Advertisement
MIRROR FOCUS

#Rubber | ದೇಶದಲ್ಲಿ ನೈಸರ್ಗಿಕ ರಬ್ಬರ್ ಬಳಕೆ ಹೆಚ್ಚಳ | ಟಯರ್‌ ಉದ್ಯಮಕ್ಕೆ ಈ ಬಾರಿಯೂ ರಬ್ಬರ್‌ ಬೇಡಿಕೆ ನಿರೀಕ್ಷೆ | ರಬ್ಬರ್‌ ಉತ್ಪಾದನೆಯ ಕೊರತೆ |

Share

ಭಾರತದಲ್ಲಿ ನೈಸರ್ಗಿಕ ರಬ್ಬರ್‌ ವಲಯವು ಬೆಳೆಯುತ್ತಿದೆ. ದೇಶದಲ್ಲಿ ನೈಸರ್ಗಿಕ ರಬ್ಬರ್‌ನ ದೇಶೀಯ ಬಳಕೆಯು 2022-23ರಲ್ಲಿ 1,350,000 ಟನ್‌ಗಳಿಗೆ ತಲಪಿದೆ. 2021-22ರಲ್ಲಿ  1,238,000 ಟನ್‌ಗಳಿತ್ತು. ಹೀಗಾಗಿ ಶೇ.9 ರಷ್ಟು ರಬ್ಬರ್‌ ಬಳಕೆ ಹೆಚ್ಚಾಗಿದೆ. ಇದೇ ವೇಳೆ 2022-23ರಲ್ಲಿ ದೇಶದಲ್ಲಿ ನೈಸರ್ಗಿಕ ರಬ್ಬರ್  ಉತ್ಪಾದನೆಯು 839,000 ಟನ್‌ಗಳಾಗಿದ್ದು, ಶೇ 8.3 ಬೆಳವಣಿಗೆಯನ್ನು ದಾಖಲಿಸಿದೆ ಎಂದು ರಬ್ಬರ್ ಮಂಡಳಿಯ ಕಾರ್ಯನಿರ್ವಾಹಕ ನಿರ್ದೇಶಕ ಎಂ. ವಸಂತಗೇಸನ್ ಹೇಳಿದ್ದಾರೆ. 

ಅವರು ಕೊಟ್ಟಾಯಂನಲ್ಲಿ ರಬ್ಬರ್ ಮಂಡಳಿಯ 185 ನೇ ಸಭೆಯ ಅಧ್ಯಕ್ಷತೆ ವಹಿಸಿದ್ದರು. ದೇಶದಲ್ಲಿ ನೈಸರ್ಗಿಕ ರಬ್ಬರ್‌ನ ದೇಶೀಯ ಬಳಕೆಯು ಹೆಚ್ಚಾಗಿರುವುದು ಭಾರತದ ರಬ್ಬರ್‌ ಪ್ಲಾಟೇಂಶನ್‌ ಬೆಳೆಯಬೇಕಾದ ಸ್ಥಿತಿಯನ್ನು ಹೇಳುತ್ತದೆ. ಎಲ್ಲಾ ಸವಾಲುಗಳ ಹೊರತಾಗಿಯೂ ದೇಶೀಯ ನೈಸರ್ಗಿಕ ರಬ್ಬರ್ ವಲಯವು ಹಿಂದಿನ ವರ್ಷಕ್ಕೆ ಹೋಲಿಸಿದರೆ ಉತ್ಪಾದನೆ ಮತ್ತು ಬಳಕೆಯಲ್ಲಿ ಧನಾತ್ಮಕ ಬೆಳವಣಿಗೆಯನ್ನು ಕಂಡಿದೆ ಎಂದು ಅವರು ಹೇಳಿದರು.

