Advertisement
MIRROR FOCUS

#Rubber | ದೇಶದಲ್ಲಿ ನೈಸರ್ಗಿಕ ರಬ್ಬರ್ ಬಳಕೆ ಹೆಚ್ಚಳ | ಟಯರ್‌ ಉದ್ಯಮಕ್ಕೆ ಈ ಬಾರಿಯೂ ರಬ್ಬರ್‌ ಬೇಡಿಕೆ ನಿರೀಕ್ಷೆ | ರಬ್ಬರ್‌ ಉತ್ಪಾದನೆಯ ಕೊರತೆ |

Share

ಭಾರತದಲ್ಲಿ ನೈಸರ್ಗಿಕ ರಬ್ಬರ್‌ ವಲಯವು ಬೆಳೆಯುತ್ತಿದೆ. ದೇಶದಲ್ಲಿ ನೈಸರ್ಗಿಕ ರಬ್ಬರ್‌ನ ದೇಶೀಯ ಬಳಕೆಯು 2022-23ರಲ್ಲಿ 1,350,000 ಟನ್‌ಗಳಿಗೆ ತಲಪಿದೆ. 2021-22ರಲ್ಲಿ  1,238,000 ಟನ್‌ಗಳಿತ್ತು. ಹೀಗಾಗಿ ಶೇ.9 ರಷ್ಟು ರಬ್ಬರ್‌ ಬಳಕೆ ಹೆಚ್ಚಾಗಿದೆ. ಇದೇ ವೇಳೆ 2022-23ರಲ್ಲಿ ದೇಶದಲ್ಲಿ ನೈಸರ್ಗಿಕ ರಬ್ಬರ್  ಉತ್ಪಾದನೆಯು 839,000 ಟನ್‌ಗಳಾಗಿದ್ದು, ಶೇ 8.3 ಬೆಳವಣಿಗೆಯನ್ನು ದಾಖಲಿಸಿದೆ ಎಂದು ರಬ್ಬರ್ ಮಂಡಳಿಯ ಕಾರ್ಯನಿರ್ವಾಹಕ ನಿರ್ದೇಶಕ ಎಂ. ವಸಂತಗೇಸನ್ ಹೇಳಿದ್ದಾರೆ. 

Advertisement

ಅವರು ಕೊಟ್ಟಾಯಂನಲ್ಲಿ ರಬ್ಬರ್ ಮಂಡಳಿಯ 185 ನೇ ಸಭೆಯ ಅಧ್ಯಕ್ಷತೆ ವಹಿಸಿದ್ದರು. ದೇಶದಲ್ಲಿ ನೈಸರ್ಗಿಕ ರಬ್ಬರ್‌ನ ದೇಶೀಯ ಬಳಕೆಯು ಹೆಚ್ಚಾಗಿರುವುದು ಭಾರತದ ರಬ್ಬರ್‌ ಪ್ಲಾಟೇಂಶನ್‌ ಬೆಳೆಯಬೇಕಾದ ಸ್ಥಿತಿಯನ್ನು ಹೇಳುತ್ತದೆ. ಎಲ್ಲಾ ಸವಾಲುಗಳ ಹೊರತಾಗಿಯೂ ದೇಶೀಯ ನೈಸರ್ಗಿಕ ರಬ್ಬರ್ ವಲಯವು ಹಿಂದಿನ ವರ್ಷಕ್ಕೆ ಹೋಲಿಸಿದರೆ ಉತ್ಪಾದನೆ ಮತ್ತು ಬಳಕೆಯಲ್ಲಿ ಧನಾತ್ಮಕ ಬೆಳವಣಿಗೆಯನ್ನು ಕಂಡಿದೆ ಎಂದು ಅವರು ಹೇಳಿದರು.

