( ಸಾಂದರ್ಭಿಕ ಚಿತ್ರ )
ಭಾರತೀಯ ರಬ್ಬರ್ ಬೋರ್ಡ್ ಹಾಗೂ ಆಟೋಮೋಟಿವ್ ಟೈರ್ ತಯಾರಕರ ಸಂಘದ ಸಹಯೋಗದೊಂದಿಗೆ, ಈಶಾನ್ಯ ರಾಜ್ಯಗಳಾದ್ಯಂತ ರಬ್ಬರ್ ಕೃಷಿಯನ್ನು ಉತ್ತೇಜಿಸಲು ಇಂಡಿಯನ್ ನ್ಯಾಚುರಲ್ ರಬ್ಬರ್ ಆರ್ಗನೈಸೇಶನ್ ಫಾರ್ ಅಸಿಸ್ಟೆಡ್ ಡೆವಲಪ್ಮೆಂಟ್ ಯೋಜನೆಯನ್ನು ಪ್ರಾರಂಭಿಸಿದೆ.
ವಿಶೇಷವಾಗಿ ಈಶಾನ್ಯ ರಾಜ್ಯಗಳಲ್ಲಿ ರಬ್ಬರ್ ಬೆಳೆಯುವ ಪ್ರದೇಶಗಳನ್ನು ಹೆಚ್ಚಿಸಲು ಉಚಿತ ಸಸಿ ವಿತರಣೆ ಕೂಡಾ ಆರಂಭವಾಗಿದೆ. ಇದರ ಜೊತೆಗೆ ಇತರ ನೆರವು ಕೂಡಾ ಮಾಡಲಾಗುತ್ತಿದೆ. ಸದ್ಯ ಅರುಣಾಚಲ ಪ್ರದೇಶವು ಅತಿದೊಡ್ಡ ರಬ್ಬರ್ ಬೆಳೆಯು ಈಶಾನ್ಯ ರಾಜ್ಯವಾಗಿದೆ. ಮುಂದಿನ ಐದು ವರ್ಷಗಳಲ್ಲಿ (2021-2025) ಎರಡು ಲಕ್ಷ ಹೆಕ್ಟೇರ್ಗಳಷ್ಟು ವಿಸ್ತರಿಸಲು ಉದ್ದೇಶಿಸಲಾಗಿದೆ ಎಂದು ರಬ್ಬರ್ ಮಂಡಳಿಯ ಪ್ರಾದೇಶಿಕ ಕಚೇರಿಯ ಪ್ರಕಟಣೆ ತಿಳಿಸಿದೆ. ಪ್ರಸಕ್ತ ವರ್ಷ 3,500 ಹೆಕ್ಟೇರ್ ಪ್ರದೇಶಕ್ಕೆ ಉಚಿತ ರಬ್ಬರ್ ನಾಟಿ ಸಾಮಗ್ರಿಗಳನ್ನು ವಿತರಿಸುವ ಗುರಿಯನ್ನು ಪ್ರಾದೇಶಿಕ ಕಚೇರಿ ಹೊಂದಿದೆ.
ರಬ್ಬರ್ ಸುಮಾರು 40,000 ಉತ್ಪನ್ನಗಳಲ್ಲಿ ಬಳಸಲಾಗುವ ಬಹುಮುಖ ಕಚ್ಚಾ ವಸ್ತುವಾಗಿದೆ. ಆಟೋಮೊಬೈಲ್ ವಲಯವು ದೇಶದ ಪ್ರಮುಖ ರಬ್ಬರ್ ಗ್ರಾಹಕವಾಗಿದೆ. ಹೀಗಾಗಿ ಭಾರತದಲ್ಲಿಯೇ ರಬ್ಬರ್ ಉತ್ಪಾದನೆಯಾಗುವ ಮೂಲಕ ವಿದೇಶಿ ವಿನಿಮಯ ತಪ್ಪಿಸುವುದು ಹಾಗೂ ಕೃಷಿಕರಿಗೆ ನೆರವಾಗುವ ಉದ್ದೇಶವನ್ನು ಸರ್ಕಾರ ಹೊಂದಿದೆ.
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…