ರಬ್ಬರ್ ಮಂಡಳಿಯ ಪ್ರಯತ್ನಗಳು ರಬ್ಬರ್‌ ಬೆಳೆಗಾರರಿಗೆ ಹಾಗೂ ರಬ್ಬರ್‌ ಬೆಳೆಗೆ ಅಗತ್ಯ ಮಾಹಿತಿ ಹಾಗೂ ಕ್ರಮಗಳನ್ನು ಕೈಗೊಂಡಿದೆ. ರಬ್ಬರ್ ಬೆಲೆಯಲ್ಲಿನ ಏರಿಳಿತಗಳು, ಹವಾಮಾನ ಬದಲಾವಣೆ, ಮಾರುಕಟ್ಟೆ ಸಮಸ್ಯೆಗಳು, ಕಾರ್ಮಿಕರ ಕೊರತೆ ಇತ್ಯಾದಿ ಸೇರಿದಂತೆ ಹಲವು ಸವಾಲುಗಳು ರಬ್ಬರ್ ವಲಯದಲ್ಲಿ ಮುಂದುವರಿದಿದೆ. ಪ್ಲಾಂಟೇಶನ್ ಕ್ಷೇತ್ರವನ್ನು ಹೆಚ್ಚು ಸುಸ್ಥಿರ ಮತ್ತು ಲಾಭದಾಯಕವಾಗಿಸಲು ತಳಮಟ್ಟದಲ್ಲಿ ಸೂಕ್ತ ಪರಿಹಾರಗಳನ್ನು ಕಂಡುಕೊಳ್ಳಬೇಕಾಗಿದೆ. ಪ್ರಸ್ತುತ ಸನ್ನಿವೇಶದಲ್ಲಿ, ರಬ್ಬರ್ ಉತ್ಪಾದಕರ ಸಂಘಗಳು(RPS)  ರಬ್ಬರ್ ಪ್ಲಾಂಟೇಶನ್ ವಲಯದಲ್ಲಿನ ವಿವಿಧ ಸವಾಲುಗಳನ್ನು ಎದುರಿಸಲು ತಮ್ಮ ಆಡಳಿತ ಮತ್ತು ಚಟುವಟಿಕೆಗಳಲ್ಲಿ ಮತ್ತಷ್ಟು ಸುಧಾರಣೆಯ ಅಗತ್ಯವಿದೆ ಎಂದು ರಬ್ಬರ್‌ ಮಂಡಳಿಯ ಡಾ. ಧನಾನಿಯಾ ಹೇಳಿದರು.

ರಬ್ಬರ್ ಮಂಡಳಿಯ ಕಾರ್ಯನಿರ್ವಾಹಕ ನಿರ್ದೇಶಕರಾದ  ಎಂ.ವಸಂತಗೇಸನ್ ಅವರು ಭಾರತೀಯ ರಬ್ಬರ್‌ ವಲಯ ಪ್ರಸ್ತುತ ಸ್ಥಿತಿಯನ್ನು ವಿವರಿಸಿದರು. ಈ ವರ್ಷ ರಬ್ಬರ್‌  ಉತ್ಪಾದನಾ ಸಾಮರ್ಥ್ಯ 1,482 ಕೆಜಿ/ಹೆಕ್ಟೇರ್‌ಗೆ ಏರಿಕೆಯಾಗಿದೆ. ಕಳೆದ ಸಾಲಿನಲ್ಲಿ 1,472 ಕೆಜಿ/ಹೆಕ್ಟೇರ್‌ ಆಗಿತ್ತು. ರಬ್ಬರ್‌ ಬಳಕೆಯಲ್ಲೂ ಹೆಚ್ಚುವರಿಯಾಗಿದೆ.

2022-23ರಲ್ಲಿ ಆಟೋ ಟೈರ್ ವಲಯವು 4.8% ರಷ್ಟು  ಪ್ರಗತಿಯನ್ನು ದಾಖಲಿಸಿದೆ. 2022-23 ರ ಅವಧಿಯಲ್ಲಿ ದೇಶದಲ್ಲಿ  70.3% ರಷ್ಟು ಆಟೋ-ಟೈರ್ ಉತ್ಪಾದನಾ ವಲಯವು ರಬ್ಬರ್‌ ಬೇಡಿಕೆಯನ್ನು ಹೊಂದಿತ್ತು.  2023-24ಕ್ಕೆ ರಬ್ಬರ್ ಉತ್ಪಾದನೆ ಮತ್ತು ಬಳಕೆಯನ್ನು ಕ್ರಮವಾಗಿ 875,000 ಟನ್‌ಗಳು ಮತ್ತು 1400,000 ಟನ್‌ಗಳು ಎಂದು ಅಂದಾಜಿಸಲಾಗಿದೆ.‌ ಅಂದರೆ ರಬ್ಬರ್‌ ಬೇಡಿಕೆ ಹೆಚ್ಚಾಗಿದೆ ಎನ್ನುವ ಸೂಚನೆ ಲಭಿಸಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

5 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

5 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

7 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

10 hours ago