Advertisement
MIRROR FOCUS

ನಾಗಾಲ್ಯಾಂಡ್‌ನಲ್ಲಿ ರಬ್ಬರ್ ಕೃಷಿಗೆ ಪ್ರೋತ್ಸಾಹ | ಹೊಸ ತರಬೇತಿ ಕೇಂದ್ರ ಸ್ಥಾಪನೆ

Share

ರಬ್ಬರ್‌ ಬೋರ್ಡ್‌ ಮತ್ತು ನಾಗಾಲ್ಯಾಂಡ್‌ ಸರ್ಕಾರವು, ನಾಗಾಲ್ಯಾಂಡ್‌ನಲ್ಲಿ ರಾಷ್ಟ್ರೀಯ ರಬ್ಬರ್ ತರಬೇತಿ ಸಂಸ್ಥೆ (NIRT)ಯ ನೋಡಲ್ ಕೇಂದ್ರ ಸ್ಥಾಪನೆಗೆ ಪರಸ್ಪರ ಒಪ್ಪಂದ (MoU) ಮಾಡಿಕೊಂಡಿವೆ.

ಈ ಒಪ್ಪಂದಕ್ಕೆ ಕೇರಳದ ಕೊಟ್ಟಾಯಂನಲ್ಲಿರುವ ರಬ್ಬರ್ ಸಂಶೋಧನಾ ಸಂಸ್ಥೆಯಲ್ಲಿ ನಡೆದ NIRT‌ನ ಬೆಳ್ಳಿ ಮಹೋತ್ಸವ ಕಾರ್ಯಕ್ರಮದ ವೇಳೆ ಸಹಿ ಮಾಡಲಾಯಿತು. NIRT, ರಬ್ಬರ್ ಬೋರ್ಡ್‌ನ ತರಬೇತಿ ಹಾಗೂ ಸಾಮರ್ಥ್ಯ ವೃದ್ಧಿ ಘಟಕವಾಗಿದ್ದು, ರಬ್ಬರ್ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಮತ್ತು ಸಂಶೋಧನೆಗೆ ಒತ್ತು ನೀಡುತ್ತದೆ.

ಅಧಿಕಾರಿಗಳ ಪ್ರಕಾರ, ನಾಗಾಲ್ಯಾಂಡ್‌ನಲ್ಲಿ ಸುಮಾರು 4 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಭೂಮಿ ರಬ್ಬರ್ ಕೃಷಿಗೆ ಸೂಕ್ತವಾಗಿದ್ದರೂ, ಪ್ರಸ್ತುತ ಕೇವಲ 20 ಸಾವಿರ ಹೆಕ್ಟೇರ್ ಪ್ರದೇಶದಲ್ಲಷ್ಟೇ ರಬ್ಬರ್ ಬೆಳೆ ಅಭಿವೃದ್ಧಿಯಾಗಿದೆ. ಹೊಸ NIRT ನೋಡಲ್ ಕೇಂದ್ರದ ಮೂಲಕ ಈ ಅಂತರವನ್ನು ಕಡಿಮೆ ಮಾಡುವ ಉದ್ದೇಶ ಹೊಂದಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಈ ಕೇಂದ್ರದ ಮೂಲಕ ರೈತರಿಗೆ ವೈಜ್ಞಾನಿಕ ಕೃಷಿ ವಿಧಾನಗಳ ತರಬೇತಿ, ಹೊಸ ತಂತ್ರಜ್ಞಾನ ಪರಿಚಯ, ಸಂಶೋಧನೆ ಹಾಗೂ ವಿಸ್ತರಣಾ ಸೇವೆಗಳು ಲಭ್ಯವಾಗಲಿವೆ. ಇದರಿಂದ ರಬ್ಬರ್ ಉತ್ಪಾದನೆ ಹೆಚ್ಚಳ, ಗ್ರಾಮೀಣ ಉದ್ಯೋಗ ಸೃಷ್ಟಿ ಹಾಗೂ ರೈತರ ಆದಾಯ ವೃದ್ಧಿಗೆ ಸಹಕಾರ ದೊರೆಯಲಿದೆ.

ಈ ಒಪ್ಪಂದವು ಪರಿಸರ ಸಂರಕ್ಷಣೆ, ಸುಸ್ಥಿರ ಭೂ ಬಳಕೆ ಹಾಗೂ ಗ್ರಾಮೀಣ ಆರ್ಥಿಕತೆಯ ಬಲವರ್ಧನೆಗೆ ಮಹತ್ವದ ಹೆಜ್ಜೆಯಾಗಿದೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

6 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

7 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

7 hours ago

ಹವಾಮಾನ ವರದಿ | 12-08-2026 | ಕರ್ನಾಟಕದಲ್ಲಿ ಮುಂದುವರಿಯಲಿದೆ ಬಿಡುವಿನ ಮಳೆ

ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…

7 hours ago

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

20 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

1 day ago