬ್ಬರ್ ಆರ್ಗನೈಸೇಶನ್ ಫಾರ್ ಅಸಿಸ್ಟೆಡ್ ಡೆವಲಪ್‌ಮೆಂಟ್ ಯೋಜನೆಯನ್ನು ಪ್ರಾರಂಭಿಸಿದೆ.

ವಿಶೇಷವಾಗಿ ಈಶಾನ್ಯ ರಾಜ್ಯಗಳಲ್ಲಿ ರಬ್ಬರ್ ಬೆಳೆಯುವ ಪ್ರದೇಶಗಳನ್ನು ಹೆಚ್ಚಿಸಲು ಉಚಿತ ಸಸಿ ವಿತರಣೆ ಕೂಡಾ ಆರಂಭವಾಗಿದೆ. ಇದರ ಜೊತೆಗೆ ಇತರ ನೆರವು ಕೂಡಾ ಮಾಡಲಾಗುತ್ತಿದೆ. ಸದ್ಯ ಅರುಣಾಚಲ ಪ್ರದೇಶವು ಅತಿದೊಡ್ಡ ರಬ್ಬರ್‌ ಬೆಳೆಯು ಈಶಾನ್ಯ ರಾಜ್ಯವಾಗಿದೆ.  ಮುಂದಿನ ಐದು ವರ್ಷಗಳಲ್ಲಿ (2021-2025) ಎರಡು ಲಕ್ಷ ಹೆಕ್ಟೇರ್ಗಳಷ್ಟು ವಿಸ್ತರಿಸಲು ಉದ್ದೇಶಿಸಲಾಗಿದೆ ಎಂದು ರಬ್ಬರ್ ಮಂಡಳಿಯ ಪ್ರಾದೇಶಿಕ ಕಚೇರಿಯ ಪ್ರಕಟಣೆ ತಿಳಿಸಿದೆ. ಪ್ರಸಕ್ತ ವರ್ಷ 3,500 ಹೆಕ್ಟೇರ್ ಪ್ರದೇಶಕ್ಕೆ ಉಚಿತ ರಬ್ಬರ್ ನಾಟಿ ಸಾಮಗ್ರಿಗಳನ್ನು ವಿತರಿಸುವ ಗುರಿಯನ್ನು ಪ್ರಾದೇಶಿಕ ಕಚೇರಿ ಹೊಂದಿದೆ.

ರಬ್ಬರ್ ಸುಮಾರು 40,000 ಉತ್ಪನ್ನಗಳಲ್ಲಿ ಬಳಸಲಾಗುವ ಬಹುಮುಖ ಕಚ್ಚಾ ವಸ್ತುವಾಗಿದೆ. ಆಟೋಮೊಬೈಲ್ ವಲಯವು ದೇಶದ ಪ್ರಮುಖ ರಬ್ಬರ್ ಗ್ರಾಹಕವಾಗಿದೆ.‌ ಹೀಗಾಗಿ ಭಾರತದಲ್ಲಿಯೇ ರಬ್ಬರ್‌ ಉತ್ಪಾದನೆಯಾಗುವ ಮೂಲಕ ವಿದೇಶಿ ವಿನಿಮಯ ತಪ್ಪಿಸುವುದು ಹಾಗೂ ಕೃಷಿಕರಿಗೆ ನೆರವಾಗುವ ಉದ್ದೇಶವನ್ನು ಸರ್ಕಾರ ಹೊಂದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ
July 23, 2026
7:29 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ
July 22, 2026
3:55 PM
by: ಸಾಯಿಶೇಖರ್ ಕರಿಕಳ
ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror