Advertisement
MIRROR FOCUS

ಡಿ.19 ರಬ್ಬರ್ ಬೆಳೆಗಾರರ ಸಮಾವೇಶ | ರಬ್ಬರ್ ಕೃಷಿಗೆ ಆರ್ಥಿಕ ನೆರವು |

Share

ರಬ್ಬರ್ ಮಂಡಳಿ ವತಿಯಿಂದ ರಬ್ಬರ್ ಬೆಳೆಗಾರರ ಸಮಾವೇಶ ಡಿಸೆಂಬರ್ 19 ರಂದು ಬೆಳಿಗ್ಗೆ 10 ಗಂಟೆಯಿಂದ ಎಸ್.ಡಿ.ಎಂ ಕಲಾಭವನ ಸಂತೆಕಟ್ಟೆ ಬೆಳ್ತಂಗಡಿಯಲ್ಲಿ ನಡೆಯಲಿದೆ.

ರಬ್ಬರ್ ಮಂಡಳಿಯ ಕಾರ್ಯನಿರ್ವಾಹಕ ನಿರ್ದೇಶಕರು, ಉತ್ಪನ್ನ ಆಯುಕ್ತ ಮತ್ತು ಹಿರಿಯ ಅಧಿಕಾರಿಗಳು ಈ ಸಮಾವೇಶದಲ್ಲಿ ಭಾಗವಹಿಸಿ ರಬ್ಬರ್ ಬೆಳೆಗಾರರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ರಬ್ಬರ್ ಮಂಡಳಿ ಮಂಗಳೂರು ಪ್ರಾದೇಶಿಕ ಕಚೇರಿ ಪ್ರಕಟಣೆ ತಿಳಿಸಿದೆ.

ರಬ್ಬರ್ ಕೃಷಿಗೆ ಆರ್ಥಿಕ ನೆರವು ನೀಡಲು ರಬ್ಬರ್ ಮಂಡಳಿಯಿಂದ 2023 ಮತ್ತು 2024ರಲ್ಲಿ ಮರುನಾಟಿ ಮಾಡಿದ ಅಥವಾ ಹೊಸದಾಗಿ ನಾಟಿ ಮಾಡಿದ ರಬ್ಬರ್ ಬೆಳೆಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಗರಿಷ್ಠ 5 ಹೆಕ್ಟೇರ್‍ಗಳ ವರೆಗೆ ರಬ್ಬರ್ ಪ್ರದೇಶವನ್ನು ಹೊಂದಿರುವವರು ಷರತ್ತುಗಳಿಗೆ ಒಳಪಟ್ಟು 5 ಹೆಕ್ಟೇರ್‍ಗೆ ಸಹಾಯಧನಕ್ಕೆ ಅರ್ಹರಾಗಿರುತ್ತಾರೆ. ಕೇಂದ್ರ ಸರ್ಕಾರದ “ಸರ್ವಿಸ್ ಪ್ಲಸ್” ಪೋರ್ಟಲ್ ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನ.

ಜಮೀನಿನ ಮಾಲೀಕತ್ವವನ್ನು ಸಾಬೀತುಪಡಿಸಲು ಗ್ರಾಮಾಧಿಕಾರಿಗಳ ಅರ್ಜಿಯೊಂದಿಗೆ ಪ್ರಮಾಣಪತ್ರ ಅಥವಾ ಪಹಣಿ ಪತ್ರ (RTC), ಸಾಗುವಳಿ ಜಮೀನಿನ ಗಡಿ ತೋರಿಸುವ ಅಂದಾಜು ನಕ್ಷೆ, ಆಧಾರ್ ಲಿಂಕ್ ಮಾಡಿದ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ರಬ್ಬರ್ ಸಸಿಗಳ ಖರೀದಿಸಿದ ಪುರಾವೆ/ರಶೀದಿ, ಜಂಟಿ ಮಾಲೀಕರು ಮತ್ತು ಅಪ್ರಾಪ್ತ ವಯಸ್ಕರಿದ್ದಲ್ಲಿ  ನಾಮನಿರ್ದೇಶನ ಪ್ರತಿಗಳನ್ನು ಅಪ್‍ಲೋಡ್ ಮಾಡಬೇಕು.

ಸಾಂಪ್ರದಾಯಿಕವಲ್ಲದ ಪ್ರದೇಶದಲ್ಲಿ ಸಬ್ಸಿಡಿ ಮೊತ್ತ ರೂ. 50,000/ಹೆಕ್ಟೇರ್‍ನಂತೆ 5 ಹೆಕ್ಟೇರ್‌ ಗೆ ಸೀಮಿತವಾಗಿದೆ. ರೂಟ್ ಟ್ರೈನರ್ ಸಸಿಗಳು ಅಥವಾ ಪಾಲಿ ಬ್ಯಾಗ್ ಸಸಿಗಳನ್ನು ಬಳಸಿ ಹೊಸನಾಟಿ ಮತ್ತು ಮರುನಾಟಿ ಮಾಡಿರುವ ಬೆಳೆಗಾರರಿಗೆ ಮತ್ತು ಗುಂಪುಗಳಿಗೆ ಪರಿವೀಕ್ಷಣೆ ನಂತರ ಅರ್ಹ ಆರ್ಥಿಕ ಸಹಾಯವನ್ನು ಮೊದಲ ವರ್ಷದಲ್ಲಿ ಪ್ರತಿ ಹೆಕ್ಟೇರಿಗೆ ರೂ 40,000 ಮತ್ತು 10,000 ದಂತೆ ಕಂತುಗಳಲ್ಲಿ ಬೆಳೆಗಾರರ ಖಾತೆಗೆ ಜಮಾ ಮಾಡಲಾಗುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

7 hours ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

8 hours ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

9 hours ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

22 hours ago

ಮಾರ್ಚ್‌ನಲ್ಲಿ‌ ಮಳೆ ಶಾಕ್….! ರೈತರಿಗೆ ನಷ್ಟದ ಭೀತಿ

ದೇಶದ ವಿವಿದೆಡೆ ಮಾರ್ಚ್‌ ತಿಂಗಳಲ್ಲಿ ಉತ್ತಮ ಮಳೆಯಾಗಿದೆ. ವಿಶೇಷವಾಗಿ ರಾಜ್ಕೋಟ್‌ನಲ್ಲಿ ಅಸಾಮಾನ್ಯ ಹವಾಮಾನದಿಂದ…

23 hours ago

ಕೃಷಿಕರಿಗೂ ಇದೆ ಹೋರ್ಮುಜ್‌ ಸಂಕಷ್ಟ…! ರಸಗೊಬ್ಬರ ಪೂರೈಕೆ ಆತಂಕ…? | ಪ್ರಧಾನಿ ನೇತೃತ್ವದಲ್ಲಿ ಸಭೆ

ಹೋರ್ಮುಜ್‌ ಜಲಸಂಧಿ ಸಂಕಷ್ಟದಿಂದ ಭಾರತಕ್ಕೆ ಗೊಬ್ಬರ ಮತ್ತು ಇಂಧನ ಪೂರೈಕೆ ಮೇಲೆ ಒತ್ತಡ…

1 day ago