Advertisement
MIRROR FOCUS

#Rubber |ಈಶಾನ್ಯ ರಾಜ್ಯಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆಗೆ ನೆರವು | 5 ವರ್ಷದಲ್ಲಿ 2 ಲಕ್ಷ ಹೆಕ್ಟೇರ್‌ ರಬ್ಬರ್‌ ಕೃಷಿ ವಿಸ್ತರಣೆಯ ಗುರಿ |

Share

ಭಾರತೀಯ ರಬ್ಬರ್ ಬೋರ್ಡ್ ಹಾಗೂ ಆಟೋಮೋಟಿವ್ ಟೈರ್ ತಯಾರಕರ ಸಂಘದ ಸಹಯೋಗದೊಂದಿಗೆ, ಈಶಾನ್ಯ ರಾಜ್ಯಗಳಾದ್ಯಂತ ರಬ್ಬರ್ ಕೃಷಿಯನ್ನು ಉತ್ತೇಜಿಸಲು ಇಂಡಿಯನ್ ನ್ಯಾಚುರಲ್ ರಬ್ಬರ್ ಆರ್ಗನೈಸೇಶನ್ ಫಾರ್ ಅಸಿಸ್ಟೆಡ್ ಡೆವಲಪ್‌ಮೆಂಟ್ ಯೋಜನೆಯನ್ನು ಪ್ರಾರಂಭಿಸಿದೆ.

ವಿಶೇಷವಾಗಿ ಈಶಾನ್ಯ ರಾಜ್ಯಗಳಲ್ಲಿ ರಬ್ಬರ್ ಬೆಳೆಯುವ ಪ್ರದೇಶಗಳನ್ನು ಹೆಚ್ಚಿಸಲು ಉಚಿತ ಸಸಿ ವಿತರಣೆ ಕೂಡಾ ಆರಂಭವಾಗಿದೆ. ಇದರ ಜೊತೆಗೆ ಇತರ ನೆರವು ಕೂಡಾ ಮಾಡಲಾಗುತ್ತಿದೆ. ಸದ್ಯ ಅರುಣಾಚಲ ಪ್ರದೇಶವು ಅತಿದೊಡ್ಡ ರಬ್ಬರ್‌ ಬೆಳೆಯು ಈಶಾನ್ಯ ರಾಜ್ಯವಾಗಿದೆ.  ಮುಂದಿನ ಐದು ವರ್ಷಗಳಲ್ಲಿ (2021-2025) ಎರಡು ಲಕ್ಷ ಹೆಕ್ಟೇರ್ಗಳಷ್ಟು ವಿಸ್ತರಿಸಲು ಉದ್ದೇಶಿಸಲಾಗಿದೆ ಎಂದು ರಬ್ಬರ್ ಮಂಡಳಿಯ ಪ್ರಾದೇಶಿಕ ಕಚೇರಿಯ ಪ್ರಕಟಣೆ ತಿಳಿಸಿದೆ. ಪ್ರಸಕ್ತ ವರ್ಷ 3,500 ಹೆಕ್ಟೇರ್ ಪ್ರದೇಶಕ್ಕೆ ಉಚಿತ ರಬ್ಬರ್ ನಾಟಿ ಸಾಮಗ್ರಿಗಳನ್ನು ವಿತರಿಸುವ ಗುರಿಯನ್ನು ಪ್ರಾದೇಶಿಕ ಕಚೇರಿ ಹೊಂದಿದೆ.

ರಬ್ಬರ್ ಸುಮಾರು 40,000 ಉತ್ಪನ್ನಗಳಲ್ಲಿ ಬಳಸಲಾಗುವ ಬಹುಮುಖ ಕಚ್ಚಾ ವಸ್ತುವಾಗಿದೆ. ಆಟೋಮೊಬೈಲ್ ವಲಯವು ದೇಶದ ಪ್ರಮುಖ ರಬ್ಬರ್ ಗ್ರಾಹಕವಾಗಿದೆ.‌ ಹೀಗಾಗಿ ಭಾರತದಲ್ಲಿಯೇ ರಬ್ಬರ್‌ ಉತ್ಪಾದನೆಯಾಗುವ ಮೂಲಕ ವಿದೇಶಿ ವಿನಿಮಯ ತಪ್ಪಿಸುವುದು ಹಾಗೂ ಕೃಷಿಕರಿಗೆ ನೆರವಾಗುವ ಉದ್ದೇಶವನ್ನು ಸರ್ಕಾರ ಹೊಂದಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

6 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

14 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

17 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

22 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

2 days ago