Advertisement
MIRROR FOCUS

ನಾಗಾಲ್ಯಾಂಡ್‌ನಲ್ಲಿ ರಬ್ಬರ್ ಕೃಷಿಗೆ ಪ್ರೋತ್ಸಾಹ | ಹೊಸ ತರಬೇತಿ ಕೇಂದ್ರ ಸ್ಥಾಪನೆ

Share

ರಬ್ಬರ್‌ ಬೋರ್ಡ್‌ ಮತ್ತು ನಾಗಾಲ್ಯಾಂಡ್‌ ಸರ್ಕಾರವು, ನಾಗಾಲ್ಯಾಂಡ್‌ನಲ್ಲಿ ರಾಷ್ಟ್ರೀಯ ರಬ್ಬರ್ ತರಬೇತಿ ಸಂಸ್ಥೆ (NIRT)ಯ ನೋಡಲ್ ಕೇಂದ್ರ ಸ್ಥಾಪನೆಗೆ ಪರಸ್ಪರ ಒಪ್ಪಂದ (MoU) ಮಾಡಿಕೊಂಡಿವೆ.

ಈ ಒಪ್ಪಂದಕ್ಕೆ ಕೇರಳದ ಕೊಟ್ಟಾಯಂನಲ್ಲಿರುವ ರಬ್ಬರ್ ಸಂಶೋಧನಾ ಸಂಸ್ಥೆಯಲ್ಲಿ ನಡೆದ NIRT‌ನ ಬೆಳ್ಳಿ ಮಹೋತ್ಸವ ಕಾರ್ಯಕ್ರಮದ ವೇಳೆ ಸಹಿ ಮಾಡಲಾಯಿತು. NIRT, ರಬ್ಬರ್ ಬೋರ್ಡ್‌ನ ತರಬೇತಿ ಹಾಗೂ ಸಾಮರ್ಥ್ಯ ವೃದ್ಧಿ ಘಟಕವಾಗಿದ್ದು, ರಬ್ಬರ್ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಮತ್ತು ಸಂಶೋಧನೆಗೆ ಒತ್ತು ನೀಡುತ್ತದೆ.

ಅಧಿಕಾರಿಗಳ ಪ್ರಕಾರ, ನಾಗಾಲ್ಯಾಂಡ್‌ನಲ್ಲಿ ಸುಮಾರು 4 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಭೂಮಿ ರಬ್ಬರ್ ಕೃಷಿಗೆ ಸೂಕ್ತವಾಗಿದ್ದರೂ, ಪ್ರಸ್ತುತ ಕೇವಲ 20 ಸಾವಿರ ಹೆಕ್ಟೇರ್ ಪ್ರದೇಶದಲ್ಲಷ್ಟೇ ರಬ್ಬರ್ ಬೆಳೆ ಅಭಿವೃದ್ಧಿಯಾಗಿದೆ. ಹೊಸ NIRT ನೋಡಲ್ ಕೇಂದ್ರದ ಮೂಲಕ ಈ ಅಂತರವನ್ನು ಕಡಿಮೆ ಮಾಡುವ ಉದ್ದೇಶ ಹೊಂದಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಈ ಕೇಂದ್ರದ ಮೂಲಕ ರೈತರಿಗೆ ವೈಜ್ಞಾನಿಕ ಕೃಷಿ ವಿಧಾನಗಳ ತರಬೇತಿ, ಹೊಸ ತಂತ್ರಜ್ಞಾನ ಪರಿಚಯ, ಸಂಶೋಧನೆ ಹಾಗೂ ವಿಸ್ತರಣಾ ಸೇವೆಗಳು ಲಭ್ಯವಾಗಲಿವೆ. ಇದರಿಂದ ರಬ್ಬರ್ ಉತ್ಪಾದನೆ ಹೆಚ್ಚಳ, ಗ್ರಾಮೀಣ ಉದ್ಯೋಗ ಸೃಷ್ಟಿ ಹಾಗೂ ರೈತರ ಆದಾಯ ವೃದ್ಧಿಗೆ ಸಹಕಾರ ದೊರೆಯಲಿದೆ.

ಈ ಒಪ್ಪಂದವು ಪರಿಸರ ಸಂರಕ್ಷಣೆ, ಸುಸ್ಥಿರ ಭೂ ಬಳಕೆ ಹಾಗೂ ಗ್ರಾಮೀಣ ಆರ್ಥಿಕತೆಯ ಬಲವರ್ಧನೆಗೆ ಮಹತ್ವದ ಹೆಜ್ಜೆಯಾಗಿದೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

8 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

16 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

16 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

23 hours ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

24 hours ago

ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…

2 days ago