ರಬ್ಬರ್ ಮಂಡಳಿಯ ಪ್ರಯತ್ನಗಳು ರಬ್ಬರ್‌ ಬೆಳೆಗಾರರಿಗೆ ಹಾಗೂ ರಬ್ಬರ್‌ ಬೆಳೆಗೆ ಅಗತ್ಯ ಮಾಹಿತಿ ಹಾಗೂ ಕ್ರಮಗಳನ್ನು ಕೈಗೊಂಡಿದೆ. ರಬ್ಬರ್ ಬೆಲೆಯಲ್ಲಿನ ಏರಿಳಿತಗಳು, ಹವಾಮಾನ ಬದಲಾವಣೆ, ಮಾರುಕಟ್ಟೆ ಸಮಸ್ಯೆಗಳು, ಕಾರ್ಮಿಕರ ಕೊರತೆ ಇತ್ಯಾದಿ ಸೇರಿದಂತೆ ಹಲವು ಸವಾಲುಗಳು ರಬ್ಬರ್ ವಲಯದಲ್ಲಿ ಮುಂದುವರಿದಿದೆ. ಪ್ಲಾಂಟೇಶನ್ ಕ್ಷೇತ್ರವನ್ನು ಹೆಚ್ಚು ಸುಸ್ಥಿರ ಮತ್ತು ಲಾಭದಾಯಕವಾಗಿಸಲು ತಳಮಟ್ಟದಲ್ಲಿ ಸೂಕ್ತ ಪರಿಹಾರಗಳನ್ನು ಕಂಡುಕೊಳ್ಳಬೇಕಾಗಿದೆ. ಪ್ರಸ್ತುತ ಸನ್ನಿವೇಶದಲ್ಲಿ, ರಬ್ಬರ್ ಉತ್ಪಾದಕರ ಸಂಘಗಳು(RPS)  ರಬ್ಬರ್ ಪ್ಲಾಂಟೇಶನ್ ವಲಯದಲ್ಲಿನ ವಿವಿಧ ಸವಾಲುಗಳನ್ನು ಎದುರಿಸಲು ತಮ್ಮ ಆಡಳಿತ ಮತ್ತು ಚಟುವಟಿಕೆಗಳಲ್ಲಿ ಮತ್ತಷ್ಟು ಸುಧಾರಣೆಯ ಅಗತ್ಯವಿದೆ ಎಂದು ರಬ್ಬರ್‌ ಮಂಡಳಿಯ ಡಾ. ಧನಾನಿಯಾ ಹೇಳಿದರು.

ರಬ್ಬರ್ ಮಂಡಳಿಯ ಕಾರ್ಯನಿರ್ವಾಹಕ ನಿರ್ದೇಶಕರಾದ  ಎಂ.ವಸಂತಗೇಸನ್ ಅವರು ಭಾರತೀಯ ರಬ್ಬರ್‌ ವಲಯ ಪ್ರಸ್ತುತ ಸ್ಥಿತಿಯನ್ನು ವಿವರಿಸಿದರು. ಈ ವರ್ಷ ರಬ್ಬರ್‌  ಉತ್ಪಾದನಾ ಸಾಮರ್ಥ್ಯ 1,482 ಕೆಜಿ/ಹೆಕ್ಟೇರ್‌ಗೆ ಏರಿಕೆಯಾಗಿದೆ. ಕಳೆದ ಸಾಲಿನಲ್ಲಿ 1,472 ಕೆಜಿ/ಹೆಕ್ಟೇರ್‌ ಆಗಿತ್ತು. ರಬ್ಬರ್‌ ಬಳಕೆಯಲ್ಲೂ ಹೆಚ್ಚುವರಿಯಾಗಿದೆ.

2022-23ರಲ್ಲಿ ಆಟೋ ಟೈರ್ ವಲಯವು 4.8% ರಷ್ಟು  ಪ್ರಗತಿಯನ್ನು ದಾಖಲಿಸಿದೆ. 2022-23 ರ ಅವಧಿಯಲ್ಲಿ ದೇಶದಲ್ಲಿ  70.3% ರಷ್ಟು ಆಟೋ-ಟೈರ್ ಉತ್ಪಾದನಾ ವಲಯವು ರಬ್ಬರ್‌ ಬೇಡಿಕೆಯನ್ನು ಹೊಂದಿತ್ತು.  2023-24ಕ್ಕೆ ರಬ್ಬರ್ ಉತ್ಪಾದನೆ ಮತ್ತು ಬಳಕೆಯನ್ನು ಕ್ರಮವಾಗಿ 875,000 ಟನ್‌ಗಳು ಮತ್ತು 1400,000 ಟನ್‌ಗಳು ಎಂದು ಅಂದಾಜಿಸಲಾಗಿದೆ.‌ ಅಂದರೆ ರಬ್ಬರ್‌ ಬೇಡಿಕೆ ಹೆಚ್ಚಾಗಿದೆ ಎನ್ನುವ ಸೂಚನೆ ಲಭಿಸಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

3 hours ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

1 day ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

1 day ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

1 day ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

1 day ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

1 day ago